31.1 C
ಪುತ್ತೂರು, ಬೆಳ್ತಂಗಡಿ
June 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅನುಗ್ರಹ  ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನ. 1 ರಂದು 70ನೇ ಕನ್ನಡ ರಾಜ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.

ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ವಂ ಫಾ! ಅಬೆಲ್ ಲೋಬೊ ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ವಂ! ಫಾ ವಿಜಯ್ ಲೋಬೊ, ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಾಲಾ ಸಂಚಾಲಕರು ರಾಷ್ಟ್ರಧ್ವಜ ಹಾಗೂ ನಾಡ ಧ್ವಜವನ್ನು ಆರೋಹಿಸಿದರು. ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಗೂ ನಾಡಗೀತೆಯನ್ನು ಹಾಡುವುದರ ಮೂಲಕ ಗೌರವವನ್ನು  ಅರ್ಪಿಸಿದರು.

10ನೇ ತರಗತಿ ವಿದ್ಯಾರ್ಥಿನಿ ಶ್ರೇಯಾ ಕನ್ನಡ ರಾಜ್ಯೋತ್ಸವದ ಮಹತ್ವವನ್ನು ಕುರಿತು ಮಾತನಾಡಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಸಂಚಾಲಕರು ಕನ್ನಡ ಭಾಷೆ ಸಾಹಿತ್ಯ ಬೆಳೆದು ಬಂದ ದಾರಿ, ಕನ್ನಡದ ಸ್ಥಾನಮಾನ ಮತ್ತು ಭಾಷೆಯ ಉಳಿವಿಗಾಗಿ ಕನ್ನಡಿಗರು ಮಾಡಬೇಕಾದ ಕಾರ್ಯಗಳನ್ನು ಕುರಿತು ಮಾತನಾಡಿದರು. ನಂತರ ವಿದ್ಯಾರ್ಥಿಗಳು ಕನ್ನಡ ನಾಡು ನುಡಿ ಕುರಿತ ಹಾಡು ನೃತ್ಯಗಳ ಮೂಲಕ ರಂಜಿಸಿದರು. ವಿದ್ಯಾರ್ಥಿಗಳಾದ  ಪ್ರತೀಕ್ಷ ಶೆಟ್ಟಿ ಸ್ವಾಗತಿಸಿ ಸಿಂಚನ ವಂದಿಸಿ ಅಂಶಿಕ ಕಾರ್ಯಕ್ರಮ ನಿರೂಪಿಸಿದರು.

Related posts

ಮಡಂತ್ಯಾರು ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ ಹತ್ತನೇ ವರ್ಷದ ವಾರ್ಷಿಕೋತ್ಸವ

Suddi Udaya

ಪದ್ಮಂಜ ಸೇವಾ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

‌ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ: ಪರಿಶೀಲನೆ

Suddi Udaya

ನೆರಿಯ ಪ್ರದೇಶದಲ್ಲಿ ಭಾರೀ ಮಳೆ ಸೇತುವೆ ಮತ್ತೆ ಮುಳುಗಡೆ ಆತಂಕದಲ್ಲಿ ಜನತೆ

Suddi Udaya

ಉಜಿರೆ ಖಲೀಫಾ ಜುಮಾ ಮಸೀದಿ ಹಾಗೂ ಅಲ್ ಬದ್ರಿಯಾ ಅರೇಬಿಕ್ ಮದರಸ ಕಮಿಟಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya
error: Content is protected !!