ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಪ್ರೊ| ಲಿಯೋ ನೋರೊನ್ಹ ರವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ ನಮ್ಮಲ್ಲಿರುವ ದುಡ್ಡು, ಸಂಪತ್ತು ಯಾರೂ ಬೇಕಾದರೂ ಲೂಟಿ ಮಾಡಬಹುದು ಆದರೆ ನಾವು ಪ್ರಪಂಚದ ಯಾವುದೇ ಮೂಲೆಯಲ್ಲಿದ್ದರೂ ನಮ್ಮೊಳಗಿನ ದೇಶಾಭಿಮಾನ, ಭಾಷಾಭಿಮಾನವನ್ನು ಯಾರಿಂದಲೂ ಲೂಟಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿ , ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು. ವಿದ್ಯಾರ್ಥಿನಿಯಾದ ಯಶ್ಮಿ ರವರು ಕನ್ನಡ ರಾಜ್ಯೋತ್ಸವದ ಮಹತ್ವದ ಬಗ್ಗೆ ವಿವರಣೆಯನ್ನು ನೀಡಿದರು.

ವಿದ್ಯಾರ್ಥಿಗಳು ಗೀತ ಗಾಯನ ಮತ್ತು ನೃತ್ಯದ ಮೂಲಕ ಕನ್ನಡಾಂಬೆಗೆ ನುಡಿ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೋ ಡೇಸ ರವರು, ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಆರಾಧ್ಯ ನಿರೂಪಿಸಿ, ಸಹಶಿಕ್ಷಕಿಯಾದ ಭಾಗ್ಯಶ್ರೀ ಸ್ವಾಗತಿಸಿ, ವಿದ್ಯಾರ್ಥಿಯಾದ ಪ್ರಥಮ್ ಧನ್ಯವಾದವನ್ನು ಸಮರ್ಪಿಸಿದರು.











