23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ: ಕುದ್ರಡ್ಕದಲ್ಲಿ ಮೂವರು ಮಕ್ಕಳಿಗೆ ಹಾವು ಕಡಿತ

ಬೆಳ್ತಂಗಡಿ: ಒಂದೇ ಮನೆಯೊಳಗೆ ಮಲಗಿದ್ದ ಮೂವರು ಮಕ್ಕಳಿಗೆ ವಿಷಪೂರಿತ ಕನ್ನಡಿ ಹಾವೊಂದು ಕಡಿದ ಘಟನೆ ನ.2ರಂದು ತಾಲೂಕಿನ ತಣ್ಣೀರುಪಂತ ಸಮೀಪದ ಕುದ್ರಡ್ಕದಲ್ಲಿ ಸಂಭವಿಸಿದೆ. ಗ್ರಾಮೀಣ ಭಾಗವಾಗಿದ್ದು ತಡರಾತ್ರಿ ಆಸ್ಪತ್ರೆಗೆ ಕರೆದೊಯ್ಯಲು ಯಾವುದೇ ವಾಹನ ಸಿಗದಿದ್ದಾಗ ನಾಟಿವೈದ್ಯರೊಬ್ಬರ ಸಕಾಲಿಕ ನೆರವಿನಿಂದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕುದ್ರಡ್ಕ ನಿವಾಸಿ ವಿಜಯ ಮಡೆಕ್ಕಿಲ ಅವರ ಮಗ ದಕ್ಷಿತ್ ಮತ್ತು ಅಕ್ಕನ ಮಕ್ಕಳಾದ ವಿಶ್ಮಿತಾ ಹಾಗೂ ಅನ್ವಿತಾ ಒಂದೇ ಕೋಣೆಯಲ್ಲಿ ಮಲಗಿದ್ದು, ರಾತ್ರಿ 11.30ರ ಸುಮಾರಿಗೆ ಕೋಣೆಯೊಳಗೆ ಪ್ರವೇಶಿಸಿದ ವಿಷಪೂರಿತ ಕನ್ನಡಿ ಹಾವು ದಕ್ಷಿತ್ ನ ಎರಡೂ ಕೈಗಳಿಗೆ ಕಚ್ಚಿತು. ಬಳಿಕ ವಿಶ್ಮಿತಾ ಹಾಗೂ ಅನ್ವಿತಾ ಅವರ ಕೈಗೂ ಕಚ್ಚಿದ್ದು ಮಕ್ಕಳು ಭೀತಿಯಿಂದ ಕಂಗೆಟ್ಟಿದ್ದರು.

ಮಕ್ಕಳನ್ನು ತ್ವರಿತವಾಗಿ ಆಸ್ಪತ್ರೆಗೆ ಕರೆದೊಯ್ಯುವ ಅನಿವಾರ್ಯ ಇದ್ದರೂ ಉಪ್ಪಿನಂಗಡಿಯನ್ನು ಸಂಪರ್ಕಿಸುವ ಗುರುವಾಯನಕೆರೆ ಉಪ್ಪಿನಂಗಡಿ ರಸ್ತೆಯ ದುಃ ಸ್ಥಿತಿಯಿಂದಾಗಿ ಆಸ್ಪತ್ರೆ ತಲುಪುವುದು ವಿಳಂಬವಾಗಿ ಪ್ರಾಣಾಪಾಯವಾಗುವ ಸಾಧ್ಯತೆ ಇರುವುದರಿಂದ ಕಂಗೆಟ್ಟಮನೆಯವರು ತಣ್ಣೀರುಪಂತ ಗ್ರಾಮದಲ್ಲಿನ ನಾಟಿ ವೈದ್ಯ ಸೂರಪ್ಪ ಪೂಜಾರಿ ಅವರ ಮನೆ ಬಾಗಿಲು ತಟ್ಟಿದ್ದರು. ಮಧ್ಯರಾತ್ರಿ ಹಾವು ಕಡಿತಕ್ಕೊಳಗಾಗಿ ಮನೆಗೆ ಬಂದ ಮೂವರು ಮಕ್ಕಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ನಾಟಿವೈದ್ಯ ಸೂರಪ್ಪ ಪೂಜಾರಿ (77) ಅವರು ತಾವು ಪರಂಪರಾಗತವಾಗಿ ಅರಿತುಕೊಂಡಿರುವ ಔಷಧವನ್ನು ಮಕ್ಕಳಿಗೆ ನೀಡಿ ಅಪಾಯದಿಂದ ಪಾರು ಮಾಡಿದ್ದಾರೆ.

Related posts

ಪುಂಜಾಲಕಟ್ಟೆ ಯುವಕ ಸೈನೇಡ್ ಸೇವಿಸಿ ಆತ್ಮಹತ್ಯೆ

Suddi Udaya

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನಿಂದ ರೂ. 1ಲಕ್ಷ ದೇಣಿಗೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಲಾರಿ

Suddi Udaya

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅನುಜ್ಞಾ ತೇರ್ಗಡೆ

Suddi Udaya

ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರಿ ರಕ್ಷಿತ್ ಶಿವರಾಂ ಕೈ ಬಲ ಪಡಿಸಿದ ಮಚ್ಚಿನ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ

Suddi Udaya

ಬೆಳ್ತಂಗಡಿ ತಾಲೂಕಿನ ಇಬ್ಬರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya
error: Content is protected !!