23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯಿತು.

ಕನ್ನಡ ಭುವನೇಶ್ವರಿ ದೇವಿಯ ಮುಂದೆ ದೀಪ ಪ್ರಜ್ವಲಿಸಿ, ಪುಷ್ಪಾರ್ಚನೆ ಮಾಡಿ ಮಾತನಾಡಿದ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರು ಕನ್ನಡಿಗರಾದ ನಾವು, ಜಾತಿ – ಮತ – ಪಂಥಗಳ ಭೇದ ಮರೆತು, ಕನ್ನಡ ಎನ್ನುವ ಹೆಸರಿನಲ್ಲಿ ಬಾಳುತ್ತಿದ್ದೇವೆ. ಕನ್ನಡ ನಮ್ಮ ಭಾವೈಕ್ಯತೆಯನ್ನು ಹೆಚ್ಚಿಸುವ ಭಾಷೆ ಎಂದರು.


ಪ್ರಾಸ್ತಾವಿಕವಾಗಿ ಮಾತನಾಡಿದ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ ಅವರು, ಜಗತ್ತಿಗೆ ಕನ್ನಡಿಗರು ನೀಡಿದ ಕೊಡುಗೆ ಅಮೂಲ್ಯವಾದುದು. ಅದನ್ನು ಸ್ಮರಿಸಿ, ಮುಂದುವರೆಸುವ ಜವಾಬ್ದಾರಿ ನಮ್ಮ ತಲೆಮಾರಿನ ಮೇಲಿದೆ ಎಂದರು.

ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್, ಆಡಳಿತ ಮಂಡಳಿಯ ಸಹನಾ ಜೈನ್, ಶೈಕ್ಷಣಿಕ ಸಂಯೋಜಕಿ ನಿಶಾ ಪೂಜಾರಿ, ಭೌತ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಸತ್ಯ ನಾರಾಯಣ ಭಟ್, ವಾಣಿಜ್ಯ ವಿಭಾಗದ ಡೀನ್ ಸಂತೋಷ್ ಕೆ, ಮುಖ್ಯಸ್ಥ ಪ್ರಸನ್ನ ಭೋಜ, ಉಪನ್ಯಾಸಕರಾದ ರಘು ಬಿಜೂರು ,ಅರುಣ್ ಕ್ಯಾಸ್ಟೋಲಿನ್, ಬಿ ಜಿ ಬಿರಾದಾರ್ , ಡಾ.ಆಸ್ಟಿನ್, ಉಷಾ ಬಿಕೆ , ದಿಶಾ, ಜ್ಯೋತಿ ಹೆಗ್ಡೆ, ಹೃತಿಕ್ ,ಚರಣ್, ಅರುಣ್ ಕುಮಾರ್, ಲೇಖನ, ಚೈತ್ರ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕ ತಿಪ್ಪೇ ಸ್ವಾಮಿ ಪ್ರಾರ್ಥಿಸಿದರು. ಮೊಹಮ್ಮದ್ ಮುನೀರ್ ನಿರೂಪಿಸಿದರು. ಕನ್ನಡ ವಿಭಾಗ ಮುಖ್ಯಸ್ಥ ಜಯರಾಮ್ ವಂದಿಸಿದರು.

Related posts

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಸ್ವಾಗತ ಗೋಪುರ ಉದ್ಘಾಟನೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಪುದುವೆಟ್ಟು ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸಿಂಧೂ ಕೆ.ಎಸ್ ಯವರಿಂದ ನಾಮಪತ್ರ ಸಲ್ಲಿಕೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಗೆ ಶೇ.100 ಸಾಧನೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಚಾರ್ಮಾಡಿ, ಘಟಕ ಶ್ರೀ ರಾಮ್ ಚಾರ್ಮಾಡಿ ಇದರ ಸಹಭಾಗಿತ್ವದಲ್ಲಿ ಹೊನಲು ಬೆಳಕಿನ ಹಿಂದೂ ಭಾಂಧವರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!