32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ

ಬೆಳ್ತಂಗಡಿ: 70ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಬೆಳ್ತಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ ನಡೆಯಿತು.

ಗಮಕ ವಾಚನವನ್ನು ತಮ್ಮ ಸುಶ್ರಾವ್ಯ ಕಂಠದ ಮೂಲಕ ಮಧೂರು ವಿಷ್ಣು ಪ್ರಸಾದ ಕಲ್ಲೂರಾಯ ನಡೆಸಿಕೊಟ್ಟರು. ಗಮಕ ವ್ಯಾಖ್ಯಾನಕಾರರಾಗಿ ಪ್ರೊ| ಮಧೂರು ಮೋಹನ ಕಲ್ಲೂರಾಯ ಭಾಗವಹಿಸಿ ಪ್ರೇಕ್ಷಕರ ಮನ ಗೆದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಕುಮಾರ್ ಜೈನ್ ವಹಿಸಿದರು. ಮೋಹನ ಕಲ್ಲೂರಾಯರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಪ್ರಥಮ ಪಿಯುಸಿ ಪಠ್ಯ ಭಾಗದ ವಿಷಯವೇ ಗಮಕದಲ್ಲಿ ಆಯ್ಕೆ ಮಾಡಿಕೊಂಡ ಕಾರಣ ವಿದ್ಯಾರ್ಥಿಗಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು.

ಉಪನ್ಯಾಸಕ ಆನಂದ ಸ್ವಾಗತಿಸಿ, ಉಪನ್ಯಾಸಕ ಶೀನಾ ನಾಡೋಳಿ ವಂದಿಸಿದರು. ಉಪನ್ಯಾಸಕಿ ಡಾ.ಅಮೃತ ರಶ್ಮಿ ಫೆರ್ನಾಂಡಿಸ್ ಕಾರ್ಯಕ್ರಮ ಉಪನ್ಯಾಸಕ ಡಾ. ಗಣೇಶ್ ಭಟ್ ಅವರು ಪ್ರಾಸ್ತಾವಿಕ ಮಾತನಾಡಿದರು.
ವೇದಿಕೆಯಲ್ಲಿ ಪ್ರೌಢಶಾಲಾ ವಿಭಾಗದ ಮುಖ್ಯಸ್ಥರಾದ ಪೂರ್ಣಿಮಾ ಉಪಸ್ಥಿತರಿದ್ದರು. ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗದ ಉಪನ್ಯಾಸಕರು, ಅಧ್ಯಾಪಕರು, ವಿದ್ಯಾರ್ಥಿಗಳು , ಬಿಇಡಿ ಪ್ರಶಿಕ್ಷಣಾರ್ಥಿಗಳು ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು.

Related posts

ನಿರಂತರ ಮಳೆ: ಮದ್ದಡ್ಕ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ರಸ್ತೆಯಲ್ಲೇ ಹರಿದ ನೀರು

Suddi Udaya

ಮೂಡುಕೋಡಿಯಲ್ಲಿ ನಿಧಾನಗತಿಯಲ್ಲಿ ಸಾಗುತ್ತಿರುವ ಮತದಾನ : ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ಜನವೋ ಜನ

Suddi Udaya

ಬೆಳ್ತಂಗಡಿ: ಜಿಲ್ಲಾಮಟ್ಟದ ಯುವಜನ ಮೇಳ

Suddi Udaya

ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜೈಸನ್ ಪಟ್ಟೇರಿಲ್ ರವರಿಗೆ ಉಜಿರೆ ಕೆ.ಎಸ್.ಎಂ.ಸಿ.ಎ ಘಟಕದಿಂದ ಅಭಿನಂದನೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya

ಭಾರೀ ಗಾಳಿ ಮಳೆ: ಮಿತ್ತಬಾಗಿಲು ವಿನಯಚಂದ್ರ ರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya
error: Content is protected !!