August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅನುಗ್ರಹ  ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನ. 1 ರಂದು 70ನೇ ಕನ್ನಡ ರಾಜ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.

ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ವಂ ಫಾ! ಅಬೆಲ್ ಲೋಬೊ ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ವಂ! ಫಾ ವಿಜಯ್ ಲೋಬೊ, ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಾಲಾ ಸಂಚಾಲಕರು ರಾಷ್ಟ್ರಧ್ವಜ ಹಾಗೂ ನಾಡ ಧ್ವಜವನ್ನು ಆರೋಹಿಸಿದರು. ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಗೂ ನಾಡಗೀತೆಯನ್ನು ಹಾಡುವುದರ ಮೂಲಕ ಗೌರವವನ್ನು  ಅರ್ಪಿಸಿದರು.

10ನೇ ತರಗತಿ ವಿದ್ಯಾರ್ಥಿನಿ ಶ್ರೇಯಾ ಕನ್ನಡ ರಾಜ್ಯೋತ್ಸವದ ಮಹತ್ವವನ್ನು ಕುರಿತು ಮಾತನಾಡಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಸಂಚಾಲಕರು ಕನ್ನಡ ಭಾಷೆ ಸಾಹಿತ್ಯ ಬೆಳೆದು ಬಂದ ದಾರಿ, ಕನ್ನಡದ ಸ್ಥಾನಮಾನ ಮತ್ತು ಭಾಷೆಯ ಉಳಿವಿಗಾಗಿ ಕನ್ನಡಿಗರು ಮಾಡಬೇಕಾದ ಕಾರ್ಯಗಳನ್ನು ಕುರಿತು ಮಾತನಾಡಿದರು. ನಂತರ ವಿದ್ಯಾರ್ಥಿಗಳು ಕನ್ನಡ ನಾಡು ನುಡಿ ಕುರಿತ ಹಾಡು ನೃತ್ಯಗಳ ಮೂಲಕ ರಂಜಿಸಿದರು. ವಿದ್ಯಾರ್ಥಿಗಳಾದ  ಪ್ರತೀಕ್ಷ ಶೆಟ್ಟಿ ಸ್ವಾಗತಿಸಿ ಸಿಂಚನ ವಂದಿಸಿ ಅಂಶಿಕ ಕಾರ್ಯಕ್ರಮ ನಿರೂಪಿಸಿದರು.

Related posts

ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಬೈಕ್ ಸವಾರ ಸಾವು

Suddi Udaya

ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತಿಗಾರರ ಸಂಘದ ಅಧ್ಯಕ್ಷರಾಗಿ ಸಂದೇಶ್, ಕಾರ್ಯದರ್ಶಿಯಾಗಿ ವಿ ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಆಯ್ಕೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ವತಿಯಿಂದ ರಸ್ತೆ ಬದಿ ಶ್ರಮದಾನ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya

ಗುರುವಾಯನಕೆರೆ ಶ್ರೀ ಪತಂಜಲಿ ಯೋಗ ಶಿಕ್ಷಣ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಉಜಿರೆ ಎಸ್‌.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ ಶೈಕ್ಷಣಿಕ ಚಟುವಟಿಕಾ ಸಂಘಗಳ ಉದ್ಘಾಟನೆ

Suddi Udaya
error: Content is protected !!