25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮೂಲ ಸೌಕರ್ಯದಿಂದ ವಂಚಿತವಾಗಿದೆ ಬಂಗಾಡಿ ಅಂಗನವಾಡಿ ಕೇಂದ್ರ: ಸಮಸ್ಯೆಯನ್ನು ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹ

ಇಂದಬೆಟ್ಟು: ಇಲ್ಲಿಯ ಬಂಗಾಡಿ 2ನೇ ವಾರ್ಡ್ ನಲ್ಲಿರುವ ರೂ. 16 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಅಂಗನವಾಡಿ ಕೇಂದ್ರದಲ್ಲಿ ಪ್ರಾರಂಭದಲ್ಲಿ 20-25 ಮಕ್ಕಳಿದ್ದು, ಈಗ ಇಲ್ಲಿ ಹಲವು ಸಮಯಗಳಿಂದ ಕುಡಿಯಲು ಹಾಗೂ ಶೌಚಾಲಯಕ್ಕೆ ನೀರೆ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ.

ಪಂಚಾಯಿಂದ ಬರುವ ನಳ್ಳಿ ನೀರು ಅಂಗನವಾಡಿ ವರೆಗೆ ತಲುಪುವುದೇ ಇಲ್ಲ, ಮಕ್ಕಳು ಶೌಚಾಲಯವಿದ್ದರು ನೀರಿಲ್ಲದ ಕಾರಣ ಅಂಗನವಾಡಿಯ ಹೊರಗಡೆ ಬರಬೇಕು. ಇದರ ಸುತ್ತಮುತ್ತ ಸರಿಯಾದ ಕಂಪೌಂಡ್ ಇಲ್ಲ. ಬದಿಯಲ್ಲೆ ದೊಡ್ಡ ಹೊಂಡಗಳಿದ್ದು ಮಕ್ಕಳಿಗೆ ಅಪಾಯಕಾರಿಯಾಗಿದೆ. ಸುತ್ತಮುತ್ತ ಗೋಡೆ ಬದಿಯಲ್ಲೆ ಗಿಡ ಗಂಟಿಗಳು ಬೆಳೆದು ಹಾವು, ಹೆಗ್ಗಣಗಳ ವಾಸ ಸ್ಥಳವಾಗಿದೆ. ಸರಿಯಾದ ವ್ಯವಸ್ಥೆ ಇಲ್ಲದೆ ಪೊಷಕರು ಮಕ್ಕಳನ್ನು ಅಂಗನವಾಡಿಗೆ ಕಳುಹಿಸಲು ಹಿಂಜರಿಯುತ್ತಿದ್ದಾರೆ. ಈಗ 10-12 ಮಕ್ಕಳಿದ್ದು, ಪೊಷಕರೇ ಬಂದು ಬಕೆಟ್, ಕೊಡಪಾನಗಳಲ್ಲಿ ಹತ್ತಿರದ ಮನೆಗಳಿಂದ ಕುಡಿಯಲು ನೀರು ತರುವಂತಾಗಿದೆ.

ಆದರಿಂದ ಸಂಬಂಧಪಟ್ಟ ಅಧಿಕಾರಿಗಳು, ಮೇಲ್ವಿಚಾರಕರು ಇದರ ಕಡೆ ಗಮನಹರಿಸಿ ಶೀಘ್ರದಲ್ಲಿ ಸರಿಯಾದ ವ್ಯವಸ್ಥೆಯನ್ನು ಕಲ್ಪಿಸುವಂತೆ ಸಾರ್ವಜನಿಕ ಆಗ್ರಹವಾಗಿದೆ.

Related posts

ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್‌ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ ಉದ್ಘಾಟನೆ

Suddi Udaya

ಕೊಯ್ಯೂರು ಗ್ರಾಮದಲ್ಲಿ ನೆಟ್ವರ್ಕ್ ಸಮಸ್ಯೆ, ಏರ್ ಟೆಲ್ ಸಂಸ್ಥೆಯ ಗಮನಕ್ಕೆ ತಂದರೂ ನಿರ್ಲಕ್ಷ್ಯ ಧೋರಣೆ: ಸಮಸ್ಯೆ ಬಗೆಹರಿಸುವಂತೆ ಸಾರ್ವಜನಿಕರ ಪರವಾಗಿ ಅಶೋಕ್ ಪೂಜಾರಿ ಬಜಿಲ ಒತ್ತಾಯ

Suddi Udaya

ಇಂದಬೆಟ್ಟು ವಲಯದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ವಲಯ ಸಭೆ

Suddi Udaya

ಲಾಯಿಲ: ಕಾಣೆಯಾಗಿದ್ದ ಸೂಚನ ಫಲಕ : ಆವರಿಸಿದ್ದ ಗಿಡ ಗಂಟಿಗಳ ತೆರವು: “ಸುದ್ದಿ ಉದಯ” ಜನಧ್ವನಿ Effect

Suddi Udaya
error: Content is protected !!