37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮೂಲ ಸೌಕರ್ಯದಿಂದ ವಂಚಿತವಾಗಿದೆ ಬಂಗಾಡಿ ಅಂಗನವಾಡಿ ಕೇಂದ್ರ: ಸಮಸ್ಯೆಯನ್ನು ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹ

ಇಂದಬೆಟ್ಟು: ಇಲ್ಲಿಯ ಬಂಗಾಡಿ 2ನೇ ವಾರ್ಡ್ ನಲ್ಲಿರುವ ರೂ. 16 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಅಂಗನವಾಡಿ ಕೇಂದ್ರದಲ್ಲಿ ಪ್ರಾರಂಭದಲ್ಲಿ 20-25 ಮಕ್ಕಳಿದ್ದು, ಈಗ ಇಲ್ಲಿ ಹಲವು ಸಮಯಗಳಿಂದ ಕುಡಿಯಲು ಹಾಗೂ ಶೌಚಾಲಯಕ್ಕೆ ನೀರೆ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ.

ಪಂಚಾಯಿಂದ ಬರುವ ನಳ್ಳಿ ನೀರು ಅಂಗನವಾಡಿ ವರೆಗೆ ತಲುಪುವುದೇ ಇಲ್ಲ, ಮಕ್ಕಳು ಶೌಚಾಲಯವಿದ್ದರು ನೀರಿಲ್ಲದ ಕಾರಣ ಅಂಗನವಾಡಿಯ ಹೊರಗಡೆ ಬರಬೇಕು. ಇದರ ಸುತ್ತಮುತ್ತ ಸರಿಯಾದ ಕಂಪೌಂಡ್ ಇಲ್ಲ. ಬದಿಯಲ್ಲೆ ದೊಡ್ಡ ಹೊಂಡಗಳಿದ್ದು ಮಕ್ಕಳಿಗೆ ಅಪಾಯಕಾರಿಯಾಗಿದೆ. ಸುತ್ತಮುತ್ತ ಗೋಡೆ ಬದಿಯಲ್ಲೆ ಗಿಡ ಗಂಟಿಗಳು ಬೆಳೆದು ಹಾವು, ಹೆಗ್ಗಣಗಳ ವಾಸ ಸ್ಥಳವಾಗಿದೆ. ಸರಿಯಾದ ವ್ಯವಸ್ಥೆ ಇಲ್ಲದೆ ಪೊಷಕರು ಮಕ್ಕಳನ್ನು ಅಂಗನವಾಡಿಗೆ ಕಳುಹಿಸಲು ಹಿಂಜರಿಯುತ್ತಿದ್ದಾರೆ. ಈಗ 10-12 ಮಕ್ಕಳಿದ್ದು, ಪೊಷಕರೇ ಬಂದು ಬಕೆಟ್, ಕೊಡಪಾನಗಳಲ್ಲಿ ಹತ್ತಿರದ ಮನೆಗಳಿಂದ ಕುಡಿಯಲು ನೀರು ತರುವಂತಾಗಿದೆ.

ಆದರಿಂದ ಸಂಬಂಧಪಟ್ಟ ಅಧಿಕಾರಿಗಳು, ಮೇಲ್ವಿಚಾರಕರು ಇದರ ಕಡೆ ಗಮನಹರಿಸಿ ಶೀಘ್ರದಲ್ಲಿ ಸರಿಯಾದ ವ್ಯವಸ್ಥೆಯನ್ನು ಕಲ್ಪಿಸುವಂತೆ ಸಾರ್ವಜನಿಕ ಆಗ್ರಹವಾಗಿದೆ.

Related posts

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಚುನಾವಣೆ: ಸತತ ಎರಡನೇ ಅವಧಿಗೆ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತರು

Suddi Udaya

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಮತ್ತು ದಿ.ಮಾಚಾರು ಗೋಪಾಲ ನಾಯ್ಕರ ಸಂಸ್ಮರಣೆ

Suddi Udaya

ಮರೋಡಿ: ವಿದ್ಯುತ್ ಪರಿವರ್ತಕದಿಂದ ಬೆಂಕಿ ಅವಘಡ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 101 ಎಳನೀರು ಅಭಿಷೇಕ, ನವಕ ಕಲಶ ಅಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!