25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ :ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ 1 ನೇ ತರಗತಿ ಆಂಗ್ಲ ಮಾಧ್ಯಮ ಉದ್ಘಾಟನೆ

ಲಾಯಿಲ: ಕರ್ನೋಡಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1 ನೇ ತರಗತಿ ದ್ವಿ ಭಾಷಾ ಮಾಧ್ಯಮ(ಆಂಗ್ಲ ಮಾಧ್ಯಮ) ಇದರ ಉದ್ಘಾಟನಾ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಯಂತಿ ಎಮ್.ಕೆ ವಹಿಸಿದ್ದರು. ಹಳೆ ವಿದ್ಯಾರ್ಥಿ ಸಂಘದ ಗೌರವ ಅಧ್ಯಕ್ಷ ಬಿ.ಕೆ ಧನಂಜಯ ರಾವ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜಾ ಇವರು ಮಕ್ಕಳಿಗೆ ಉಚಿತ ಪಠ್ಯ ಪುಸ್ತಕವನ್ನು ವಿತರಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ಶೆಟ್ಟಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಗಂಧಿ ಜಗನ್ನಾಥ್, ಸದಸ್ಯರಾದ ಗಣೇಶ್.ಆರ್, ಅರವಿಂದ ಶೆಟ್ಟಿ, ಶ್ರೀಮತಿ ತಾರಾಕೇಸರಿ, ಕ್ಷೇತ್ರ ಶಿಕ್ಷಣಾಧಿಕಾರಿ, ಟಿ. ಬಿ ಬಸಲಿಂಗಪ್ಪ ಕ್ಷೇತ್ರ ಸಮನ್ವಯ ಅಧಿಕಾರಿ ಮೋಹನ್ ಕುಮಾರ್ ಸಿ.ಎನ್ ,ಕ್ಷೇತ್ರ ಸಂಪನ್ಮೂಲ ವ್ಯಕ್ತಿ, ಶ್ರೀಮತಿ ಸೌಮ್ಯ ಅಧ್ಯಕ್ಷರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಜಗನ್ನಾಥ್ ಎಮ್. , ಮುಖ್ಯೋಪಾಧ್ಯಾಯರು ಕರ್ನೋಡಿ ಶಾಲೆ, ಸದಾಶಿವ ಸಮಗಾರ ಕಕ್ಕೇನ, ಕೋಶಾಧಿಕಾರಿ ಹಳೆ ವಿದ್ಯಾರ್ಥಿ ಸಂಘ ಕರ್ನೋಡಿ, ಇವರು ಅಥಿತಿಗಳಾಗಿ ಉಪಸ್ಥಿತರಿದ್ದರು.

1 ನೇ ತರಗತಿಯ ಮಕ್ಕಳಿಗೆ ಹಳೆ ವಿದ್ಯಾರ್ಥಿ ಸಂಘದ ಸದಸ್ಯರಾದ ಅಶ್ರಫ್ ಮಾಂಜಾಲು ಇವರು ಸಮವಸ್ತ್ರವನ್ನು ಉಚಿತವಾಗಿ ನೀಡಿದರು. ಮುಖ್ಯ ಶಿಕ್ಷಕರಾದ ಶ್ರೀ ಜಗನ್ನಾಥ ಎಮ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ಶಿಕ್ಷಕಿ ಉಷಾ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿ ಮಮತಾ ಧನ್ಯವಾದವಿತ್ತರು. ಸಹ ಶಿಕ್ಷಕರಾದ ಕೃಷ್ಣ ಕುಮಾರ್, ಶ್ರೀಮತಿ ಗಂಗಾರಾಣಿ , ಶ್ರೀಮತಿ ತ್ರಿಷಾಲ, ಶ್ರೀಮತಿ ಲೀನಾ ಡಿಸೋಜಾ ಇವರು ಸಹಕರಿಸಿದರು. ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಸಲಹೆಗಾರರು, ಸದಸ್ಯರು, ಎಸ್.ಡಿ.ಎಮ್.ಸಿ ಸಮಿತಿಯ ಪದಾಧಿಕಾರಿಗಳು, ಪೋಷಕರು, ಮತ್ತು ವಿದ್ಯಾಭಿಮಾನಿಗಳು ಭಾಗವಹಿಸಿದರು

Related posts

ರಾಜ್ಯದಲ್ಲಿ ಸಿವಿಲ್ ಸರ್ವಿಸ್ ಬೋರ್ಡ್ ರಚನೆಯ ಕುರಿತು ಸದನದಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ಅಕ್ರಮ ಮರಳು ಸಾಗಾಟ : ಪಿಕಾಪ್ ವಾಹನ ವಶಕ್ಕೆ

Suddi Udaya

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವತಿಯಿಂದ ಸ್ವಸಹಾಯ ಸಂಘದ ಸದಸ್ಯರಿಗೆ ಫಿನೈಲ್ ಹಾಗೂ ಸೋಪ್ ಆಯಿಲ್ ತರಬೇತಿ

Suddi Udaya

ಬೆಳ್ತಂಗಡಿ ತಾಲೂಕಿನ ‘ಸಿ’ ಪ್ರವರ್ಗದ 16 ದೇವಸ್ಥಾನಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಸುಯ೯ ಕಂಗ್ಲಿತ್ತಿಲು ನಿವಾಸಿ ಸುಜಾತ ನಿಧನ

Suddi Udaya
error: Content is protected !!