22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ

ಬೆಳ್ತಂಗಡಿ: 70ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಬೆಳ್ತಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ ನಡೆಯಿತು.

ಗಮಕ ವಾಚನವನ್ನು ತಮ್ಮ ಸುಶ್ರಾವ್ಯ ಕಂಠದ ಮೂಲಕ ಮಧೂರು ವಿಷ್ಣು ಪ್ರಸಾದ ಕಲ್ಲೂರಾಯ ನಡೆಸಿಕೊಟ್ಟರು. ಗಮಕ ವ್ಯಾಖ್ಯಾನಕಾರರಾಗಿ ಪ್ರೊ| ಮಧೂರು ಮೋಹನ ಕಲ್ಲೂರಾಯ ಭಾಗವಹಿಸಿ ಪ್ರೇಕ್ಷಕರ ಮನ ಗೆದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಕುಮಾರ್ ಜೈನ್ ವಹಿಸಿದರು. ಮೋಹನ ಕಲ್ಲೂರಾಯರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಪ್ರಥಮ ಪಿಯುಸಿ ಪಠ್ಯ ಭಾಗದ ವಿಷಯವೇ ಗಮಕದಲ್ಲಿ ಆಯ್ಕೆ ಮಾಡಿಕೊಂಡ ಕಾರಣ ವಿದ್ಯಾರ್ಥಿಗಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.

ಉಪನ್ಯಾಸಕ ಆನಂದ ಸ್ವಾಗತಿಸಿ, ಉಪನ್ಯಾಸಕ ಶೀನಾ ನಾಡೋಳಿ ವಂದಿಸಿದರು. ಉಪನ್ಯಾಸಕಿ ಡಾ.ಅಮೃತ ರಶ್ಮಿ ಫೆರ್ನಾಂಡಿಸ್ ಕಾರ್ಯಕ್ರಮ ಉಪನ್ಯಾಸಕ ಡಾ. ಗಣೇಶ್ ಭಟ್ ಅವರು ಪ್ರಾಸ್ತಾವಿಕ ಮಾತನಾಡಿದರು.
ವೇದಿಕೆಯಲ್ಲಿ ಪ್ರೌಢಶಾಲಾ ವಿಭಾಗದ ಮುಖ್ಯಸ್ಥರಾದ ಪೂರ್ಣಿಮಾ ಉಪಸ್ಥಿತರಿದ್ದರು. ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗದ ಉಪನ್ಯಾಸಕರು, ಅಧ್ಯಾಪಕರು, ವಿದ್ಯಾರ್ಥಿಗಳು , ಬಿಇಡಿ ಪ್ರಶಿಕ್ಷಣಾರ್ಥಿಗಳು ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು.

Related posts

ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಕೆ ಎನ್ ಆಯ್ಕೆ

Suddi Udaya

ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಣಿಯೂರು ವಲಯದ ಮೈರೋಲ್ತಡ್ಕ, ಮೊಗ್ರು, ಬಂದಾರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಕುವೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ಸಂಭ್ರಮ ಶನಿವಾರ

Suddi Udaya

ಜ.5: ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya

ಕೊಯ್ಯೂರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ

Suddi Udaya
error: Content is protected !!