25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಕನ್ನಡ ರಾಜ್ಯೋತ್ಸವನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರು ಡಾ. ಭೋಜಮ್ಮ ಕೆಎನ್ ದೀಪ ಬೆಳಗಿಸಿ ಮಾತನಾಡಿ ಕನ್ನಡ ಭಾಷೆಯ ಮಹತ್ವ ಹಾಗೂ ಕನ್ನಡ ಉಳಿವಿಗಾಗಿ ಮುಂದಿನ ಯುವ ಪೀಳಿಗೆ ಸಂಸ್ಕೃತಿ , ಸಂಸ್ಕಾರಗಳಿಗೆ ,ಪ್ರಾಧ್ಯಾನತೆ ಕೊಡಬೇಕು ಎಂಬುದನ್ನು ತಿಳಿಸಿದರು. ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಹೇಮಲತಾ ಎಂ ಆರ್ ಉಪಸ್ಥಿತರಿದ್ದರು.

ಮಕ್ಕಳಿಗೆ ಕನ್ನಡ ರಾಜ್ಯೋತ್ಸವಕ್ಕೆ ಸಂಬಂಧಿಸಿದಂತೆ, ಸಾಂಸ್ಕೃತಿಕ ಕಾರ್ಯಕ್ರಮ ಗಾದೆ ಮಾತುಗಳು ಸುಂದರ ಕೈಬರಹ, ಒಗಟುಗಳು, ಪದ್ಯ ರಚನೆ, ನೃತ್ಯ, ರಸಪ್ರಶ್ನೆ, ಗುಂಪು ಗೀತ ಗಾಯನ, ಭಾಷಣ ಸ್ಪರ್ಧೆ ಇತ್ಯಾದಿ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.

ಅಂಜಲಿ ಸ್ವಾಗತಿಸಿ, ದಿಶಾ ಪಿ ಶೆಟ್ಟಿ ಧನ್ಯವಾದವಿತ್ತರು. ಲಾಸ್ಯ ಅತಿಥಿ ಪರಿಚಯವನ್ನುಮಾಡಿದರು. ಅನಘ ಮರಾಠೆ ನಿರೂಪಿಸಿದರು.
‌ ‌‌ ‌ ಶಿಕ್ಷಕರುಗಳಾದ ಸೌಮ್ಯ ಪಿ, ನೀತಾ ಕೆ.ಎಸ್, ಶ್ರೇಯಾಂಸ ಜೈನ್, ಸಹನಾ, ಅಮಿತಾ ಪ್ರವೀಣ್ ಎನ್ ರವರ ನೇತೃತ್ವದಲ್ಲಿ ಎಲ್ಲಾ ಶಿಕ್ಷಕ / ಕಿಯರ ಸಹಕರಿಸಿದರು.

Related posts

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ ಕೇವಲ ಎರಡೇ ದಿನಗಳು ಬಾಕಿ

Suddi Udaya

ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪಿಡಿಒ ಆಗಿ ಜಯರಾಜ್ ಅಧಿಕಾರ ಸ್ವೀಕಾರ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣ ಸಮಾವೇಶ

Suddi Udaya

3ನೇ ಹಂತದ ಪಿಎಂಶ್ರೀ ಯೋಜನೆಗೆ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆ ಆಯ್ಕೆ

Suddi Udaya

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya
error: Content is protected !!