July 23, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ: ಕುದ್ರಡ್ಕದಲ್ಲಿ ಮೂವರು ಮಕ್ಕಳಿಗೆ ಹಾವು ಕಡಿತ

ಬೆಳ್ತಂಗಡಿ: ಒಂದೇ ಮನೆಯೊಳಗೆ ಮಲಗಿದ್ದ ಮೂವರು ಮಕ್ಕಳಿಗೆ ವಿಷಪೂರಿತ ಕನ್ನಡಿ ಹಾವೊಂದು ಕಡಿದ ಘಟನೆ ನ.2ರಂದು ತಾಲೂಕಿನ ತಣ್ಣೀರುಪಂತ ಸಮೀಪದ ಕುದ್ರಡ್ಕದಲ್ಲಿ ಸಂಭವಿಸಿದೆ. ಗ್ರಾಮೀಣ ಭಾಗವಾಗಿದ್ದು ತಡರಾತ್ರಿ ಆಸ್ಪತ್ರೆಗೆ ಕರೆದೊಯ್ಯಲು ಯಾವುದೇ ವಾಹನ ಸಿಗದಿದ್ದಾಗ ನಾಟಿವೈದ್ಯರೊಬ್ಬರ ಸಕಾಲಿಕ ನೆರವಿನಿಂದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕುದ್ರಡ್ಕ ನಿವಾಸಿ ವಿಜಯ ಮಡೆಕ್ಕಿಲ ಅವರ ಮಗ ದಕ್ಷಿತ್ ಮತ್ತು ಅಕ್ಕನ ಮಕ್ಕಳಾದ ವಿಶ್ಮಿತಾ ಹಾಗೂ ಅನ್ವಿತಾ ಒಂದೇ ಕೋಣೆಯಲ್ಲಿ ಮಲಗಿದ್ದು, ರಾತ್ರಿ 11.30ರ ಸುಮಾರಿಗೆ ಕೋಣೆಯೊಳಗೆ ಪ್ರವೇಶಿಸಿದ ವಿಷಪೂರಿತ ಕನ್ನಡಿ ಹಾವು ದಕ್ಷಿತ್ ನ ಎರಡೂ ಕೈಗಳಿಗೆ ಕಚ್ಚಿತು. ಬಳಿಕ ವಿಶ್ಮಿತಾ ಹಾಗೂ ಅನ್ವಿತಾ ಅವರ ಕೈಗೂ ಕಚ್ಚಿದ್ದು ಮಕ್ಕಳು ಭೀತಿಯಿಂದ ಕಂಗೆಟ್ಟಿದ್ದರು.

ಮಕ್ಕಳನ್ನು ತ್ವರಿತವಾಗಿ ಆಸ್ಪತ್ರೆಗೆ ಕರೆದೊಯ್ಯುವ ಅನಿವಾರ್ಯ ಇದ್ದರೂ ಉಪ್ಪಿನಂಗಡಿಯನ್ನು ಸಂಪರ್ಕಿಸುವ ಗುರುವಾಯನಕೆರೆ ಉಪ್ಪಿನಂಗಡಿ ರಸ್ತೆಯ ದುಃ ಸ್ಥಿತಿಯಿಂದಾಗಿ ಆಸ್ಪತ್ರೆ ತಲುಪುವುದು ವಿಳಂಬವಾಗಿ ಪ್ರಾಣಾಪಾಯವಾಗುವ ಸಾಧ್ಯತೆ ಇರುವುದರಿಂದ ಕಂಗೆಟ್ಟಮನೆಯವರು ತಣ್ಣೀರುಪಂತ ಗ್ರಾಮದಲ್ಲಿನ ನಾಟಿ ವೈದ್ಯ ಸೂರಪ್ಪ ಪೂಜಾರಿ ಅವರ ಮನೆ ಬಾಗಿಲು ತಟ್ಟಿದ್ದರು. ಮಧ್ಯರಾತ್ರಿ ಹಾವು ಕಡಿತಕ್ಕೊಳಗಾಗಿ ಮನೆಗೆ ಬಂದ ಮೂವರು ಮಕ್ಕಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ನಾಟಿವೈದ್ಯ ಸೂರಪ್ಪ ಪೂಜಾರಿ (77) ಅವರು ತಾವು ಪರಂಪರಾಗತವಾಗಿ ಅರಿತುಕೊಂಡಿರುವ ಔಷಧವನ್ನು ಮಕ್ಕಳಿಗೆ ನೀಡಿ ಅಪಾಯದಿಂದ ಪಾರು ಮಾಡಿದ್ದಾರೆ.

Related posts

ಪಂಪು ಶೆಡ್ ಫ್ಯೂಸ್ ನಲ್ಲಿ ಅವಿತು ಕೊಂಡ ಅಪಾಯಕಾರಿ ಹಾವು

Suddi Udaya

ಉಜಿರೆ ಎಸ್.ಡಿ.ಎಮ್ ಬಿ. ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ಲೂಮೋಸ್ ವಿದ್ಯಾರ್ಥಿ ಸಂಘದ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ

Suddi Udaya

ಶಶಿಧರ ಶೆಟ್ಟಿ ಬರೋಡ ಇವರ ಮಾತೃಶ್ರೀ ಶ್ರೀಮತಿ ಕಾಶಿ ಶೆಟ್ಟಿಯವರ ಸ್ಮರಣಾರ್ಥ “ಕಾಶಿ ಸದನ” ವಸತಿ ಯೋಜನೆಯ ಸಹಾಯ ಹಸ್ತ: ತಾಲೂಕು ಬಂಟರ ಸಂಘದ ನೇತೃತ್ವದಲ್ಲಿ ತಾಲೂಕಿನ 9 ಬಂಟರ ವಲಯಗಳ ತಲಾ ಒಂದೊಂದು ಅಶಕ್ತ ಕುಟುಂಬಗಳಿಗೆ ನೀಡಲು ನಿರ್ಣಯ

Suddi Udaya

ಅಸೌಖ್ಯದಿಂದ ಬಳಲಿ ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ನ.ಪಂ ಉಪಾಧ್ಯಕ್ಷ ಮತ್ತಿತರರು

Suddi Udaya

ಓಡಿಲ್ನಾಳ ಸ.ಉ. ಪ್ರಾ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲದ ಚುನಾವಣೆ

Suddi Udaya

ಪಿಕಪ್ ಗೂಡ್ಸ್ ವಾಹನ ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya
error: Content is protected !!