22.6 C
ಪುತ್ತೂರು, ಬೆಳ್ತಂಗಡಿ
July 23, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆ

ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆ ನ.1ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಭ್ಯಾಸ್ ಪಿ.ಯು ಕಾಲೇಜಿನ ಅಧ್ಯಕ್ಷ ಕಾರ್ತಿಕೇಯ ಎಂ. ಎಸ್ ರವರು ವಹಿಸಿಕೊಂಡು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಅಭ್ಯಾಸ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಶಿಲ್ಪಾ ಹಾಗೂ ಆಡಳಿತ ಅಧಿಕಾರಿ ಪ್ರಮೋದ್ ಗೌಡ ಮತ್ತು ಕಾರ್ಯಕ್ರಮದ ಸಂಯೋಜಕರು, ಅಭ್ಯಾಸ್ ಪಿ.ಯು ಕಾಲೇಜಿನ ಉಪಪ್ರಾಂಶುಪಾಲರಾದ ಚಂದ್ರಶೇಖರ ಗೌಡ ಹಾಗೂ ಪ್ರಭಾರ ಪ್ರಾಂಶುಪಾಲರಾದ ಗುರುಪ್ರಸಾದ್ ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರದ ಚಂದ್ರಶೇಖರ ಗೌಡ 70ನೇಯ ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ಕನ್ನಡ ನಾಡು ,ನುಡಿ , ಸಂಸ್ಕೃತಿ ಮತ್ತು ಕರ್ನಾಟಕದ ಏಕೀಕರಣದ ಮಹತ್ವ ಮತ್ತು. ಮಾತೃ ಭಾಷೆ ಕನ್ನಡದಲ್ಲೇ ಓದಿದ ಅದೆಷ್ಟೋ ಉದ್ಯೋಗದವರನ್ನು ನಾವು ದೇಶ ವಿದೇಶದಲ್ಲಿ ಕಾಣುವುದರ ಜೊತೆಗೆ ವಿಶ್ವಮಾನ್ಯತೆ ಪಡೆದಿದ್ದಾರೆ ಹೀಗೆ ಹಲವಾರು ವಿಚಾರಗಳನ್ನ ವಿದ್ಯಾರ್ಥಿಗಳಿಗೆ ಪರಿಚಯಿಸಿದರು.

ಅಧ್ಯಕ್ಷೀಯ ಮಾತುಗಳನ್ನಡಿದ ಕಾರ್ತಿಕೇಯ ಎಂ.ಎಸ್ ಅವರು ಕನ್ನಡ ಭಾಷೆ , ಕನ್ನಡಿಗರ ಮನಸುಗಳ ಜೊತೆಗೆ ಕನ್ನಡಿಗರ ಬದುಕು ಕಟ್ಟುವಂತಹ ಕೆಲಸವನ್ನ ಮಾಡುತ್ತಿದೆ ಹಾಗೂ ಮುಂದಿನ ದಿನಗಳಲ್ಲಿ ಇಂಥಹ ಮೌಲ್ಯದಾಯಕ ಕನ್ನಡ ಕಾಯಕವನ್ನ ಕಟ್ಟುವಂತ ಕೆಲಸವನ್ನು ವಿದ್ಯಾರ್ಥಿಗಳು ಮಾಡಬೇಕು ಹೀಗೆ ಹಲವಾರು ವಿಚಾರಗಳನ್ನ ತಿಳಿಸಿದರು.ಪಿ.ಆರ್.ಓ ಧನಂಜಯ ಹಾಗೂ ಎಲ್ಲಾ ಬೋಧಕೇತರ ಸಿಬ್ಬಂದಿ ವರ್ಗದವರೂ, ಸಹಾಯಕ ವೃಂದದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು , ವಿದ್ಯಾರ್ಥಿ ತನುಶ್ರೀ ಪ್ರಾರ್ಥನೆಗೈದರು, ಕನ್ನಡ ವಿಭಾಗದ ಉಪನ್ಯಾಸಕ ಸುಧೀರ್ ಸ್ವಾಗತಿಸಿ, ನಿರೂಪಿಸಿದರು, ನಿಲಯ ಪಾಲಕರಾದ ಜೀತೇಶ್ ವಂದಿಸಿದರು.

Related posts

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುಪರೀಕ್ಷಕ ರಮೇಶ್ ಅಳದಂಗಡಿ ನೇಮಕ

Suddi Udaya

ಕುಕ್ಕೇಡಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಅನಿತಾ, ಉಪಾಧ್ಯಕ್ಷರಾಗಿ ಕುಸುಮ ಆಯ್ಕೆ

Suddi Udaya

ಗುರಿಪಳ್ಳ ಶಾಲೆಯಲ್ಲಿ ಪೋಷಕರಿಗೆ ವಿಶೇಷ ಮಾಹಿತಿ ಶಿಬಿರ

Suddi Udaya

ಶಿರ್ಲಾಲು ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಹೆಪಾಟೈಟಿಷ್ ಬಿ” ಎಂಬ ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ತೆಂಕಕಾರಂದೂರಿನ ಯುವಕ ಪತ್ನಿ, ತಾಯಿ, 2 ಚಿಕ್ಕ ಮಕ್ಕಳೊಂದಿಗಿರುವ ಮನೆಯ ಆಧಾರಸ್ತಂಭ ಗುರುರಾಜ್ ಹೆಗ್ಡೆಯವರ ಚಿಕಿತ್ಸೆಗೆ ನೆರವಾಗಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ

Suddi Udaya
error: Content is protected !!