23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಕನ್ನಡ ರಾಜ್ಯೋತ್ಸವನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರು ಡಾ. ಭೋಜಮ್ಮ ಕೆಎನ್ ದೀಪ ಬೆಳಗಿಸಿ ಮಾತನಾಡಿ ಕನ್ನಡ ಭಾಷೆಯ ಮಹತ್ವ ಹಾಗೂ ಕನ್ನಡ ಉಳಿವಿಗಾಗಿ ಮುಂದಿನ ಯುವ ಪೀಳಿಗೆ ಸಂಸ್ಕೃತಿ , ಸಂಸ್ಕಾರಗಳಿಗೆ ,ಪ್ರಾಧ್ಯಾನತೆ ಕೊಡಬೇಕು ಎಂಬುದನ್ನು ತಿಳಿಸಿದರು. ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಹೇಮಲತಾ ಎಂ ಆರ್ ಉಪಸ್ಥಿತರಿದ್ದರು.

ಮಕ್ಕಳಿಗೆ ಕನ್ನಡ ರಾಜ್ಯೋತ್ಸವಕ್ಕೆ ಸಂಬಂಧಿಸಿದಂತೆ, ಸಾಂಸ್ಕೃತಿಕ ಕಾರ್ಯಕ್ರಮ ಗಾದೆ ಮಾತುಗಳು ಸುಂದರ ಕೈಬರಹ, ಒಗಟುಗಳು, ಪದ್ಯ ರಚನೆ, ನೃತ್ಯ, ರಸಪ್ರಶ್ನೆ, ಗುಂಪು ಗೀತ ಗಾಯನ, ಭಾಷಣ ಸ್ಪರ್ಧೆ ಇತ್ಯಾದಿ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.

ಅಂಜಲಿ ಸ್ವಾಗತಿಸಿ, ದಿಶಾ ಪಿ ಶೆಟ್ಟಿ ಧನ್ಯವಾದವಿತ್ತರು. ಲಾಸ್ಯ ಅತಿಥಿ ಪರಿಚಯವನ್ನುಮಾಡಿದರು. ಅನಘ ಮರಾಠೆ ನಿರೂಪಿಸಿದರು.
‌ ‌‌ ‌ ಶಿಕ್ಷಕರುಗಳಾದ ಸೌಮ್ಯ ಪಿ, ನೀತಾ ಕೆ.ಎಸ್, ಶ್ರೇಯಾಂಸ ಜೈನ್, ಸಹನಾ, ಅಮಿತಾ ಪ್ರವೀಣ್ ಎನ್ ರವರ ನೇತೃತ್ವದಲ್ಲಿ ಎಲ್ಲಾ ಶಿಕ್ಷಕ / ಕಿಯರ ಸಹಕರಿಸಿದರು.

Related posts

ಧರ್ಮಸ್ಥಳ ಮೇಳದ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜು ‘ವಿವಿಧ ಸಂಘಗಳ ಉದ್ಘಾಟನೆ’

Suddi Udaya

ಮಲವಂತಿಗೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆ ಬೆಂಕಿಗಾಹುತಿ: ಅಪಾರ ನಷ್ಟ

Suddi Udaya

ಬೈಲಂಗಡಿ :ಶ್ರೀ ಸೋಮನಾಥೇಶ್ವರ ದೇವಸ್ಥಾನ ತೋಟತ್ತಾಡಿ ಬ್ರಹ್ಮ ಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ಮದ್ದಡ್ಕ ವಿ.ಹಿಂ.ಪ. ಭಜರಂಗದಳ ಘಟಕದಿಂದ ಅನಾರೋಗ್ಯ ಪಿಡೀತರಿಗೆ ಆರ್ಥಿಕ ನೆರವು

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಮದ್ದಡ್ಕ ತಾಯಿ ರಕ್ತೇಶ್ವರಿ ಹಾಗೂ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ರೂ.1 ಲಕ್ಷ ದೇಣಿಗೆ

Suddi Udaya
error: Content is protected !!