ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಸುಗಮ ಸಂಜೀವಿನಿ ಹಾಗೂ ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದಿಂದ ಸಮಗ್ರ ಕೃಷಿ ಚಟುವಟಿಕೆಯ ಮಾಹಿತಿ ಕಾರ್ಯಾಗಾರ

ತಣ್ಣೀರುಪಂತ ಸುಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಮತ್ತು ಕನಸು ಸಂಜೀವಿನಿ ಮಹಿಳಾ ಒಕ್ಕೂಟ ಬಾರ್ಯ ಇದರ ಸಮಗ್ರ ಕೃಷಿ ಚಟುವಟಿಕೆಯ ಕುರಿತು ಮಾಹಿತಿ ಕಾರ್ಯಗಾರವನ್ನು ತಣ್ಣೀರುಪಂಥ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸವಿತಾ ಇವರ ಸಮ್ಮುಖದಲ್ಲಿ ನಡೆಸಲಾಯಿತು.

ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶ್ರೀಮತಿ ಪ್ರತಿಮಾ ಹಾಗೂ ಜಿಲ್ಲಾ ಕೃಷಿ ವ್ಯವಸ್ಥಾಪಕ ವಿನಿತ್ ಸಮಗ್ರ ಕೃಷಿ ನಿರ್ವಹಣೆಯ ಕುರಿತು ಸದಸ್ಯರಲ್ಲಿ ಐಎಫ್ ಸಿ ಮೂಲಕ ಅನುಷ್ಠಾನ ಗೊಳಿಸಬಹುದಾದ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು ಮತ್ತು ಚರ್ಚಿಸಿದರು.

ಈ ಸಂದರ್ಭದಲ್ಲಿ ತಾಲೂಕು ವ್ಯವಸ್ಥಾಪಕ ಬಂಗಾರಪ್ಪ ಮತ್ತು ಕೃಷಿಯೇತರ ಮ್ಯಾನೇಜರ್ ನಿತಿಶ್ ಕುಮಾರ್, ವಲಯ ಮೇಲ್ವಿಚಾರಕರಾದ ಜಯಾನಂದ ಹಾಗೂ ಸ್ವಸ್ತಿಕ್ ಉಪಸ್ಥಿತರಿದ್ದರು. ಹಾಗೆಯೇ ತಣ್ಣೀರುಪಂತ ಗ್ರಾಮ ಪಂಚಾಯತಿನ ಅಧ್ಯಕ್ಷೆ ಶ್ರೀಮತಿ ಹೇಮಾವತಿ , ಅಭಿವೃದ್ಧಿ ಅಧಿಕಾರಿ ಸುಮಯ್ಯ ಜಿ. ಹೆಚ್. , ಕಾರ್ಯದರ್ಶಿ ಆನಂದ , ಸಿಬ್ಬಂದಿಗಳು ಹಾಗೂ ಸುಗಮ ಸಂಜೀವಿನಿ ಮತ್ತು ಕನಸು ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ, ಪದಾಧಿಕಾರಿಗಳು, ಒಕ್ಕೂಟದ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸ್ವಸ್ತಿಕ್ ಜೈನ್ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ಸೌಮ್ಯಶ್ರೀ ಸ್ವಾಗತಿಸಿದರು. ಕೃಷಿ ಸಖಿ ಶ್ರೀಮತಿ ಶೋಭಾ ಧನ್ಯವಾದವಿತ್ತರು.

Related posts

ಲಾಯಿಲದಲ್ಲಿ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ಕಾಳಿಕಾಂಬಾ, ವರಮಹಾಲಕ್ಷ್ಮೀ ಪೂಜೆ: ಬೆಸ್ಟ್ ಎಂಎಲ್ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಖೋ ಖೋ ಪಂದ್ಯಾಟ: ವೇಣೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ದಾನ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ “ಯಕ್ಷಗಾನದಲ್ಲಿ ಮಹಿಳೆಯರ ಸಮಾನತೆ” ಉಪನ್ಯಾಸ ಕಾರ್ಯಕ್ರಮ

Suddi Udaya

ಅಂಡಿಂಜೆ: ಕೈಪಿಜಾಲು ಮನೆಯ ಹರೀಶ್ ಕೆ. ಆಚಾರ್ಯ ನಿಧನ

Suddi Udaya

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!