23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಸುಗಮ ಸಂಜೀವಿನಿ ಹಾಗೂ ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದಿಂದ ಸಮಗ್ರ ಕೃಷಿ ಚಟುವಟಿಕೆಯ ಮಾಹಿತಿ ಕಾರ್ಯಾಗಾರ

ತಣ್ಣೀರುಪಂತ ಸುಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಮತ್ತು ಕನಸು ಸಂಜೀವಿನಿ ಮಹಿಳಾ ಒಕ್ಕೂಟ ಬಾರ್ಯ ಇದರ ಸಮಗ್ರ ಕೃಷಿ ಚಟುವಟಿಕೆಯ ಕುರಿತು ಮಾಹಿತಿ ಕಾರ್ಯಗಾರವನ್ನು ತಣ್ಣೀರುಪಂಥ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸವಿತಾ ಇವರ ಸಮ್ಮುಖದಲ್ಲಿ ನಡೆಸಲಾಯಿತು.

ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶ್ರೀಮತಿ ಪ್ರತಿಮಾ ಹಾಗೂ ಜಿಲ್ಲಾ ಕೃಷಿ ವ್ಯವಸ್ಥಾಪಕ ವಿನಿತ್ ಸಮಗ್ರ ಕೃಷಿ ನಿರ್ವಹಣೆಯ ಕುರಿತು ಸದಸ್ಯರಲ್ಲಿ ಐಎಫ್ ಸಿ ಮೂಲಕ ಅನುಷ್ಠಾನ ಗೊಳಿಸಬಹುದಾದ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು ಮತ್ತು ಚರ್ಚಿಸಿದರು.

ಈ ಸಂದರ್ಭದಲ್ಲಿ ತಾಲೂಕು ವ್ಯವಸ್ಥಾಪಕ ಬಂಗಾರಪ್ಪ ಮತ್ತು ಕೃಷಿಯೇತರ ಮ್ಯಾನೇಜರ್ ನಿತಿಶ್ ಕುಮಾರ್, ವಲಯ ಮೇಲ್ವಿಚಾರಕರಾದ ಜಯಾನಂದ ಹಾಗೂ ಸ್ವಸ್ತಿಕ್ ಉಪಸ್ಥಿತರಿದ್ದರು. ಹಾಗೆಯೇ ತಣ್ಣೀರುಪಂತ ಗ್ರಾಮ ಪಂಚಾಯತಿನ ಅಧ್ಯಕ್ಷೆ ಶ್ರೀಮತಿ ಹೇಮಾವತಿ , ಅಭಿವೃದ್ಧಿ ಅಧಿಕಾರಿ ಸುಮಯ್ಯ ಜಿ. ಹೆಚ್. , ಕಾರ್ಯದರ್ಶಿ ಆನಂದ , ಸಿಬ್ಬಂದಿಗಳು ಹಾಗೂ ಸುಗಮ ಸಂಜೀವಿನಿ ಮತ್ತು ಕನಸು ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ, ಪದಾಧಿಕಾರಿಗಳು, ಒಕ್ಕೂಟದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸ್ವಸ್ತಿಕ್ ಜೈನ್ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ಸೌಮ್ಯಶ್ರೀ ಸ್ವಾಗತಿಸಿದರು. ಕೃಷಿ ಸಖಿ ಶ್ರೀಮತಿ ಶೋಭಾ ಧನ್ಯವಾದವಿತ್ತರು.

Related posts

ಮೊಗ್ರು: ಕಂಚಿನಡ್ಕ ದಲ್ಲಿ ಗುಡ್ಡ ಕುಸಿತ: ಬಿರುಕು ಬಿಟ್ಟ ಮನೆ: ಸಂಪೂರ್ಣ ಹಾನಿ

Suddi Udaya

ಎಸ್‌.ಐ.ಟಿ ಕಾರ್ಯಾಚರಣೆಯ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ: ವಕೀಲ ಮಂಜುನಾಥ ಎನ್. ರವರ ವಿರುದ್ಧ ದೂರು ದಾಖಲು

Suddi Udaya

ಜೆಸಿಐ ಮಡಂತ್ಯಾರು ವತಿಯಿಂದ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ

Suddi Udaya

ಜೂ.15: ಮಡಂತ್ಯಾರ್‌ನಲ್ಲಿ ಆಲ್ಕೋಹಾಲಿಕ್ಸ್ ಅನೋನಿಮಸ್ (ಎ.ಎ) ಗ್ರೂಪ್‌ನ ಆರಂಭ: ಫಾ. ಸ್ಟಾನಿ ಗೋವಿಯಸ್

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯರವರ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರಿನ ಅರುಣ್ ಪುರ್ಟಾಡೊ ನೇಮಕ

Suddi Udaya

ವೇಣೂರು ಪೊಲೀಸ್ ಠಾಣೆ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಅಕ್ರಮ ಸಾಗಾಣೆ ವಿರುದ್ಧದ ಜನಜಾಗೃತಿ ಅಭಿಯಾನ ಹಾಗೂ ಅರಿವು ಕಾರ್ಯಕ್ರಮ

Suddi Udaya
error: Content is protected !!