July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮೂಲ ಸೌಕರ್ಯದಿಂದ ವಂಚಿತವಾಗಿದೆ ಬಂಗಾಡಿ ಅಂಗನವಾಡಿ ಕೇಂದ್ರ: ಸಮಸ್ಯೆಯನ್ನು ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹ

ಇಂದಬೆಟ್ಟು: ಇಲ್ಲಿಯ ಬಂಗಾಡಿ 2ನೇ ವಾರ್ಡ್ ನಲ್ಲಿರುವ ರೂ. 16 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಅಂಗನವಾಡಿ ಕೇಂದ್ರದಲ್ಲಿ ಪ್ರಾರಂಭದಲ್ಲಿ 20-25 ಮಕ್ಕಳಿದ್ದು, ಈಗ ಇಲ್ಲಿ ಹಲವು ಸಮಯಗಳಿಂದ ಕುಡಿಯಲು ಹಾಗೂ ಶೌಚಾಲಯಕ್ಕೆ ನೀರೆ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ.

ಪಂಚಾಯಿಂದ ಬರುವ ನಳ್ಳಿ ನೀರು ಅಂಗನವಾಡಿ ವರೆಗೆ ತಲುಪುವುದೇ ಇಲ್ಲ, ಮಕ್ಕಳು ಶೌಚಾಲಯವಿದ್ದರು ನೀರಿಲ್ಲದ ಕಾರಣ ಅಂಗನವಾಡಿಯ ಹೊರಗಡೆ ಬರಬೇಕು. ಇದರ ಸುತ್ತಮುತ್ತ ಸರಿಯಾದ ಕಂಪೌಂಡ್ ಇಲ್ಲ. ಬದಿಯಲ್ಲೆ ದೊಡ್ಡ ಹೊಂಡಗಳಿದ್ದು ಮಕ್ಕಳಿಗೆ ಅಪಾಯಕಾರಿಯಾಗಿದೆ. ಸುತ್ತಮುತ್ತ ಗೋಡೆ ಬದಿಯಲ್ಲೆ ಗಿಡ ಗಂಟಿಗಳು ಬೆಳೆದು ಹಾವು, ಹೆಗ್ಗಣಗಳ ವಾಸ ಸ್ಥಳವಾಗಿದೆ. ಸರಿಯಾದ ವ್ಯವಸ್ಥೆ ಇಲ್ಲದೆ ಪೊಷಕರು ಮಕ್ಕಳನ್ನು ಅಂಗನವಾಡಿಗೆ ಕಳುಹಿಸಲು ಹಿಂಜರಿಯುತ್ತಿದ್ದಾರೆ. ಈಗ 10-12 ಮಕ್ಕಳಿದ್ದು, ಪೊಷಕರೇ ಬಂದು ಬಕೆಟ್, ಕೊಡಪಾನಗಳಲ್ಲಿ ಹತ್ತಿರದ ಮನೆಗಳಿಂದ ಕುಡಿಯಲು ನೀರು ತರುವಂತಾಗಿದೆ.

ಆದರಿಂದ ಸಂಬಂಧಪಟ್ಟ ಅಧಿಕಾರಿಗಳು, ಮೇಲ್ವಿಚಾರಕರು ಇದರ ಕಡೆ ಗಮನಹರಿಸಿ ಶೀಘ್ರದಲ್ಲಿ ಸರಿಯಾದ ವ್ಯವಸ್ಥೆಯನ್ನು ಕಲ್ಪಿಸುವಂತೆ ಸಾರ್ವಜನಿಕ ಆಗ್ರಹವಾಗಿದೆ.

Related posts

ಮದ್ದಡ್ಕ ತಾಯಿ‌ ಪಿಲಿಚಾಮುಂಡಿ‌ ದೈವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ

Suddi Udaya

ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳಾಲು ಪ್ರೌಢಶಾಲೆ ಆರಂಭೋತ್ಸವ

Suddi Udaya

ಎಸ್.ಐ.ಆರ್ ಮಾಹಿತಿಗಾಗಿ ನೇಮಿಸಲ್ಪಟ್ಟ ಬೂತ್ ಮಟ್ಟದ ಅಧಿಕಾರಿಗಳ ವಿಳಂಬ ನೀತಿಯ ಬಗ್ಗೆ ಬೆಳ್ತಂಗಡಿ ಎಸ್‌ಡಿಪಿಐ ಯಿಂದ ತಹಸೀಲ್ದಾರ್ ದೂರು

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಎಂಟು ಮಂದಿ ನಾಮನಿರ್ದೇಶಿತ ಸದಸ್ಯರ ನೇಮಕ

Suddi Udaya

ಬಿ.ಸಿ.ರೋಡ್ ಬಸ್‌ ನಿಲ್ದಾಣದಲ್ಲಿ ಯುವತಿಯ ಹತ್ಯೆ : ಆರೋಪಿ ಪರಾರಿ

Suddi Udaya
error: Content is protected !!