22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಉಜಿರೆ: “ಭಾರತ ವಿಶ್ವಗುರುವಾಗುವ ಹಾದಿಯಲ್ಲಿ ಕರ್ನಾಟಕದ ಮಕ್ಕಳಾದ ನಮ್ಮ ಕೊಡುಗೆ ನಿರಂತರವಾಗಿರಲಿ. ಈ ದಿನಕ್ಕಾಗಿ ಹೋರಾಡಿದ ಮಹಾನ್ ನಾಯಕರನ್ನು ಎಂದೆಂದಿಗೂ ನಾವು ನೆನೆಯಲೇ ಬೇಕು” ಎಂದು ಹಳೆಪೇಟೆ, ಉಜಿರೆ, ನಿಡ್ಲೆ ವಲಯ ಬೆಳ್ತಂಗಡಿಯ ಸಿ.ಆರ್.ಪಿ ಶ್ರೀಮತಿ ಪ್ರತಿಮಾ ಕೆ.ಎಂ ಹೇಳಿದರು.

ಇವರು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಕನ್ನಡ ರಾಜ್ಯೋತ್ಸವ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಕಾರ್ಯಕ್ರಮ ಉದ್ಘಾಟಿಸಿ, ಮಾಸಿಕ ಕಾರ್ಯಚಟುವಟಿಕೆಗಳ ಅನಾವರಣಗೊಳಿಸಿ ವಿದ್ಯಾರ್ಥಿಗಳಿಗೆ ಕರ್ನಾಟಕದ ಇತಿಹಾಸ ಹಾಗೂ ಕನ್ನಡ ಭಾಷೆಯ ಹಿನ್ನೆಲೆಯ ಮಹತ್ವದ ಕುರಿತು ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಾಲಾ ವಿದ್ಯಾರ್ಥಿಗಳಿಂದ ಗುಂಪುಗಾಯನ ಹಾಡಲಾಯಿತು.

ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿನಿ ಅನರ್ಘ್ಯ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯಕ್ ಕೆ.ಜಿ ಸ್ವಾಗತಿಸಿ, ವಿದ್ಯಾರ್ಥಿನಿ ಧೃತಿ ವಂದಿಸಿದರು.

Related posts

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ : ಸಂಸದ ಕ್ಯಾ.ಬ್ರಿಜೇಶ್ ಚೌಟರವರಿಂದ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆ, ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದನೆ ಹಾಗೂ ಉಚಿತ ಮಧುಮೇಹ ಪರೀಕ್ಷಾ ಶಿಬಿರ

Suddi Udaya

ಪಡ್ಡಂದಡ್ಕ ಸಾಧನಾಶ್ರೀ ಮಹಿಳಾ ಮಂಡಲ ಉದ್ಘಾಟನೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ತಂಗಡಿ ಟೀಮ್ ನವಭಾರತ್ ವತಿಯಿಂದ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾಗಿ ರಾಜು ಕೆ.

Suddi Udaya
error: Content is protected !!