ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನ 27: ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಅಕ್ಷರೋತ್ಸವ-ರಾಷ್ಟ್ರ ಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ

ಗುರುವಾಯನಕೆರೆ: ಎಕ್ಸೆಲ್ ಸಮೂಹ ವಿದ್ಯಾ ಸಂಸ್ಥೆಗಳ ವತಿಯಿಂದ ಪ್ರತಿ ವರ್ಷ ಹಮ್ಮಿಕೊಳ್ಳುವ ಪ್ರತಿಷ್ಠಿತ ಎಕ್ಸೆಲ್ ಅಕ್ಷರೋತ್ಸವ ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ ಹಾಗೂ ಆಮಂತ್ರಣ ಸಾಂಸ್ಕೃತಿಕ – ಸಾಹಿತ್ಯ ವೇದಿಕೆಯ ದಶಮಾನೋತ್ಸವ ಜೊತೆಯಾಗಿ ಈ ಬಾರಿ ನ.27ರಂದು ಗುರುವಾಯನಕೆರೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ಸಂಪನ್ನಗೊಳ್ಳಲಿದೆ.

ಈ ಸಂದರ್ಭದಲ್ಲಿ ರಾಷ್ಟ್ರ ಮಟ್ಟದ ಕನ್ನಡ ಕವಿಗೋಷ್ಠಿ ನಡೆಯಲಿದೆ.ಆಯ್ದ ಕವಿಗಳ ಕವಿತೆಗಳಿಗೆ ರಾಗ ಸಂಯೋಜನೆ ಮಾಡಿ, ಕವನ ವಾಚನ – ಗಾಯನ – ನೃತ್ಯ – ಕುಂಚ ಪರಿಕಲ್ಪನೆಯಲ್ಲಿ ಗೋಷ್ಠಿ ನಡೆಯಲಿದೆ .
ಕವಿತೆಗಳು ಕನ್ನಡ ಭಾಷೆಯಲ್ಲಿ ಇರಬೇಕು. ಕವಿತೆಗೆ ವಸ್ತು ನಿರ್ಬಂಧವಿಲ್ಲ. ಕವಿಗೋಷ್ಠಿಗೆ ಆಯ್ಕೆಯಾದ ಕವಿಗಳಿಗೆ ಸ್ಮರಣಿಕೆ, ಪ್ರಮಾಣ ಪತ್ರ, ಗ್ರಂಥ ಗೌರವ ಹಾಗೂ ಊಟೋಪಚಾರ ಮತ್ತು ಬಸ್ಸಿನ ಪ್ರಯಾಣ ವೆಚ್ಚವನ್ನು ನೀಡಲಾಗುವುದು.

ಕವಿಗೋಷ್ಠಿಗೆ ಆಯ್ಕೆಯಾಗುವ ಮತ್ತು ಯೋಗ್ಯವೆನಿಸಿದ ಆಯ್ದ ಕವಿತೆಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಿ, ಸಮಾರಂಭದಲ್ಲಿ ಲೋಕಾರ್ಪಣೆ ಮಾಡಲಾಗುವುದು. ಆಸಕ್ತ ಕವಿಗಳು ತಮ್ಮ ಕವಿತೆಗಳನ್ನು ಪ್ರಾಂಶುಪಾಲರು ಎಕ್ಸೆಲ್ ಪದವಿ ಪೂರ್ವ ಕಾಲೇಜು,
ವಿದ್ಯಾ ಸಾಗರ ಕ್ಯಾಂಪಸ್,ಕುವೆಟ್ಟು ಗ್ರಾಮ, ಗುರುವಾಯನಕೆರೆ-574217 ಈ ವಿಳಾಸಕ್ಕೆ ಅಥವಾ ಮಿಂಚಂಚೆ [email protected] ಗೆ ಕಳುಹಿಸಿಕೊಡಬಹುದು.

ದೇಶದ ಯಾವುದೇ ಭಾಗದವರು ಕವಿಗೋಷ್ಠಿಯಲ್ಲಿ ಪಾಲ್ಗೊಳ್ಳಬಹುದು. ಲಕೋಟೆಯ ಮೇಲೆ ಎಕ್ಸೆಲ್ ಅಕ್ಷರೋತ್ಸವ – 2025 ಎಂದು ಸ್ಪಷ್ಟವಾಗಿ ನಮೂದಿಸಿರಬೇಕು.
ಆಯ್ಕೆಯಾದ ಕವಿಗಳಿಗೆ ಸಂಸ್ಥೆಯ ಕಡೆಯಿಂದ ಪ್ರತ್ಯೇಕ ಕರೆ ಬರುತ್ತದೆ. ಈ ಬಗ್ಗೆ ಯಾರನ್ನೂ ಸಂಪರ್ಕಿಸಬೇಕಾದ ಅವಶ್ಯಕತೆಯಿಲ್ಲ ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಶ್ರೀ ಗುರುದೇವ ಸಹಕಾರ ಸಂಘದ 28ನೇ ಶಾಖೆ ಗುರುಪುರ-ಕೈಕಂಬದಲ್ಲಿ ಉದ್ಘಾಟನೆ

Suddi Udaya

ಜೀವಜಲಕ್ಕಾಗಿ ಕೆರೆಗಳ ಪುನಶ್ಚೇತನ : ಧರ್ಮಸ್ಥಳ ಯೋಜನೆಯಿಂದ ಒಂದೇ ವರ್ಷದಲ್ಲಿ ರಾಜ್ಯದ 160 ಕೆರೆಗಳಿಗೆ ಕಾಯಕಲ್ಪ

Suddi Udaya

ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ವಿರುದ್ಧ ಮಾನಹಾನಿಕರ ಪೋಸ್ಟ್: ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಕಿಡಿಗೇಡಿಗಳ ವಿರುದ್ಧ ಅಳದಂಗಡಿ ಸತ್ಯದೇವತೆ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya

ಬೆಳ್ತಂಗಡಿಯಲ್ಲಿ ಬಿ.ಎಂ.ಎಸ್ ಸಮನ್ವಯ ಸಭೆ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಸಮಿತಿ ವತಿಯಿಂದ “ಸರ್ಕಾರದ ನಡೆ ಕಾರ್ಯಕರ್ತರ ಕಡೆ” ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya
error: Content is protected !!