ಧರ್ಮಸ್ಥಳ: ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಮಂಗಳೂರು ಇದರ ನವೀಕೃತ ಕಟ್ಟಡ “ವಿಶ್ವಸೌಧ” ಇದರ ಉದ್ಘಾಟನೆ ಮತ್ತು ವಜ್ರ ಮಹೋತ್ಸವದ ಸಮಾರೋಪ ಸಮಾರಂಭ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ನೀಡಲಾಯಿತು.
ಈ ಸಂದರ್ಭದಲ್ಲಿ ಪ್ರಧಾನ ವ್ಯವಸ್ಥಾಪಕರಾದ ಯಜ್ಞೇಶ್ವರ. ನಿರ್ದೇಶಕರಾದ ಕೆ ಶಶಿಕಾಂತ್ ಆಚಾರ್ಯ, ಮಂಜುನಾಥ ಆಚಾರ್ಯ, ಗುರು ಸೇವಾ ಪರಿಷತ್ತಿನ ಹರಿಶ್ಚಂದ್ರ ಆಚಾರ್ಯ, ಗುರುವಾಯನಕೆರೆ ಶಾಖಾ ವ್ಯವಸ್ಥಾಪಕ ಪ್ರಶಾಂತ್ ಎಚ್ ಆಚಾರ್ಯ, ಸಿಬ್ಬಂದಿಗಳಾದ ರಾಮ್ ಪ್ರಸಾದ್ ಆಚಾರ್ಯ, ಯಜ್ಞೇಶ್ ಆಚಾರ್ಯ ಉಪಸ್ಥಿತರಿದ್ದರು. ಪೂಜ್ಯರು ಕಟ್ಟಡ ಉದ್ಘಾಟನೆ ಹಾಗೂ ವಜ್ರ ಮಹೋತ್ಸವ ಸಮಾರೋಪ ಸಮಾರಂಭಕ್ಕೆ ಶುಭ ಹಾರೈಸಿದರು.











