25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಭಿನಂದನೆಬೆಳ್ತಂಗಡಿವರದಿ

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೇದೆ ಸುಬ್ಬ ಪೂಜಾರಿ, ಮಿತ್ತಮಾರು ಬಿರ್ಮಣ್ಣ ಪೂಜಾರಿ, ಕುಂಜೀರ ಯಾನೆ ಸಿದ್ದಪ್ಪ ಪೂಜಾರಿ,ಸಮಾಜದ ಹಿರಿಯರು,ಮಾಜಿ ಶಾಸಕ ಕೆ.ವಸಂತ ಬಂಗೇರರವರು ಸೇರಿ ಸ್ಥಾಪಿಸಿದ ಸಂಘ ಬ್ರಹ್ಮಶ್ರೀ ನಾರಾಯಣ ಗುರುಗಳ ತಥವ ಸಿದ್ದಾಂತಕ್ಕೆ ಅನುಗುಣವಾಗಿ ಸಮಾಜಮುಖಿ ಸೇವಾ ಕಾರ್ಯ

ಬೆಳ್ತಂಗಡಿ: ಮಂಗಳೂರಿನ ನೆಹರೂ ಮೈದಾನದಲ್ಲಿ ಕರ್ನಾಟಕ ಸರಕಾರದ ಆರೋಗ್ಯ ಮಂತ್ರಿಗಳು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗಣ್ಯಾತಿ ಗಣ್ಯರು ಸೇರಿಕೊಂಡು ಪ್ರಧಾನ ಮಾಡುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಸಮಾಜ ಸೇವೆಯಲ್ಲಿ ಮಂಚೂಣಿಯಲ್ಲಿ ಇರುವ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ (ರಿ)ಬೆಳ್ತಂಗಡಿಗೆ ಈ ಬಾರಿ ಲಭಿಸಿದೆ.

