22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ

ಬೆಳ್ತಂಗಡಿ: 70ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಬೆಳ್ತಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ ನಡೆಯಿತು.

ಗಮಕ ವಾಚನವನ್ನು ತಮ್ಮ ಸುಶ್ರಾವ್ಯ ಕಂಠದ ಮೂಲಕ ಮಧೂರು ವಿಷ್ಣು ಪ್ರಸಾದ ಕಲ್ಲೂರಾಯ ನಡೆಸಿಕೊಟ್ಟರು. ಗಮಕ ವ್ಯಾಖ್ಯಾನಕಾರರಾಗಿ ಪ್ರೊ| ಮಧೂರು ಮೋಹನ ಕಲ್ಲೂರಾಯ ಭಾಗವಹಿಸಿ ಪ್ರೇಕ್ಷಕರ ಮನ ಗೆದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಕುಮಾರ್ ಜೈನ್ ವಹಿಸಿದರು. ಮೋಹನ ಕಲ್ಲೂರಾಯರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಪ್ರಥಮ ಪಿಯುಸಿ ಪಠ್ಯ ಭಾಗದ ವಿಷಯವೇ ಗಮಕದಲ್ಲಿ ಆಯ್ಕೆ ಮಾಡಿಕೊಂಡ ಕಾರಣ ವಿದ್ಯಾರ್ಥಿಗಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.

ಉಪನ್ಯಾಸಕ ಆನಂದ ಸ್ವಾಗತಿಸಿ, ಉಪನ್ಯಾಸಕ ಶೀನಾ ನಾಡೋಳಿ ವಂದಿಸಿದರು. ಉಪನ್ಯಾಸಕಿ ಡಾ.ಅಮೃತ ರಶ್ಮಿ ಫೆರ್ನಾಂಡಿಸ್ ಕಾರ್ಯಕ್ರಮ ಉಪನ್ಯಾಸಕ ಡಾ. ಗಣೇಶ್ ಭಟ್ ಅವರು ಪ್ರಾಸ್ತಾವಿಕ ಮಾತನಾಡಿದರು.
ವೇದಿಕೆಯಲ್ಲಿ ಪ್ರೌಢಶಾಲಾ ವಿಭಾಗದ ಮುಖ್ಯಸ್ಥರಾದ ಪೂರ್ಣಿಮಾ ಉಪಸ್ಥಿತರಿದ್ದರು. ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗದ ಉಪನ್ಯಾಸಕರು, ಅಧ್ಯಾಪಕರು, ವಿದ್ಯಾರ್ಥಿಗಳು , ಬಿಇಡಿ ಪ್ರಶಿಕ್ಷಣಾರ್ಥಿಗಳು ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು.

Related posts

ಟಿ.ಬಿ ಕ್ರಾಸ್ – ಕುತ್ರೊಟ್ಟು ಸಂಪರ್ಕ ರಸ್ತೆ ದುರಸ್ಥಿ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ: ಚಿನ್ನಾಭರಣ, ನಗದು ದೋಚಿ ಪರಾರಿ

Suddi Udaya

ಬೆಳ್ತಂಗಡಿ : ಶ್ರೀಮತಿ ಆಲಿಸ್ ಪಿರೇರಾ ನಿಧನ

Suddi Udaya

ಧರ್ಮಸ್ಥಳ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ಮತ್ತು ಉಪನ್ಯಾಸಕರುಗಳ ವಾರ್ಷಿಕ ಕಾರ್ಯಾಗಾರ

Suddi Udaya

ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ -123 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ ಪ್ರವೇಶ -52 ವಷ೯ಗಳಲ್ಲಿ ಒಟ್ಟು 12,900 ಮಂದಿಯ ವಿವಾಹ

Suddi Udaya

ಧರ್ಮಸ್ಥಳ : ಮುಂಡ್ರುಪ್ಪಾಡಿ ನಿವಾಸಿ ಹರೀಶ್ ಎಮ್.ಎಲ್. ನಿಧನ

Suddi Udaya
error: Content is protected !!