July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

ಬೆಳ್ತಂಗಡಿ: ವಿದ್ಯಾರ್ಥಿಗಳು ಸನ್ಮಾರ್ಗ, ಶ್ರಮ, ಪ್ರಾಮಾಣಿಕತೆ ಮತ್ತು ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪಿ ಕುಶಾಲಪ್ಪ ಗೌಡ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಜರಗಿದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ, ಆಧುನಿಕ ತಂತ್ರಜ್ಞಾನವು ಉತ್ತಮ ರೀತಿಯಲ್ಲಿ ಬಳಕೆಯಾಗದೆ ದುರುಪಯೋಗವಾಗುತ್ತಿರುವುದು ವಿಪರ್ಯಾಸವಾಗಿದೆ. ಇದರಿಂದ ವಿದ್ಯಾರ್ಥಿಗಳು ಸೃಜನಶೀಲರಾಗಲು ತಡೆಯುಂಟಾಗಿದೆ. ವಿದ್ಯಾರ್ಥಿ ಜೀವನದ ಯಶಸ್ಸಿಗೆ ವಿದ್ಯಾರ್ಥಿ, ಪೋಷಕರು, ಮತ್ತು ಶಿಕ್ಷಣ ಸಂಸ್ಥೆ ಸಮಾನ ಸಹಭಾಗಿತ್ವವನ್ನು ವಹಿಸಬೇಕಾಗಿದೆ ಎಂದರು.


ಕಾಲೇಜಿನ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಎಂ ಅವರು ಉತ್ತಮ ಫಲಿತಾಂಶವನ್ನು ಪಡೆಯುವಲ್ಲಿ ಪೋಷಕರ ಜವಾಬ್ದಾರಿಗಳನ್ನು ಕುರಿತು ಮಾಹಿತಿಯನ್ನು ನೀಡಿದರು.
ವಾಣಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್ ಉಪಸ್ಥಿರಿದ್ದರು.
‌‌ ಶಿಕ್ಷಕ ರಕ್ಷಕ ಸಂಘದ ಸದಸ್ಯರಾದ ಮಹಾಬಲ ಗೌಡ ಕಾರ್ಯಕ್ರಮ ನಿರ್ವಹಿಸಿ ಸ್ವಾಗತಿಸಿದರು. ಉಪನ್ಯಾಸಕಿ ಶಾಲಿಕಾ ಪಿ ಆರ್ ಧನ್ಯವಾದವಿತ್ತರು.

Related posts

ಮುಂಡಾಜೆ: ಕೃಷಿಕ ಶಾಜಿ ವಾಟೆಪ್ಪಿಳ್ಳಿಲ್ ಹೃದಯಾಘಾತದಿಂದ ನಿಧನ

Suddi Udaya

ಅಳದಂಗಡಿ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ಬೀಜ ಬಿತ್ತನೆ ಕಾರ್ಯಕ್ರಮ

Suddi Udaya

ಯೂಥ್ ಫಾರ್ ಸೇವಾ ಸಂಸ್ಥೆ ವತಿಯಿಂದ ಮೇಲಂತಬೆಟ್ಟು ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಪ್ರೊ. ಮಧೂರು ಮೋಹನ ಕಲ್ಲೂರಾಯರಿಗೆ ‘ಕರ್ನಾಟಕ ಕಲಾ ಶ್ರೀ’ ಪ್ರಶಸ್ತಿ

Suddi Udaya

ಧರ್ಮಸ್ಥಳದಲ್ಲಿ 53ನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ ಉದ್ಘಾಟನೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವಾರ್ಷಿಕ ಮಹಾಸಭೆ

Suddi Udaya
error: Content is protected !!