July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಪೂರ್ವಭಾವಿ ಸಭೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ವೀರ ವಿಕ್ರಮ ಜೋಡುಕರೆ ಕಂಬಳ ಹೊಕ್ಕಾಡಿಗೋಳಿ ಇದರ ಕಂಬಳ ನಡೆಸುವುದರ ಬಗ್ಗೆ ಪ್ರಥಮ ಹಂತದ ಪೂರ್ವಭಾವಿ ಸಭೆಯು ಕಂಬಳದ ವಠಾರದಲ್ಲಿ ಜರಗಿತು.

ಸಭೆಯ ಅಧ್ಯಕ್ಷತೆಯನ್ನು ಕಂಬಳ ಸಮಿತಿಯ ಅಧ್ಯಕ್ಷ ರಶ್ಮಿತ್ ಶೆಟ್ಟಿ ನೋಣಾಲುಗುತ್ತು ವಹಿಸಿದರು. ಡಿ.21ರಂದು ಹೊಕ್ಕಾಡಿಗೋಳಿ ಕಂಬಳವು ವಿಜೃಂಭಣೆಯಿಂದ ಜರಗಲಿದೆ ಎಂದು ಸಭೆಯಲ್ಲಿ ತಿಳಿಸಿದರು. ಮುಂದಿನ ವಾರ ಕರೆ ಮುಹೂರ್ತವು ನಡೆಯಲಿದ್ದು ಸಹಕರಿಸುವ ವಿವಿಧ ಸಂಘ ಸಂಸ್ಥೆಗಳು, ಭಜನಾ ಮಂಡಳಿಯ ಸದಸ್ಯರು, ಕಂಬಳಾಭಿಮಾನಿಗಳು ಕುದಿ ಕಂಬಳ ನಡೆಸಲು ಶ್ರಮದಾನದ ಮೂಲಕ ಕೈ ಜೋಡಿಸುವಂತೆ ವಿನಂತಿಸಿದರು. ಅತೀ ಶೀಘ್ರದಲ್ಲಿ ಕಂಬಳದ ಆಮಂತ್ರಣ ಪತ್ರ ಬಿಡುಗಡೆಗೊಳ್ಳಲಿದೆ ಎಂದು ತಿಳಿಸಿದರು.

ಸಭೆಯಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ, ಗೌರವ ಸಲಹೆ ಗಾರರು, ಕಾರ್ಯದರ್ಶಿ, ಉಪಾಧ್ಯಕ್ಷರುಗಳು, ಸದಸ್ಯರು ಕಂಬಲಾಭಿಮಾನಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದಿಂದ ಗೃಹಲಕ್ಷ್ಮಿಯೋಜನೆ ಸಮಸ್ಯೆ ಪರಿಹರಿಸಲು ಗ್ರಾಮವಾರು ಸಂಚಾಲಕರ ನೇಮಕ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ : ಉಜಿರೆ ಎಸ್ ಡಿ ಎಂ ಅನುದಾನಿತ ಸೆಕೆಂಡರಿ ಶಾಲೆ ಶೇ.99.34 ಫಲಿತಾಂಶ

Suddi Udaya

ಪ್ರಸಿದ್ಧ ಗುಜರಾತ್ ಉದ್ಯಮಿ ಶಶಿಧ‌ರ್ ಶೆಟ್ಟಿ ನವಶಕ್ತಿ ಯವರಿಗೆ ಮಾತೃ ವಿಯೋಗ

Suddi Udaya

ಮುಹಿಯುದ್ದೀನ್ ಜುಮಾ ಮಸೀದಿ, ಎಸ್.ಕೆ.ಎಸ್.ಎಸ್.ಎಫ್. ಕಕ್ಕಿಂಜೆ ಯೂನಿಟ್ ಇದರ ಆಶ್ರಯದಲ್ಲಿ 3ನೇ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya

ಬಂದಾರು: ಮೈರೊಳ್ತಡ್ಕ ವಾರ್ಡ್ ನ ನಿನ್ನಿಕಲ್ಲು- ಪುಯಿಲ ಕಾಂಕ್ರಿಟ್ ರಸ್ತೆ ಉದ್ಘಾಟನೆ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ-ವಾರೀಸುದಾರರ ಪತ್ತೆಗೆ ಮನವಿ

Suddi Udaya
error: Content is protected !!