23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಡಿಪ್ಪೊದಲ್ಲಿ ಉಚಿತ ರಕ್ತದೊತ್ತಡ , ಮಧುಮೇಹ ಪರೀಕ್ಷೆ

ಬೆಳ್ತಂಗಡಿ : ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಘಟಕ , ಜ್ಯೂನಿಯರ್ ರೆಡ್ ಕ್ರಾಸ್ ಧರ್ಮಸ್ಥಳ ಆಂಗ್ಲ ಮಾದ್ಯಮ ಶಾಲೆ ಇವುಗಳ ಜಂಟಿ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಡಿಪ್ಪೊ ದಲ್ಲಿ ಉಚಿತ ರಕ್ತದೊತ್ತಡ , ಮಧುಮೇಹ ಪರೀಕ್ಷೆ ನಡೆಸಲಾಯಿತು.

ಕಾರ್ಯಕ್ರಮವನ್ನು ಕೆ.ಎಸ್.ಆರ್.ಟಿ.ಸಿ ಧರ್ಮಸ್ಥಳ ಡಿಪ್ಪೊ ಮ್ಯಾನೇಜರ್ ರಮ್ಯ ಕೆ.ಎಮ್ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಹರಿದಾಸ್ ಎಸ್ .ಎಂ , ಕಾರ್ಯದರ್ಶಿ ಯಶವಂತ್ ಪಟವರ್ಧನ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಘಟಕದ ಸದಸ್ಯರು , ಧರ್ಮಸ್ಥಳ ಆಂಗ್ಲ ಮಾದ್ಯಮ ಶಾಲೆಯ ಮುಖ್ಯಶಿಕ್ಷಕಿ ಪರಿಮಳ ಎಂ.ವಿ , ಸಹ ಶಿಕ್ಷಕರಾದ ಜ್ಯೋತಿ ಲಕ್ಷ್ಮಿ , ಸನ್ಮತಿ , ಜ್ಯೂನಿಯರ್ ರೆಡ್ ಕ್ರಾಸ್ ಧರ್ಮಸ್ಥಳ ಘಟಕದ ವಿದ್ಯಾರ್ಥಿಗಳು ಭಾಗವಹಿಸಿದ್ದರು . ಈ ಸಂದರ್ಭದಲ್ಲಿ ಕೆ.ಎಸ್.ಆರ್.ಟಿ.ಸಿ ಧರ್ಮಸ್ಥಳ ಡಿಪ್ಪೊದಲ್ಲಿರುವ ಸಿಬ್ಬಂದಿಗಳಿಗೆ , ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ , ನಿರ್ವಾಹಕರಿಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ ಉಚಿತವಾಗಿ ರಕ್ತದೊತ್ತಡ , ಮಧುಮೇಹ ಪರೀಕ್ಷೆ ನಡೆಸಲಾಯಿತು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಶ್ರೀ ಕ್ಷೇತ್ರ ಧರ್ಮಸ್ಥಳ ಧಮಾ೯ಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಡಾ.ಗುರುರಾಜ ಕರ್ಜಗಿಯವರಿಂದ ಸರ್ವಧರ್ಮ ಸಮ್ಮೇಳನ 91ನೇ ಅಧಿವೇಶನ ಉದ್ಘಾಟನೆ

Suddi Udaya

ಪೆರಿಂಜೆ : ಮಿಲಾದ್ ಆಚರಣೆಯ ಪ್ರಯುಕ್ತ ಮದ್ರಸ ವಿದ್ಯಾರ್ಥಿಗಳಿಂದ ‘ನೂರುನ್ ಆಲಾ ನೂರ್ ‘ಕಾರ್ಯಕ್ರಮ

Suddi Udaya

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

Suddi Udaya

ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಕುವೆಟ್ಟು: ವಿದ್ಯುತ್ ಅವಘಡದಿಂದ ಸಹಾಯಕ ಪವರ್‌ಮ್ಯಾನ್ ಮೃತ್ಯು

Suddi Udaya

ಕೂಕ್ರಬೆಟ್ಟು, ಕೊಕ್ರಾಡಿ ಶಾಲೆಗಳ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಲಾ ₹ 2 ಲಕ್ಷ ಮಂಜೂರು

Suddi Udaya
error: Content is protected !!