23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉದ್ಯಮಿ ಶಶಿಧರ ಶೆಟ್ಟಿ ಬರೋಡರಿಂದ ಕಾಶಿ ಶೆಟ್ಟಿಯವರ ಸ್ಮರಣಾರ್ಥ ಬಡ ಬಂಟ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು

ಬೆಳ್ತಂಗಡಿ: ತಾಲೂಕಿನ ಬಂಟರ ಸಂಘವನ್ನು ಸಾಲಮುಕ್ತಗೊಳಿಸುವಲ್ಲಿ ಬಹಳ ದೊಡ್ಡ ಕೊಡುಗೆಯನ್ನು ನೀಡಿರುವ ಬಂಟರ ಯಾನೆ ನಾಡವರ ಸಂಘ(ರಿ)ದ ಗೌರವ ಮಾರ್ಗದರ್ಶಕರಾಗಿರುವ ನವಶಕ್ತಿಯ ಉದ್ಯಮಿ ಶಶಿಧರ ಶೆಟ್ಟಿ ಬರೋಡರು, ತಮ್ಮ ತಾಯಿ ಕಾಶಿ ಶೆಟ್ಟಿಯವರ ಸ್ಮರಣಾರ್ಥ ಬೆಳ್ತಂಗಡಿ ತಾಲೂಕಿನ ಬಡ ಬಂಟ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು ನೀಡುವ ಯೋಜನೆಯನ್ನು ಘೋಷಿಸಿದ್ಧಾರೆ.

ಬಂಟರ ಸಂಘದ ಮೂಲಕ ಅನುಷ್ಠಾನಗೊಳ್ಳಲಿರುವ ಈ ಯೋಜನೆಯನ್ವಯ ಪ್ರಥಮ ಹಂತದಲ್ಲಿ ಬೆಳ್ತಂಗಡಿ ತಾಲೂಕಿನ 9 ವಲಯಗಳಿಗೆ ತಲಾ ಒಂದರಂತೆ ಒಟ್ಟು ಒಂಬತ್ತು ಕುಟುಂಬಗಳಿಗೆ ಮನೆ ನಿರ್ಮಾಣಕ್ಕಾಗಿ ತಲಾ ರೂ . 2,00,000/-( ರೂಪಾಯಿ ಎರಡು ಲಕ್ಷ ಮಾತ್ರ) ಧನಸಹಾಯವನ್ನು ನೀಡಲಾಗುತ್ತದೆ. ಬಂಟರ ಸಂಘದ ವಲಯ ಸಮಿತಿಯ ಪದಾಧಿಕಾರಿಗಳು ತಮ್ಮ ವಲಯದಿಂದ ಸಹಾಯ ಯೋಗ್ಯ ಕುಟುಂಬವನ್ನು ಗುರುತಿಸಿ, ತಾಲೂಕು ಸಮಿತಿಗೆ ಶಿಫಾರಸು ಮಾಡಿ, ಸೂಕ್ತ ಪರಿಶೀಲನೆಯ ನಂತರ ಬಂಟರ ಸಂಘದಿಂದ ಅನುಮೋದನೆಗೊಂಡ ಮನೆಯ ನಿರ್ಮಾಣದ ಸಂಪೂರ್ಣ ಉಸ್ತುವಾರಿಯನ್ನು ವಲಯ ಸಮಿತಿಯವರು ವಹಿಸಿಕೊಳ್ಳುತ್ತಾರೆ. ಮನೆ ನಿರ್ಮಾಣಕ್ಕೆ ತಗಲುವ ಹೆಚ್ಚುವರಿ ವೆಚ್ಚವನ್ನು ಶ್ರಮದಾನದ ಮೂಲಕ, ಅಗತ್ಯ ಸಾಮಗ್ರಿಗಳನ್ನು ಒದಗಿಸುವ ಮೂಲಕ ಅಥವಾ ಆರ್ಥಿಕ ನೆರವು ನೀಡುವ ಮೂಲಕ ಸ್ಥಳೀಯವಾಗಿ ಕ್ರೋಢೀಕರಿಸಬೇಕಾಗುತ್ತದೆ. ನಿಗದಿಪಡಿಸಿದ ಅವಧಿಯ ಒಳಗೆ ಕನಿಷ್ಠ ಸೌಲಭ್ಯಗಳನ್ನು ಒಳಗೊಂಡ ಸುಂದರ ಮನೆಯನ್ನು ನಿರ್ಮಿಸಿ ಕೊಡುವ ರೀತಿ ವ್ಯವಸ್ಥೆ ಕಲ್ಪಿಸಿಬೇಕಾಗುತ್ತದೆ. ವಲಯ ಸಮಿತಿಯ ಪದಾಧಿಕಾರಿಗಳು ಈ ವಿಚಾರವನ್ನು ಆದ್ಯತೆಯಲ್ಲಿ ಪರಿಗಣಿಸಿ ತಮ್ಮ ವಲಯದಿಂದ ಸಹಾಯ ಯೋಗ್ಯ ಕುಟುಂಬವನ್ನು ಗುರುತಿಸಿ, ಬಂಟರ ಸಂಘಕ್ಕೆ ಶಿಫಾರಸು ಮಾಡಬೇಕು ಹಾಗೂ ಬಡ ಬಂಟ ಕುಟುಂಬಗಳಿಗೆ ನೆರವು ನೀಡಲು ಒದಗಿ ಬಂದ ಈ ಅಪೂರ್ವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಬೆಳ್ತಂಗಡಿ ಬಂಟರ ಸಂಘ ವಿನಂತಿಸಿಕೊಂಡಿದೆ.

Related posts

ತೆಕ್ಕಾರು : ಕುಟ್ಟಿಕಳ ರಾಧು ರವರ ಮನೆ ಭಾಗಶಃ ಕುಸಿತ

Suddi Udaya

ಪುಣ್ಯಕೋಟಿಯನ್ನು ಉಳಿಸಿ,ಕೋಟಿ ಕೋಟಿ ಪುಣ್ಯ ಗಳಿಸಿ, ಆ.26: ಉಜಿರೆಯಲ್ಲಿ “ಗೋವು ಉಳಿದರೆ ನಾವು” ಅಭಿಯಾನ-2026

Suddi Udaya

ಬಳಂಜ ದೇವಸ್ಥಾನದ ಜಾತ್ರ ಮಹೋತ್ಸವ ಸಂಪನ್ನ: ದೈವ ದೇವರ ಭೇಟಿ

Suddi Udaya

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಕಿರಿಯ ವಯಸ್ಸಿನಲ್ಲಿಯೇ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಬೆಳ್ತಂಗಡಿಯ ಯುವಕ ಮಂಜುನಾಥ್ ಶಿವಲಿಂಗಪ್ಪ ಜಿ.

Suddi Udaya
error: Content is protected !!