23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮೂಲ ಸೌಕರ್ಯದಿಂದ ವಂಚಿತವಾಗಿದೆ ಬಂಗಾಡಿ ಅಂಗನವಾಡಿ ಕೇಂದ್ರ: ಸಮಸ್ಯೆಯನ್ನು ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹ

ಇಂದಬೆಟ್ಟು: ಇಲ್ಲಿಯ ಬಂಗಾಡಿ 2ನೇ ವಾರ್ಡ್ ನಲ್ಲಿರುವ ರೂ. 16 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಅಂಗನವಾಡಿ ಕೇಂದ್ರದಲ್ಲಿ ಪ್ರಾರಂಭದಲ್ಲಿ 20-25 ಮಕ್ಕಳಿದ್ದು, ಈಗ ಇಲ್ಲಿ ಹಲವು ಸಮಯಗಳಿಂದ ಕುಡಿಯಲು ಹಾಗೂ ಶೌಚಾಲಯಕ್ಕೆ ನೀರೆ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ.

ಪಂಚಾಯಿಂದ ಬರುವ ನಳ್ಳಿ ನೀರು ಅಂಗನವಾಡಿ ವರೆಗೆ ತಲುಪುವುದೇ ಇಲ್ಲ, ಮಕ್ಕಳು ಶೌಚಾಲಯವಿದ್ದರು ನೀರಿಲ್ಲದ ಕಾರಣ ಅಂಗನವಾಡಿಯ ಹೊರಗಡೆ ಬರಬೇಕು. ಇದರ ಸುತ್ತಮುತ್ತ ಸರಿಯಾದ ಕಂಪೌಂಡ್ ಇಲ್ಲ. ಬದಿಯಲ್ಲೆ ದೊಡ್ಡ ಹೊಂಡಗಳಿದ್ದು ಮಕ್ಕಳಿಗೆ ಅಪಾಯಕಾರಿಯಾಗಿದೆ. ಸುತ್ತಮುತ್ತ ಗೋಡೆ ಬದಿಯಲ್ಲೆ ಗಿಡ ಗಂಟಿಗಳು ಬೆಳೆದು ಹಾವು, ಹೆಗ್ಗಣಗಳ ವಾಸ ಸ್ಥಳವಾಗಿದೆ. ಸರಿಯಾದ ವ್ಯವಸ್ಥೆ ಇಲ್ಲದೆ ಪೊಷಕರು ಮಕ್ಕಳನ್ನು ಅಂಗನವಾಡಿಗೆ ಕಳುಹಿಸಲು ಹಿಂಜರಿಯುತ್ತಿದ್ದಾರೆ. ಈಗ 10-12 ಮಕ್ಕಳಿದ್ದು, ಪೊಷಕರೇ ಬಂದು ಬಕೆಟ್, ಕೊಡಪಾನಗಳಲ್ಲಿ ಹತ್ತಿರದ ಮನೆಗಳಿಂದ ಕುಡಿಯಲು ನೀರು ತರುವಂತಾಗಿದೆ.

ಆದರಿಂದ ಸಂಬಂಧಪಟ್ಟ ಅಧಿಕಾರಿಗಳು, ಮೇಲ್ವಿಚಾರಕರು ಇದರ ಕಡೆ ಗಮನಹರಿಸಿ ಶೀಘ್ರದಲ್ಲಿ ಸರಿಯಾದ ವ್ಯವಸ್ಥೆಯನ್ನು ಕಲ್ಪಿಸುವಂತೆ ಸಾರ್ವಜನಿಕ ಆಗ್ರಹವಾಗಿದೆ.

Related posts

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಕೊಕ್ಕಡ ವಿಶ್ವ ಹಿಂದೂ ಪರಿಷದ್ , ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್, ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಜು.30: ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ. ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ ನಾರಾವಿಯ ಮಹಿಳೆ ಮೃತ್ಯು

Suddi Udaya

ಬೆದ್ರಬೆಟ್ಟು ರಿಫಾಯಿಯ್ಯ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ಆಚರಣೆ

Suddi Udaya

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!