24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿಯಿಂದ ಕರ್ನಾಟಕ ರಾಜ್ಯೋತ್ಸವ

ಬೆಳ್ತಂಗಡಿ : ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ಪಕ್ಷದ ಕಚೇರಿ ಮುಂಭಾಗದಲ್ಲಿ ಕ್ಷೇತ್ರಾಧ್ಯಕ್ಷ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ನಡೆಯಿತು.

ಸಮೃದ್ಧ, ಸದೃಢ, ಸ್ವಾಭಿಮಾನಿ ಕರ್ನಾಟಕ ಎಸ್‌ಡಿಪಿಐ ಸಂಕಲ್ಪ, ಒಲವಿನ ಕರ್ನಾಟಕ ಎಂಬ ಘೋಷವಾಕ್ಯದೊಂದಿಗೆ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ಧ್ವಜಾರೋಹಣ ನಡೆಸಿದರು.
ಮುಖ್ಯ ಅತಿಥಿಯಾಗಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿಗಳಾದ ನವಾಝ್ ಕಟ್ಟೆ ಅತಿಥಿ ಭಾಷಣ ಮಾಡಿದರು.


ಈ ಸಂದರ್ಭದಲ್ಲಿ ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ಕ್ಷೇತ್ರ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಉಪಾಧ್ಯಕ್ಷ ನಿಸಾರ್ ಕುದ್ರಡ್ಕ, ಜೊತೆ ಕಾರ್ಯದರ್ಶಿ ರಶೀದ್ ಬೆಳ್ತಂಗಡಿ, ಕೋಶಾಧಿಕಾರಿ ಸ್ವಾಲಿ ಮದ್ದಡ್ಕ, ಸಮಿತಿ ಸದಸ್ಯರಾದ ಅಶ್ರಫ್ ಕಟ್ಟೆ, ಮುಸ್ತಫಾ ಜಿ.ಕೆರೆ, ಉಜಿರೆ ಬ್ಲಾಕ್ ಅಧ್ಯಕ್ಷರಾದ ಸಲೀಂ ಲಾಯಿಲ, ಕಾರ್ಯದರ್ಶಿ ಮರ್ಷಾ ಉಜಿರೆ, ಸಾದಿಕ್ ಲಾಯಿಲ, ಬೆಳ್ತಂಗಡಿ ನಗರ ಸಮಿತಿ ಉಪಾಧ್ಯಕ್ಷರಾದ ಇಸ್ಮಾಯಿಲ್ ಬೆಳ್ತಂಗಡಿ ಹಾಗೂ ಪಕ್ಷದ ಬ್ರಾಂಚ್ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರೌಫ್ ಪುಂಜಾಲಕಟ್ಟೆ ಸ್ವಾಗತಿಸಿ, ಧನ್ಯವಾದಗೈದರು.

Related posts

ಪಟ್ರಮೆ ನಿವಾಸಿ ಕೊರಗಪ್ಪ ನಾಯ್ಕ ಡೆಂಗ್ಯೂ ಜ್ವರದಿಂದ ನಿಧನ

Suddi Udaya

ವಾಹನಗಳಿಗೆ ಎಲ್‌ಇಡಿ ಬಲ್ಬ್ ನಿಷೇಧ: ನಿಯಮ ಉಲ್ಲಂಘಿಸಿದರೆ ಜುಲೈ 1ರಿಂದಲೇ ದಂಡ

Suddi Udaya

ಶಿಶಿಲ ಗ್ರಾ.ಪಂ ನಲ್ಲಿ ಕಸ್ತೂರಿರಂಗನ್ ವಿರೋಧಿಸುವ ಬಗ್ಗೆ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ : ಗ್ರಾಮೀಣ ಭಾಗದ ವಿವಿಧೆಡೆ ಕಾಲುಸಂಕ ನಿರ್ಮಾಣಕ್ಕೆ ರೂ.1 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ವೇಣೂರು ಐಟಿಐಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷರಾಗಿ ಬೆಳ್ತಂಗಡಿ ಘಟಕಾಧ್ಯಕ್ಷ ಶಂಕರ್ ರಾವ್ ಆಯ್ಕೆ

Suddi Udaya
error: Content is protected !!