ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯ ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ (ರಾಜ್ಯ ಪಠ್ಯಕ್ರಮ) ಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.

ಕಾರ್ಯಕ್ರಮದ ಅತಿಥಿ ಬಿ. ಸೋಮಶೇಖರ್ ಶೆಟ್ಟಿ, ನಿವೃತ್ತ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯವರು ಕನ್ನಡಾಂಬೆ ಗೆ ಪುಷ್ಪಾಂಜಲಿ ಮಾಡಿ ಕನ್ನಡ ನಾಡು ನುಡಿ ಸಂಸ್ಕೃತಿಯ ವಿಚಾರಗಳನ್ನು ಒಳಗೊಂಡ ಚಿತ್ರಹಾಳೆ ಬಿಡುಗಡೆಗೊಳಿಸಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕನ್ನಡ ನಾಡಿನ ಸಂಸ್ಕೃತಿ, ಇತಿಹಾಸ ಭವ್ಯವಾದುದು, ಕನ್ನಡ ನುಡಿ,ಸಂಸ್ಕೃತಿ ಯನ್ನು ಉಳಿಸಿ,ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ ,ಕನ್ನಡ ನಾಡಿನ ಏಕೀಕೃತಕ್ಕೆ ಹೋರಾಡಿದ ಮಹನೀಯರನ್ನು ನಾವು ಸ್ಮರಿಸಿ, ಕೃತಜ್ಞತೆ ಸಲ್ಲಿಸುವ ಕರ್ತವ್ಯ ನಮ್ಮದು, ನಮ್ಮ ದೇಶಕ್ಕೆ ಕನ್ನಡ ನಾಡಿನ ಕೊಡುಗೆ ಗಮನಾರ್ಹವಾದುದು, ಈ ಉತ್ಸವ ಒಂದು ದಿನಕ್ಕೆ ಸೀಮಿತವಾಗಿರಬಾರದು.
ವಿದ್ಯಾರ್ಥಿಗಳಲ್ಲಿ ಒಂದು ಗುರಿ ಇರಬೇಕು, ಅದನ್ನು ತಲುಪಲು ನೇರಮಾರ್ಗದಲ್ಲಿ ಚಲಿಸಬೇಕು, ಜೀವನದಲ್ಲಿ ಉತ್ತಮ ಸಾಧನೆ ಮಾಡಿ ಜೀವನಕ್ಕೆ ಅರ್ಥ ಒದಗಿಸಬೇಕು, ನಮ್ಮ ಭವಿಷ್ಯ ನಮ್ಮ ಕೈಯಲ್ಲಿ ಇದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾಲಕ್ಷ್ಮೀ ನಾಯಕ್ ವಹಿಸಿದ್ದರು.

ವಿದ್ಯಾರ್ಥಿ ಅದಿತಿ ಸ್ವಾಗತಿಸಿ, ಅದ್ವಿತಿ ರಾವ್ ಅತಿಥಿ ಪರಿಚಯಿಸಿದರು . ಪಲ್ಲವಿ ವಂದಿಸಿದರು. ಸಪ್ತಮಿ ನಿರೂಪಿಸಿದರು.

ವಿದ್ಯಾರ್ಥಿಗಳು ಗಾದೆಗಳ ವಾಚನ, ಒಗಟು , ಸಾಂಸ್ಕೃತಿಕ ನೃತ್ಯ, ರಾಜ್ಯೋತ್ಸವದ ದಿನಗಳ ವಿಶೇಷತೆ ಸಾರುವ ಹಾಡು ಹಾಗೂ ನೃತ್ಯಗಳ ಪ್ರದರ್ಶನ ಮಾಡಲಾಯಿತು. ನಿನಾದ 90.4 ರೆೇಡಿಯೋ ಚಾನೆಲ್ ನಲ್ಲಿ ಕನ್ನಡ ರಾಜ್ಯೋತ್ಸವದ ವಿಶೇಷ ಪ್ರಸಾರದಲ್ಲಿ ಶಾಲಾ ವಿದ್ಯಾರ್ಥಿಗಳ ರೇಡಿಯೋ ಕಾರ್ಯಕ್ರಮ ಪ್ರಸಾರವಾಗಿದ್ದು ಕನ್ನಡ ರಾಜ್ಯೋತ್ಸವ ಆಚರಣೆಗೆ ವಿಶೇಷ ಮೆರುಗು ತಂದಿತು.

ಶಿಕ್ಷಕರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳು ಮೈಸೂರು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ. ರವರ ಮೇಲೆ ಹಲ್ಲೆಗೆ ಯತ್ನ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಶ್ರೀ ಕಾಲಭೈರವೇಶ್ವರ ಒಕ್ಕಲಿಗರ ಕ್ರೆ.ಸೌ.ಸ. ಸಂಘದ ಮಹಾಸಭೆ : ಶೇ 8 ಡಿವಿಡೆಂಡ್

Suddi Udaya

ತಾಲೂಕು ಮಟ್ಟದ ಎರಡು ದಿನದ ತುಳು ಸಾಹಿತ್ಯ ರಚನಾ ಕಮ್ಮಟದ ಸಮಾರೋಪ

Suddi Udaya

ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಉಜಿರೆಯ ಆದಿತ್ಯ ಕೃಷ್ಣ ಕಾರಂತ್ ಆಯ್ಕೆ

Suddi Udaya
error: Content is protected !!