37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಮಸ್ಯೆ

ಮೂಲ ಸೌಕರ್ಯದಿಂದ ವಂಚಿತವಾಗಿದೆ ಬಂಗಾಡಿ ಅಂಗನವಾಡಿ ಕೇಂದ್ರ: ಸಮಸ್ಯೆಯನ್ನು ಸರಿಪಡಿಸುವಂತೆ ಸಾರ್ವಜನಿಕರ ಆಗ್ರಹ

ಇಂದಬೆಟ್ಟು: ಇಲ್ಲಿಯ ಬಂಗಾಡಿ 2ನೇ ವಾರ್ಡ್ ನಲ್ಲಿರುವ ರೂ. 16 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಅಂಗನವಾಡಿ ಕೇಂದ್ರದಲ್ಲಿ ಪ್ರಾರಂಭದಲ್ಲಿ 20-25 ಮಕ್ಕಳಿದ್ದು, ಈಗ ಇಲ್ಲಿ ಹಲವು ಸಮಯಗಳಿಂದ ಕುಡಿಯಲು ಹಾಗೂ ಶೌಚಾಲಯಕ್ಕೆ ನೀರೆ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ.

ಪಂಚಾಯಿಂದ ಬರುವ ನಳ್ಳಿ ನೀರು ಅಂಗನವಾಡಿ ವರೆಗೆ ತಲುಪುವುದೇ ಇಲ್ಲ, ಮಕ್ಕಳು ಶೌಚಾಲಯವಿದ್ದರು ನೀರಿಲ್ಲದ ಕಾರಣ ಅಂಗನವಾಡಿಯ ಹೊರಗಡೆ ಬರಬೇಕು. ಇದರ ಸುತ್ತಮುತ್ತ ಸರಿಯಾದ ಕಂಪೌಂಡ್ ಇಲ್ಲ. ಬದಿಯಲ್ಲೆ ದೊಡ್ಡ ಹೊಂಡಗಳಿದ್ದು ಮಕ್ಕಳಿಗೆ ಅಪಾಯಕಾರಿಯಾಗಿದೆ. ಸುತ್ತಮುತ್ತ ಗೋಡೆ ಬದಿಯಲ್ಲೆ ಗಿಡ ಗಂಟಿಗಳು ಬೆಳೆದು ಹಾವು, ಹೆಗ್ಗಣಗಳ ವಾಸ ಸ್ಥಳವಾಗಿದೆ. ಸರಿಯಾದ ವ್ಯವಸ್ಥೆ ಇಲ್ಲದೆ ಪೊಷಕರು ಮಕ್ಕಳನ್ನು ಅಂಗನವಾಡಿಗೆ ಕಳುಹಿಸಲು ಹಿಂಜರಿಯುತ್ತಿದ್ದಾರೆ. ಈಗ 10-12 ಮಕ್ಕಳಿದ್ದು, ಪೊಷಕರೇ ಬಂದು ಬಕೆಟ್, ಕೊಡಪಾನಗಳಲ್ಲಿ ಹತ್ತಿರದ ಮನೆಗಳಿಂದ ಕುಡಿಯಲು ನೀರು ತರುವಂತಾಗಿದೆ.

ಆದರಿಂದ ಸಂಬಂಧಪಟ್ಟ ಅಧಿಕಾರಿಗಳು, ಮೇಲ್ವಿಚಾರಕರು ಇದರ ಕಡೆ ಗಮನಹರಿಸಿ ಶೀಘ್ರದಲ್ಲಿ ಸರಿಯಾದ ವ್ಯವಸ್ಥೆಯನ್ನು ಕಲ್ಪಿಸುವಂತೆ ಸಾರ್ವಜನಿಕ ಆಗ್ರಹವಾಗಿದೆ.

Related posts

ಸಾಮಾಜಿಕ ಜಾಲತಾಣದಲ್ಲಿ ಸಿ.ಎಂ. ಸಿದ್ದರಾಮಯ್ಯರವರ ಬಗ್ಗೆ ಅಶ್ಲೀಲ ಆಡಿಯೋ ವೈರಲ್: ರಜಿತ್ ಕೊಕ್ಕಡ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಔಟ್ ಸೈಡ್ ವಾಕರ್ ವಿತರಣೆ

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಡಿ. 29 ರಂದು ನಡೆಯಲಿರುವ ಬಳ್ಳಮಂಜ ಶೇಷ ನಾಗ ಜೋಡು ಕರೆ ಕಂಬಳದ ಪೂರ್ವ ಸಿದ್ಧತಾ ಸಭೆ

Suddi Udaya

ಬಹರೈನ್, ದುಬೈಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 169 ನೇ ಜಯಂತಿಯಲ್ಲಿ ಬ್ರಹ್ಮಾನಂದ ಶ್ರೀಗಳಿಂದ ಆಶೀರ್ವಚನ

Suddi Udaya

ಕಳೆಂಜ: ಶಿಬರಾಜೆ ಪಾದೆ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದು ಹಾನಿ

Suddi Udaya
error: Content is protected !!