ಬ್ರಹ್ಮ ಶ್ರೀ ನಾರಾಯಣ ಗುರುಗಳ “ಒಂದೇ ಜಾತಿ,ಒಂದೇ ಮತ,ಒಬ್ಬನೇ ದೇವರು” ಎಂಬ ತತ್ವದಡಿಯಲ್ಲಿ “ವಿದ್ಯೆಯಿಂದ ಸ್ವತಂತ್ರರಾಗಿ ಸಂಘಟನೆಯಿಂದ ಬಲಯುತರಾಗಿ “ ಎಂಬ ದ್ಯೇಯ ವಾಕ್ಯಕ್ಕೆ ಅನುಗುಣವಾಗಿಕೇದೆ ಸುಬ್ಬ ಪೂಜಾರಿ,ಮಿತ್ತಮಾರು ಬಿರ್ಮಣ್ಣ ಪೂಜಾರಿ,ಕುಂಜೀರ ಯಾನೆ ಸಿದ್ದಪ್ಪ ಪೂಜಾರಿ ಹಾಗೂ ತಾಲೂಕಿನ ಸಮಾಜದ ಹಿರಿಯರು ಸೇರಿ ಸ್ಥಾಪಿಸಿದ ಸಂಘವು ನಂತರ ಬೆಳ್ತಂಗಡಿ ತಾಲೂಕಿನ ಮಾಜಿ ಶಾಸಕರು,ಸಂಘದ ಗೌರವಾಧ್ಯಕ್ಷರಾದ ದಿ.ಕೆ.ವಸಂತ ಬಂಗೇರರೂ ಬೆಳ್ತಂಗಡಿಯ ಹೃದಯ ಭಾಗದಲ್ಲಿ ತನಗೆ ಬಂದಂತಹ ನಿವೇಶನವನ್ನು ಸಂಘದ ಹೆಸರಿಗೆ ದಾಖಲಿಸಿ ಅದರಲ್ಲಿ ಬಂದಂತಹ ಆದಾಯವನ್ನು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸಿ ,ವಿದ್ಯಾರ್ಥಿ ವೇತನವನ್ನು ನೀಡಿ,ಅನಾರೋಗ್ಯ ಪೀಡಿತರಿಗೆ “ಸಾಂತ್ವನ ನಿಧಿ” ವಿಶೇಷ ಚೇತನರಿಗೆ ವ್ಹೀಲ್ ಚಯರ್,ಪ್ರಕೃತಿ ವಿಕೋಪಕ್ಕೆ ಒಳಗಾದವರಿಗೆ ಪರಿಹಾರ,ರಕ್ತ ದಾನ ಶಿಬಿರ,ಮೆಡಿಕಲ್ ಕ್ಯಾಂಪ್ ಗಳನ್ನು ನಡೆಸಿ ,ಗುರು ಜಯಂತಿ ಹಾಗೂ ಮಹಿಳಾ ದಿನಾಚರಣೆ ಮತ್ತು ಆಟಿದ ಕೂಟವನ್ನು ಆಯೋಜಿಸಿ ,ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣದ ಮಾರ್ಗದರ್ಶನ ಹಾಗೂ ಸಮಾಜ ಭಾಂಧವರಿಗೆ ಕ್ರೀಡಾ ಕೂಟ ಮತ್ತು ಯುವಕ ಯುವತಿಯರ ವಧು -ವರ ಅನ್ವೇಷಣಾ ಕಾರ್ಯಕ್ರಮ ,ನಾಟಿ ವೈದ್ಯರಿಗೆ ಸನ್ಮಾನ,ವೈದಿಕರ(ಶಾಂತಿ)ಸಮ್ಮೇಳನ,ದೈವಗಳ ಪಾತ್ರಿಗಳಿಗೆ ಅಭಿನಂದನಾ ಸಮಾರಂಭ ,ಮೂರ್ತೆದಾರರ ಗುರುತಿಸುವಿಕೆ ಹೀಗೆ ಹತ್ತು ಹಲವು ಸಮಾಜಮುಖಿ ಕಾರ್ಯಗಳನ್ನು ಸಂಘದ ಮಾಜಿ ಅದ್ಯಕ್ಷರುಗಳು ಹಾಗೂ ನಿರ್ದೇಶಕರು,ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ವೇದಿಕೆ ಅದ್ಯಕ್ಷರು ಹಾಗೂ ಸದಸ್ಯರ ಸಹಕಾರದಿಂದ ಪ್ರಸ್ತುತ ಅಧ್ಯಕ್ಷರಾದ ಜಯವಿಕ್ರಮ್ ಕಲ್ಲಾಪು ಮತ್ತುಎಲ್ಲಾ ನಿರ್ದೇಶಕರ ಮತ್ತು ಸದಸ್ಯರ ಸಹಕಾರದಿಂದ ಮುನ್ನಡೆಯುತ್ತಿದೆ.

Related posts

ಬೆಳ್ತಂಗಡಿ ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜ ಪ್ರಮಾಣ: ನಾನು ಯಾರಿಂದಲೂ ಹಣವನ್ನು ಪಡೆದಿಲ್ಲ, ಭ್ರಷ್ಟಾಚಾರ ನಡೆಸಿಲ್ಲ: ದೀಪ ಬೆಳಗಿಸಿ, ಮಾರಿಗುಡಿ ಎದುರು ತೆಂಗಿನ ಕಾಯಿ ಒಡೆದು ಪ್ರಮಾಣ

Suddi Udaya

ಡಿ.14 -20: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಸಪ್ತಾಹ- 2024: ಸಾಧಕರಿಗೆ ಸನ್ಮಾನ, ಸಮಾಜಸೇವಾ ಸಂಘಟನೆಗಳಿಗೆ ಸೇವಾಶ್ರೀ ಪುರಸ್ಕಾರ, ಮನೋರಂಜನಾ ಕಾರ್ಯಕ್ರಮ

Suddi Udaya

ರೂ. 2.00 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆ- ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ ಡಾಂಬರೀಕರಣ ಮತ್ತು ಒಳಚರಂಡಿ ನಿರ್ಮಾಣಕ್ಕೆ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಶಿಲಾನ್ಯಾಸ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳಾಲು ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಉಜಿರೆ: ಜೆಸಿಐ ಬೆಳ್ತಂಗಡಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ

Suddi Udaya

ಮಾಲಾಡಿ: ಕಾರು ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರನಿಗೆ ಗಾಯ

Suddi Udaya
error: Content is protected !!