23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿವರದಿ

ಮಲವಂತಿಗೆ : ಕೃಷಿಕನನ್ನು ಒಕ್ಕೆಲಬ್ಬಿಸಿ ಕೃಷಿಯನ್ನು ಸಂಪೂರ್ಣ ನಾಶ ಪಡಿಸಿದ ಅರಣ್ಯ ಇಲಾಖೆ

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಕುದುರೇಮುಖ ರಾಷ್ಟ್ರೀಯ ಉದ್ಯಾನವನದೊಳಗೆ ಅರಸಿನಮಕ್ಕಿ ಎಂಬಲ್ಲಿನ ನಿವಾಸಿ ಪಿ.ಟಿ ಜೋಸೆಫ್ ಎಂಬವರನ್ನು ಅ.31ರಂದು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಒಕ್ಕೆಲಬ್ಬಿಸಿದ್ದು ಅವರ ಕೃಷಿಯನ್ನು ಸಂಪೂರ್ಣ ವಾಗಿ ನಾಶ ಪಡಿಸಿ ಇಲ್ಲಿ ಅರಣ್ಯ ಗಿಡಗಳನ್ನು ನೆಟ್ಟಿದ್ದಾರೆ.

ಕಳೆದ ಐದು ದಶಕದಿಂದಲೂ ಇಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ನೀಡಲಾಗಿದ್ದ ಹಕ್ಕು ಪತ್ರವನ್ನು ರದ್ದುಪಡಿಸಿದ ಅರಣ್ಯ ಇಲಾಖೆ ಇದೀಗ ಯಾವುದೇ ಪರಿಹಾರವನ್ನೂ ನೀಡಿದೆ ಏಕಾಏಕಿ ಒಕ್ಕಲೆಬ್ಬಿಸಿ ಅವರ ಮನೆ ಹಾಗೂ ಕೃಷಿ ಭೂಮಿಯಿಂದ ಹೊರಗೆ ಕಳುಹಿಸಿದ್ದು ಬೇರೆ ಜಮೀನಾಗಲಿ ಮನೆಯಾಗಲಿ ಇಲ್ಲದ ಈ ಕುಟುಂಬ ಬೀದಿಪಾಲಾದಂತಾಗಿದೆ.

ಇವರು ಕಳೆದ 50ವರ್ಷಗಳಿಂದ ಇವರು ಬದುಕಿದ್ದ ಮನೆಯನ್ನು ನಾಶಪಡಿಸಲಾಗಿದ್ದು ಸುಮಾರು ಎರಡು ಎಕ್ರೆ ಜಾಗದಲ್ಲಿದ್ದ ಫಲಕೊಡುವ ಅಡಿಕೆ ಮರಗಳನ್ನು ತೆಂಗಿನ ಮರಗಳನ್ನು ಹಾಗೂ ಇತರ ಕೃಷಿಯನ್ನು ಪೂರ್ಣ ಕಡಿದುರುಳಿಸಲಾಗಿದ್ದು ಅರಣ್ಯ ಇಲಾಖೆಯ ಬೋರ್ಡ್ ಅಳವಡಿಸಲಾಗಿದೆ.

1970 ರ ಸುಮಾರಿಗೆ ಪಿಟಿ ಜೋಸೆಫ್ ಅವರ ತಂದೆ ಇಲ್ಲಿ ಬಂದು ನೆಲೆಸಿದ್ದು 1997ರಲ್ಲಿ ಇವರಿಗೆ ರಾಜ್ಯ ಸರಕಾರ‌ ಅಕ್ರಮ ಸಕ್ರಮ ಕಾನೂನಿನ ಅಡಿಯಲ್ಲಿ 4.90 ಎಕ್ರೆ ಜಮೀನಿಗೆ ಹಕ್ಕು ಪತ್ರವನ್ನೂ ನೀಡಿತ್ತು. ಯಾವಾಗ ಕುದುರೇ ಮುಖ ರಾಷ್ಟ್ರೀಯ ಉದ್ಯಾನವನ ಘೋಷಣೆಯಾದ ಬಳಿಕ ಇವರಿಗೆ ಸಮಸ್ಯೆಗಳು ಆರಂಭವಾಯಿತು. 2004ರಲ್ಲಿ ಇವರ ಹಕ್ಕು ಪತ್ರವನ್ನು ರದ್ದು ಪಡಿಸಲಾಯಿತು. 2014ರಲ್ಲಿ ಅರಣ್ಯ ಇಲಾಖೆ ಜೋಸೆಫ್ ಅವರಿಗೆ ಮತ್ತೆ ನೋಟೀಸ್ ನೀಡಿ ಒಕ್ಕಲೇಳುವಂತೆ ಸೂಚಿಸಿತ್ತು. ಇದರ ವಿರುದ್ದ ಅವರು ಅರಣ್ಯ ಇಲಾಖೆಯಲ್ಲಿ ಸಲ್ಲಿಸಿದ್ದ ಮೇಲ್ಮನವಿಗಳು ತಿರಸ್ಕಾರಗೊಂಡಿತ್ತು. ಇವರಿಗೆ ಒಕ್ಕಲೇಳು ವಂತೆ ಅ16 ರಂದು ಅಂತಿಮ ನೋಟೀಸ್ ನೀಡಿ ಅ30 ರೊಳಗೆ ಸ್ಥಳ ಬಿಟ್ಟು ತೆರಳುವಂತೆ ಸೂಚಿಸಿತ್ತು. ಇದೀಗ ಅ 31ರಂದು ಪೊಲೀಸ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳ ಸಹಕಾರದಿಂದಿಗೆ ಆಗಮಿಸಿದ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಶರ್ಮಿಷ್ಠ ನೇತೃತ್ವದ ತಂಡ ಕೃಷಿಯನ್ನು ಹಾಗೂ ಮನೆಯನ್ನು ಸಂಪೂರ್ಣವಾಗಿ ನಾಶಪಡಿಸಿ ಒಕ್ಕಲೆಬ್ಬಿಸುವಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ.

Related posts

ಅಳದಂಗಡಿ ಸಂತ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

Suddi Udaya

ಸೆ.28 : ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

Suddi Udaya

ಕರಂಬಾರು ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಮಕ್ಕಳ ಮೆಟ್ರಿಕ್‌ ಮೇಳ ಕಾರ್ಯಕ್ರಮ

Suddi Udaya

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya
error: Content is protected !!