July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉದ್ಯಮಿ ಶಶಿಧರ ಶೆಟ್ಟಿ ಬರೋಡರಿಂದ ಕಾಶಿ ಶೆಟ್ಟಿಯವರ ಸ್ಮರಣಾರ್ಥ ಬಡ ಬಂಟ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು

ಬೆಳ್ತಂಗಡಿ: ತಾಲೂಕಿನ ಬಂಟರ ಸಂಘವನ್ನು ಸಾಲಮುಕ್ತಗೊಳಿಸುವಲ್ಲಿ ಬಹಳ ದೊಡ್ಡ ಕೊಡುಗೆಯನ್ನು ನೀಡಿರುವ ಬಂಟರ ಯಾನೆ ನಾಡವರ ಸಂಘ(ರಿ)ದ ಗೌರವ ಮಾರ್ಗದರ್ಶಕರಾಗಿರುವ ನವಶಕ್ತಿಯ ಉದ್ಯಮಿ ಶಶಿಧರ ಶೆಟ್ಟಿ ಬರೋಡರು, ತಮ್ಮ ತಾಯಿ ಕಾಶಿ ಶೆಟ್ಟಿಯವರ ಸ್ಮರಣಾರ್ಥ ಬೆಳ್ತಂಗಡಿ ತಾಲೂಕಿನ ಬಡ ಬಂಟ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು ನೀಡುವ ಯೋಜನೆಯನ್ನು ಘೋಷಿಸಿದ್ಧಾರೆ.

ಬಂಟರ ಸಂಘದ ಮೂಲಕ ಅನುಷ್ಠಾನಗೊಳ್ಳಲಿರುವ ಈ ಯೋಜನೆಯನ್ವಯ ಪ್ರಥಮ ಹಂತದಲ್ಲಿ ಬೆಳ್ತಂಗಡಿ ತಾಲೂಕಿನ 9 ವಲಯಗಳಿಗೆ ತಲಾ ಒಂದರಂತೆ ಒಟ್ಟು ಒಂಬತ್ತು ಕುಟುಂಬಗಳಿಗೆ ಮನೆ ನಿರ್ಮಾಣಕ್ಕಾಗಿ ತಲಾ ರೂ . 2,00,000/-( ರೂಪಾಯಿ ಎರಡು ಲಕ್ಷ ಮಾತ್ರ) ಧನಸಹಾಯವನ್ನು ನೀಡಲಾಗುತ್ತದೆ. ಬಂಟರ ಸಂಘದ ವಲಯ ಸಮಿತಿಯ ಪದಾಧಿಕಾರಿಗಳು ತಮ್ಮ ವಲಯದಿಂದ ಸಹಾಯ ಯೋಗ್ಯ ಕುಟುಂಬವನ್ನು ಗುರುತಿಸಿ, ತಾಲೂಕು ಸಮಿತಿಗೆ ಶಿಫಾರಸು ಮಾಡಿ, ಸೂಕ್ತ ಪರಿಶೀಲನೆಯ ನಂತರ ಬಂಟರ ಸಂಘದಿಂದ ಅನುಮೋದನೆಗೊಂಡ ಮನೆಯ ನಿರ್ಮಾಣದ ಸಂಪೂರ್ಣ ಉಸ್ತುವಾರಿಯನ್ನು ವಲಯ ಸಮಿತಿಯವರು ವಹಿಸಿಕೊಳ್ಳುತ್ತಾರೆ. ಮನೆ ನಿರ್ಮಾಣಕ್ಕೆ ತಗಲುವ ಹೆಚ್ಚುವರಿ ವೆಚ್ಚವನ್ನು ಶ್ರಮದಾನದ ಮೂಲಕ, ಅಗತ್ಯ ಸಾಮಗ್ರಿಗಳನ್ನು ಒದಗಿಸುವ ಮೂಲಕ ಅಥವಾ ಆರ್ಥಿಕ ನೆರವು ನೀಡುವ ಮೂಲಕ ಸ್ಥಳೀಯವಾಗಿ ಕ್ರೋಢೀಕರಿಸಬೇಕಾಗುತ್ತದೆ. ನಿಗದಿಪಡಿಸಿದ ಅವಧಿಯ ಒಳಗೆ ಕನಿಷ್ಠ ಸೌಲಭ್ಯಗಳನ್ನು ಒಳಗೊಂಡ ಸುಂದರ ಮನೆಯನ್ನು ನಿರ್ಮಿಸಿ ಕೊಡುವ ರೀತಿ ವ್ಯವಸ್ಥೆ ಕಲ್ಪಿಸಿಬೇಕಾಗುತ್ತದೆ. ವಲಯ ಸಮಿತಿಯ ಪದಾಧಿಕಾರಿಗಳು ಈ ವಿಚಾರವನ್ನು ಆದ್ಯತೆಯಲ್ಲಿ ಪರಿಗಣಿಸಿ ತಮ್ಮ ವಲಯದಿಂದ ಸಹಾಯ ಯೋಗ್ಯ ಕುಟುಂಬವನ್ನು ಗುರುತಿಸಿ, ಬಂಟರ ಸಂಘಕ್ಕೆ ಶಿಫಾರಸು ಮಾಡಬೇಕು ಹಾಗೂ ಬಡ ಬಂಟ ಕುಟುಂಬಗಳಿಗೆ ನೆರವು ನೀಡಲು ಒದಗಿ ಬಂದ ಈ ಅಪೂರ್ವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಬೆಳ್ತಂಗಡಿ ಬಂಟರ ಸಂಘ ವಿನಂತಿಸಿಕೊಂಡಿದೆ.

Related posts

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣಕ್ಕಾಗಿ ಮದ್ಯ ಮಾರಾಟದ ಹಾದಿ ಹಿಡಿದಿರುವುದು ಅತ್ಯಂತ ವಿಷಾಧನೀಯ: ಪ್ರತಾಪಸಿಂಹ ನಾಯಕ್

Suddi Udaya

ಡಿ.5 : ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಚಿನ್ನ ಪಾಲಿಶ್ ಮಾಡುವ ನೆಪದಲ್ಲಿ ವಂಚನೆ ಪ್ರಕರಣ: ಬಿಹಾರದ ಆರೋಪಿಯನ್ನು ಹೆಡೆಮುರಿ ಕಟ್ಟಿದ ವೇಣೂರು ಪೊಲೀಸರು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಗ್ರಹಣ ಸಮಾರಂಭ: ಡಾ. ಡಿ ವೀರೇಂದ್ರ ಹೆಗ್ಗಡೆಯರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲಯನ್ಸ್ ಕ್ಲಬ್ ಜಿಲ್ಲಾ ರಾಜ್ಯಪಾಲೆ ಭಾರತಿ ಬಿ.ಎಂ. ಭೇಟಿ

Suddi Udaya

ಗುರಿಪಳ್ಳದಲ್ಲಿ ಬ್ಯಾನರ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya
error: Content is protected !!