22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯಿತು.

ಕನ್ನಡ ಭುವನೇಶ್ವರಿ ದೇವಿಯ ಮುಂದೆ ದೀಪ ಪ್ರಜ್ವಲಿಸಿ, ಪುಷ್ಪಾರ್ಚನೆ ಮಾಡಿ ಮಾತನಾಡಿದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರು ಕನ್ನಡಿಗರಾದ ನಾವು, ಜಾತಿ – ಮತ – ಪಂಥಗಳ ಭೇದ ಮರೆತು, ಕನ್ನಡ ಎನ್ನುವ ಹೆಸರಿನಲ್ಲಿ ಬಾಳುತ್ತಿದ್ದೇವೆ. ಕನ್ನಡ ನಮ್ಮ ಭಾವೈಕ್ಯತೆಯನ್ನು ಹೆಚ್ಚಿಸುವ ಭಾಷೆ ಎಂದರು.


ಪ್ರಾಸ್ತಾವಿಕವಾಗಿ ಮಾತನಾಡಿದ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ ಅವರು, ಜಗತ್ತಿಗೆ ಕನ್ನಡಿಗರು ನೀಡಿದ ಕೊಡುಗೆ ಅಮೂಲ್ಯವಾದುದು. ಅದನ್ನು ಸ್ಮರಿಸಿ, ಮುಂದುವರೆಸುವ ಜವಾಬ್ದಾರಿ ನಮ್ಮ ತಲೆಮಾರಿನ ಮೇಲಿದೆ ಎಂದರು.

ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್, ಆಡಳಿತ ಮಂಡಳಿಯ ಸಹನಾ ಜೈನ್, ಶೈಕ್ಷಣಿಕ ಸಂಯೋಜಕಿ ನಿಶಾ ಪೂಜಾರಿ, ಭೌತ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಸತ್ಯ ನಾರಾಯಣ ಭಟ್, ವಾಣಿಜ್ಯ ವಿಭಾಗದ ಡೀನ್ ಸಂತೋಷ್ ಕೆ, ಮುಖ್ಯಸ್ಥ ಪ್ರಸನ್ನ ಭೋಜ, ಉಪನ್ಯಾಸಕರಾದ ರಘು ಬಿಜೂರು ,ಅರುಣ್ ಕ್ಯಾಸ್ಟೋಲಿನ್, ಬಿ ಜಿ ಬಿರಾದಾರ್ , ಡಾ.ಆಸ್ಟಿನ್, ಉಷಾ ಬಿಕೆ , ದಿಶಾ, ಜ್ಯೋತಿ ಹೆಗ್ಡೆ, ಹೃತಿಕ್ ,ಚರಣ್, ಅರುಣ್ ಕುಮಾರ್, ಲೇಖನ, ಚೈತ್ರ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ತಿಪ್ಪೇ ಸ್ವಾಮಿ ಪ್ರಾರ್ಥಿಸಿದರು. ಮೊಹಮ್ಮದ್ ಮುನೀರ್ ನಿರೂಪಿಸಿದರು. ಕನ್ನಡ ವಿಭಾಗ ಮುಖ್ಯಸ್ಥ ಜಯರಾಮ್ ವಂದಿಸಿದರು.

Related posts

ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ರವರ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ಮಂಗಳೂರು ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಗೇರುಕಟ್ಟೆ ಆಟೋ-ಚಾಲಕರ ಸಂಘದ ವತಿಯಿಂದ ಸರ್ಪ ಸಂಸ್ಕಾರ ಪೂಜೆ

Suddi Udaya

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya

ಧರ್ಮಸ್ಥಳ: ವಿಜಯ ಕ್ರೆಡಿಟ್ ಸೊಸೈಟಿಗೆ ಡಿ. ಹರ್ಷೇಂದ್ರ ಕುಮಾರ್ ಭೇಟಿ

Suddi Udaya

ಕೊಕ್ಕಡ: ಉಪ್ಪಾರಪಳಿಕೆ-ಉಪ್ಪಾರಹಳ್ಳ ರಸ್ತೆಗೆ ಕಾಂಕ್ರೀಟ್ ಹಾಕಿ ಶ್ರಮದಾನ

Suddi Udaya

ಪಾರೆoಕಿ: ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ-ನಾಗದೇವರಿಗೆ ತಂಬಿಲ ಸೇವೆ

Suddi Udaya
error: Content is protected !!