September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ

ಬೆಳ್ತಂಗಡಿ: 70ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಬೆಳ್ತಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ ನಡೆಯಿತು.

ಗಮಕ ವಾಚನವನ್ನು ತಮ್ಮ ಸುಶ್ರಾವ್ಯ ಕಂಠದ ಮೂಲಕ ಮಧೂರು ವಿಷ್ಣು ಪ್ರಸಾದ ಕಲ್ಲೂರಾಯ ನಡೆಸಿಕೊಟ್ಟರು. ಗಮಕ ವ್ಯಾಖ್ಯಾನಕಾರರಾಗಿ ಪ್ರೊ| ಮಧೂರು ಮೋಹನ ಕಲ್ಲೂರಾಯ ಭಾಗವಹಿಸಿ ಪ್ರೇಕ್ಷಕರ ಮನ ಗೆದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಕುಮಾರ್ ಜೈನ್ ವಹಿಸಿದರು. ಮೋಹನ ಕಲ್ಲೂರಾಯರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಪ್ರಥಮ ಪಿಯುಸಿ ಪಠ್ಯ ಭಾಗದ ವಿಷಯವೇ ಗಮಕದಲ್ಲಿ ಆಯ್ಕೆ ಮಾಡಿಕೊಂಡ ಕಾರಣ ವಿದ್ಯಾರ್ಥಿಗಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.

ಉಪನ್ಯಾಸಕ ಆನಂದ ಸ್ವಾಗತಿಸಿ, ಉಪನ್ಯಾಸಕ ಶೀನಾ ನಾಡೋಳಿ ವಂದಿಸಿದರು. ಉಪನ್ಯಾಸಕಿ ಡಾ.ಅಮೃತ ರಶ್ಮಿ ಫೆರ್ನಾಂಡಿಸ್ ಕಾರ್ಯಕ್ರಮ ಉಪನ್ಯಾಸಕ ಡಾ. ಗಣೇಶ್ ಭಟ್ ಅವರು ಪ್ರಾಸ್ತಾವಿಕ ಮಾತನಾಡಿದರು.
ವೇದಿಕೆಯಲ್ಲಿ ಪ್ರೌಢಶಾಲಾ ವಿಭಾಗದ ಮುಖ್ಯಸ್ಥರಾದ ಪೂರ್ಣಿಮಾ ಉಪಸ್ಥಿತರಿದ್ದರು. ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗದ ಉಪನ್ಯಾಸಕರು, ಅಧ್ಯಾಪಕರು, ವಿದ್ಯಾರ್ಥಿಗಳು , ಬಿಇಡಿ ಪ್ರಶಿಕ್ಷಣಾರ್ಥಿಗಳು ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು.

Related posts

ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆ: ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಮೂಡಯೂರು, ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ಆಯ್ಕೆ

Suddi Udaya

ಶಾಸಕ ಹರೀಶ್ ಪೂಂಜರಿಗೆ ಗರ್ಡಾಡಿ ಶಕ್ತಿ ಕೇಂದ್ರದಿಂದ ಅಭಿನಂದನೆ

Suddi Udaya

ಬುರುಡೆ ಚಿನ್ನಯ್ಯ ಮತ್ತೆ ಇಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಕಳೆಂಜ: ಶಿಬರಾಜೆಯ ಬ್ರಹ್ಮಲಿಂಗ ದೇವರಿಗೆ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ವಿಶೇಷ ಅಭಿಷೇಕ ಪೂಜೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya

ವೇಣೂರು ಆರಕ್ಷಕ ಠಾಣೆಯಲ್ಲಿ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆ

Suddi Udaya
error: Content is protected !!