23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದೀಪಾವಳಿ ಸಂಭ್ರಮ

ಉಜಿರೆ:”ಸಾಂಪ್ರದಾಯಿಕ ಆಚರಣೆಗಳ ಅರಿವು ವಿದ್ಯಾರ್ಥಿಗಳಿಗೆ ಬಹುಮುಖ್ಯ. ದೀಪಾವಳಿ ಕುಟುಂಬದ ಎಲ್ಲಾ ಸದಸ್ಯರನ್ನು ಒಗ್ಗೂಡಿಸುವ ಹಬ್ಬ” ಎಂದು ಧರ್ಮಸ್ಥಳ ಮಂಜುನಾಥೇಶ್ವರ ಕನ್ಸ್ಟ್ರಕ್ಷನ್ ನ ಯೋಜನಾ ಇಂಜಿನಿಯರ್ ಯಶೋಧರ ಹೇಳಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಆಚರಿಸಿದ ದೀಪಾವಳಿ ಆಚರಣೆಯ ಮುಖ್ಯ ಅತಿಥಿಯಾಗಿ ಆಗಮಿಸಿ, ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮೌಲ್ಯಾಧಾರಿತ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ದೀಪಾವಳಿ ಹಬ್ಬದ ಆಚರಣೆಗಳಾದ ನರಕ ಚತುರ್ದಶಿ, ಗೋ ಪೂಜೆ, ಬಲಿಯೇಂದ್ರ ಪೂಜೆ, ಲಕ್ಷ್ಮೀ ಪೂಜೆ ಹಾಗೂ ತುಳಸಿ ಪೂಜೆ ಮಾಡಿ ಗುಂಪುಗಾಯನ ಹಾಗೂ ನೃತ್ಯ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಇನ್ನೊರ್ವ ಅತಿಥಿಗಳಾಗಿ ಧರ್ಮಸ್ಥಳ ಮಂಜುನಾಥೇಶ್ವರ ಕನ್ಸ್ಟ್ರಕ್ಷನ್ ಯೋಜನಾ ಮೇಲ್ವಿಚಾರಕರಾದ ಅಕ್ಷಯ್ ಉಪಸ್ಥಿತರಿದ್ದರು.

ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿ ಚಿಂತನ್ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಪೃಥ್ವಿ ಸ್ವಾಗತಿಸಿ, ಶಿಕ್ಷಕಿ ಸುಜನಾ ವಾಲ್ತಾಜೆ ವಂದಿಸಿದರು.

Related posts

ಕಾಪಿನಡ್ಕ ಗೆಳೆಯರ ಬಳಗದ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಲತೀಶ್ ಎ.ಆರ್.,

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ

Suddi Udaya

ಇತಿಹಾಸ ಪ್ರಸಿದ್ದ ನಿಡಿಗಲ್ ಸಿರಿಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಯಶೋಧರ ಗೌಡ ಗುರಿಪಳ್ಳ ಆಯ್ಕೆ

Suddi Udaya

ಬೆಳ್ತಂಗಡಿ: ನೀರಿಕ್ಷಾ ಎನ್ ನಾವರ ಚಾರ್ಟರ್ಡ್ ಅಕೌಂಟೆಂಟ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ”ಪ್ರಚಲಿತ ಉತ್ತಮ ಉತ್ಪಾದನಾ ಅಭ್ಯಾಸಗಳು” ನಿಯಂತ್ರಣ ವ್ಯವಹಾರಗಳ ಕುರಿತಾದ ವಿಚಾರಗೋಷ್ಠಿ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಜಾಗತಿಕ ವನ್ಯಜೀವಿ ಸಂರಕ್ಷಣಾ ಸಂಘದಿಂದ ಚಾಲಾನ ಪರವಾನಿಗೆ ಹಾಗೂ ತೋಟಗಾರಿಕಾ ಬೆಳೆಗಳ ಸಸಿ ವಿತರಣೆ

Suddi Udaya
error: Content is protected !!