August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅನುಗ್ರಹ  ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನ. 1 ರಂದು 70ನೇ ಕನ್ನಡ ರಾಜ್ಯೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.

ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ ವಂ ಫಾ! ಅಬೆಲ್ ಲೋಬೊ ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ವಂ! ಫಾ ವಿಜಯ್ ಲೋಬೊ, ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶಾಲಾ ಸಂಚಾಲಕರು ರಾಷ್ಟ್ರಧ್ವಜ ಹಾಗೂ ನಾಡ ಧ್ವಜವನ್ನು ಆರೋಹಿಸಿದರು. ವಿದ್ಯಾರ್ಥಿಗಳು ರಾಷ್ಟ್ರಗೀತೆ ಹಾಗೂ ನಾಡಗೀತೆಯನ್ನು ಹಾಡುವುದರ ಮೂಲಕ ಗೌರವವನ್ನು  ಅರ್ಪಿಸಿದರು.

10ನೇ ತರಗತಿ ವಿದ್ಯಾರ್ಥಿನಿ ಶ್ರೇಯಾ ಕನ್ನಡ ರಾಜ್ಯೋತ್ಸವದ ಮಹತ್ವವನ್ನು ಕುರಿತು ಮಾತನಾಡಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಸಂಚಾಲಕರು ಕನ್ನಡ ಭಾಷೆ ಸಾಹಿತ್ಯ ಬೆಳೆದು ಬಂದ ದಾರಿ, ಕನ್ನಡದ ಸ್ಥಾನಮಾನ ಮತ್ತು ಭಾಷೆಯ ಉಳಿವಿಗಾಗಿ ಕನ್ನಡಿಗರು ಮಾಡಬೇಕಾದ ಕಾರ್ಯಗಳನ್ನು ಕುರಿತು ಮಾತನಾಡಿದರು. ನಂತರ ವಿದ್ಯಾರ್ಥಿಗಳು ಕನ್ನಡ ನಾಡು ನುಡಿ ಕುರಿತ ಹಾಡು ನೃತ್ಯಗಳ ಮೂಲಕ ರಂಜಿಸಿದರು. ವಿದ್ಯಾರ್ಥಿಗಳಾದ  ಪ್ರತೀಕ್ಷ ಶೆಟ್ಟಿ ಸ್ವಾಗತಿಸಿ ಸಿಂಚನ ವಂದಿಸಿ ಅಂಶಿಕ ಕಾರ್ಯಕ್ರಮ ನಿರೂಪಿಸಿದರು.

Related posts

ನಾಲ್ಕೂರು: ತೋಟದಪಲ್ಕೆ ನಿವಾಸಿ ಭಾನುಮತಿ ನಿಧನ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಸುಮಂತ್ ಕುಮಾರ್ ಜೈನ್ ರಿಂದ ದಿ ರೋಟರೀ ಇಂಟರ್ ನ್ಯಾಷನಲ್ ಫಂಡ್ ಗೆ ರೂ.90,000 ಕೊಡುಗೆ

Suddi Udaya

ಧರ್ಮಸ್ಥಳದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ರವರಿಗೆ ಶಾಲೆಯ ವತಿಯಿಂದ ಅಭಿನಂದನೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!