July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮೂಲ ಸೌಕರ್ಯದಿಂದ ವಂಚಿತವಾಗಿದೆ ಬಂಗಾಡಿ ಅಂಗನವಾಡಿ ಕೇಂದ್ರ: ಸಮಸ್ಯೆಯನ್ನು ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹ

ಇಂದಬೆಟ್ಟು: ಇಲ್ಲಿಯ ಬಂಗಾಡಿ 2ನೇ ವಾರ್ಡ್ ನಲ್ಲಿರುವ ರೂ. 16 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಅಂಗನವಾಡಿ ಕೇಂದ್ರದಲ್ಲಿ ಪ್ರಾರಂಭದಲ್ಲಿ 20-25 ಮಕ್ಕಳಿದ್ದು, ಈಗ ಇಲ್ಲಿ ಹಲವು ಸಮಯಗಳಿಂದ ಕುಡಿಯಲು ಹಾಗೂ ಶೌಚಾಲಯಕ್ಕೆ ನೀರೆ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ.

ಪಂಚಾಯಿಂದ ಬರುವ ನಳ್ಳಿ ನೀರು ಅಂಗನವಾಡಿ ವರೆಗೆ ತಲುಪುವುದೇ ಇಲ್ಲ, ಮಕ್ಕಳು ಶೌಚಾಲಯವಿದ್ದರು ನೀರಿಲ್ಲದ ಕಾರಣ ಅಂಗನವಾಡಿಯ ಹೊರಗಡೆ ಬರಬೇಕು. ಇದರ ಸುತ್ತಮುತ್ತ ಸರಿಯಾದ ಕಂಪೌಂಡ್ ಇಲ್ಲ. ಬದಿಯಲ್ಲೆ ದೊಡ್ಡ ಹೊಂಡಗಳಿದ್ದು ಮಕ್ಕಳಿಗೆ ಅಪಾಯಕಾರಿಯಾಗಿದೆ. ಸುತ್ತಮುತ್ತ ಗೋಡೆ ಬದಿಯಲ್ಲೆ ಗಿಡ ಗಂಟಿಗಳು ಬೆಳೆದು ಹಾವು, ಹೆಗ್ಗಣಗಳ ವಾಸ ಸ್ಥಳವಾಗಿದೆ. ಸರಿಯಾದ ವ್ಯವಸ್ಥೆ ಇಲ್ಲದೆ ಪೊಷಕರು ಮಕ್ಕಳನ್ನು ಅಂಗನವಾಡಿಗೆ ಕಳುಹಿಸಲು ಹಿಂಜರಿಯುತ್ತಿದ್ದಾರೆ. ಈಗ 10-12 ಮಕ್ಕಳಿದ್ದು, ಪೊಷಕರೇ ಬಂದು ಬಕೆಟ್, ಕೊಡಪಾನಗಳಲ್ಲಿ ಹತ್ತಿರದ ಮನೆಗಳಿಂದ ಕುಡಿಯಲು ನೀರು ತರುವಂತಾಗಿದೆ.

ಆದರಿಂದ ಸಂಬಂಧಪಟ್ಟ ಅಧಿಕಾರಿಗಳು, ಮೇಲ್ವಿಚಾರಕರು ಇದರ ಕಡೆ ಗಮನಹರಿಸಿ ಶೀಘ್ರದಲ್ಲಿ ಸರಿಯಾದ ವ್ಯವಸ್ಥೆಯನ್ನು ಕಲ್ಪಿಸುವಂತೆ ಸಾರ್ವಜನಿಕ ಆಗ್ರಹವಾಗಿದೆ.

Related posts

ಬೆಳ್ತಂಗಡಿ ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟದಿಂದ ಮಾಶಾಸನ ಹೆಚ್ಚಳ ಮತ್ತು ಮಹಿಳಾ ದೌರ್ಜನ್ಯ ಖಂಡಿಸಿ ಮನವಿ

Suddi Udaya

ಟೈಲರ್ ಮಹಿಳೆಗೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಬೆಳ್ತಂಗಡಿ ಮುಖ್ಯ ಠಾಣಾಧಿಕಾರಿಗೆ ಮನವಿ

Suddi Udaya

ದಯಾ ವಿಶೇಷ ಮಕ್ಕಳ ಮುಂದಿನ ಭವಿಷ್ಯ ನಿರ್ಮಾಣಕ್ಕಾಗಿ ಡಿ.29 ರಂದು ಹೋಲಿ ರೆಡಿಮರ್ ಚರ್ಚ್ ವಠಾರದಲ್ಲಿ ದಯಾ ಫಿಯೆಸ್ತಾ-2024

Suddi Udaya

ಶ್ರೀ ಕ್ಷೇತ್ರ ಕೊಲಕಾಡಿಯಿಂದ ಧರ್ಮಸ್ಥಳ ಭೇಟಿ

Suddi Udaya

ತಾ.ಪಂ.  ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ ಸೇವಾ ನಿವೃತ್ತಿ – ಬೀಳ್ಕೊಡುಗೆ ಸಮಾರಂಭ

Suddi Udaya

ಕರಾಯ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ

Suddi Udaya
error: Content is protected !!