ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಇದರ ನವೀಕೃತ ಕಟ್ಟಡ “ವಿಶ್ವಸೌಧ” ಉದ್ಘಾಟನೆ ಮತ್ತು ವಜ್ರ ಮಹೋತ್ಸವದ ಸಮಾರೋಪ ಸಮಾರಂಭ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ನೀಡಿ ಆಮಂತ್ರಿಸಲಾಯಿತು.
ಈ ಸಂದರ್ಭದಲ್ಲಿ ನಿರ್ದೇಶಕ ಮಂಜುನಾಥ ಆಚಾರ್ಯ, ಸಿಬ್ಬಂದಿ ಯಜ್ಞೇಶ್ ಆಚಾರ್ಯ, ಗ್ರಾಹಕ ದೀಪಕ್ ಆಚಾರ್ಯ ಉಪಸ್ಥಿತರಿದ್ದರು.











