38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿಯಿಂದ ಕರ್ನಾಟಕ ರಾಜ್ಯೋತ್ಸವ

ಬೆಳ್ತಂಗಡಿ : ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ಪಕ್ಷದ ಕಚೇರಿ ಮುಂಭಾಗದಲ್ಲಿ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ನಡೆಯಿತು.

ಸಮೃದ್ಧ, ಸದೃಢ, ಸ್ವಾಭಿಮಾನಿ ಕರ್ನಾಟಕ ಎಸ್‌ಡಿಪಿಐ ಸಂಕಲ್ಪ, ಒಲವಿನ ಕರ್ನಾಟಕ ಎಂಬ ಘೋಷವಾಕ್ಯದೊಂದಿಗೆ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ಧ್ವಜಾರೋಹಣ ನಡೆಸಿದರು.
ಮುಖ್ಯ ಅತಿಥಿಯಾಗಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿಗಳಾದ ನವಾಝ್ ಕಟ್ಟೆ ಅತಿಥಿ ಭಾಷಣ ಮಾಡಿದರು.


ಈ ಸಂದರ್ಭದಲ್ಲಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ಕ್ಷೇತ್ರ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಉಪಾಧ್ಯಕ್ಷ ನಿಸಾರ್ ಕುದ್ರಡ್ಕ, ಜೊತೆ ಕಾರ್ಯದರ್ಶಿ ರಶೀದ್ ಬೆಳ್ತಂಗಡಿ, ಕೋಶಾಧಿಕಾರಿ ಸ್ವಾಲಿ ಮದ್ದಡ್ಕ, ಸಮಿತಿ ಸದಸ್ಯರಾದ ಅಶ್ರಫ್ ಕಟ್ಟೆ, ಮುಸ್ತಫಾ ಜಿ.ಕೆರೆ, ಉಜಿರೆ ಬ್ಲಾಕ್ ಅಧ್ಯಕ್ಷರಾದ ಸಲೀಂ ಲಾಯಿಲ, ಕಾರ್ಯದರ್ಶಿ ಮರ್ಷಾ ಉಜಿರೆ, ಸಾದಿಕ್ ಲಾಯಿಲ, ಬೆಳ್ತಂಗಡಿ ನಗರ ಸಮಿತಿ ಉಪಾಧ್ಯಕ್ಷರಾದ ಇಸ್ಮಾಯಿಲ್ ಬೆಳ್ತಂಗಡಿ ಹಾಗೂ ಪಕ್ಷದ ಬ್ರಾಂಚ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರೌಫ್ ಪುಂಜಾಲಕಟ್ಟೆ ಸ್ವಾಗತಿಸಿ, ಧನ್ಯವಾದಗೈದರು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಸೆ.20-22: ಮಂಗಳೂರು- ಉಡುಪಿಯಲ್ಲಿ ಬಿಗ್ ಬ್ರಾಂಡ್ಸ್ ಎಕ್ಸ್ಪೋ 2024: ಒಂದೇ ಸೂರಿನಡಿಯಲ್ಲಿ 120 ಕ್ಕೂ ಹೆಚ್ಚಿನ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ “ಆಟಿಡೊಂಜಿ ದಿನ” ಸ್ನೇಹಭೋಜನ ಕೂಟ

Suddi Udaya

ಕಣಿಯೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ : 20 ಸರಕಾರಿ ಶಾಲೆಯ1500ಕ್ಕೂ ಹೆಚ್ವು ವಿದ್ಯಾರ್ಥಿಗಳು ಭಾಗಿ, ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya
error: Content is protected !!