22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉದ್ಯಮಿ ಶಶಿಧರ ಶೆಟ್ಟಿ ಬರೋಡರಿಂದ ಕಾಶಿ ಶೆಟ್ಟಿಯವರ ಸ್ಮರಣಾರ್ಥ ಬಡ ಬಂಟ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು

ಬೆಳ್ತಂಗಡಿ: ತಾಲೂಕಿನ ಬಂಟರ ಸಂಘವನ್ನು ಸಾಲಮುಕ್ತಗೊಳಿಸುವಲ್ಲಿ ಬಹಳ ದೊಡ್ಡ ಕೊಡುಗೆಯನ್ನು ನೀಡಿರುವ ಬಂಟರ ಯಾನೆ ನಾಡವರ ಸಂಘ(ರಿ)ದ ಗೌರವ ಮಾರ್ಗದರ್ಶಕರಾಗಿರುವ ನವಶಕ್ತಿಯ ಉದ್ಯಮಿ ಶಶಿಧರ ಶೆಟ್ಟಿ ಬರೋಡರು, ತಮ್ಮ ತಾಯಿ ಕಾಶಿ ಶೆಟ್ಟಿಯವರ ಸ್ಮರಣಾರ್ಥ ಬೆಳ್ತಂಗಡಿ ತಾಲೂಕಿನ ಬಡ ಬಂಟ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು ನೀಡುವ ಯೋಜನೆಯನ್ನು ಘೋಷಿಸಿದ್ಧಾರೆ.

ಬಂಟರ ಸಂಘದ ಮೂಲಕ ಅನುಷ್ಠಾನಗೊಳ್ಳಲಿರುವ ಈ ಯೋಜನೆಯನ್ವಯ ಪ್ರಥಮ ಹಂತದಲ್ಲಿ ಬೆಳ್ತಂಗಡಿ ತಾಲೂಕಿನ 9 ವಲಯಗಳಿಗೆ ತಲಾ ಒಂದರಂತೆ ಒಟ್ಟು ಒಂಬತ್ತು ಕುಟುಂಬಗಳಿಗೆ ಮನೆ ನಿರ್ಮಾಣಕ್ಕಾಗಿ ತಲಾ ರೂ . 2,00,000/-( ರೂಪಾಯಿ ಎರಡು ಲಕ್ಷ ಮಾತ್ರ) ಧನಸಹಾಯವನ್ನು ನೀಡಲಾಗುತ್ತದೆ. ಬಂಟರ ಸಂಘದ ವಲಯ ಸಮಿತಿಯ ಪದಾಧಿಕಾರಿಗಳು ತಮ್ಮ ವಲಯದಿಂದ ಸಹಾಯ ಯೋಗ್ಯ ಕುಟುಂಬವನ್ನು ಗುರುತಿಸಿ, ತಾಲೂಕು ಸಮಿತಿಗೆ ಶಿಫಾರಸು ಮಾಡಿ, ಸೂಕ್ತ ಪರಿಶೀಲನೆಯ ನಂತರ ಬಂಟರ ಸಂಘದಿಂದ ಅನುಮೋದನೆಗೊಂಡ ಮನೆಯ ನಿರ್ಮಾಣದ ಸಂಪೂರ್ಣ ಉಸ್ತುವಾರಿಯನ್ನು ವಲಯ ಸಮಿತಿಯವರು ವಹಿಸಿಕೊಳ್ಳುತ್ತಾರೆ. ಮನೆ ನಿರ್ಮಾಣಕ್ಕೆ ತಗಲುವ ಹೆಚ್ಚುವರಿ ವೆಚ್ಚವನ್ನು ಶ್ರಮದಾನದ ಮೂಲಕ, ಅಗತ್ಯ ಸಾಮಗ್ರಿಗಳನ್ನು ಒದಗಿಸುವ ಮೂಲಕ ಅಥವಾ ಆರ್ಥಿಕ ನೆರವು ನೀಡುವ ಮೂಲಕ ಸ್ಥಳೀಯವಾಗಿ ಕ್ರೋಢೀಕರಿಸಬೇಕಾಗುತ್ತದೆ. ನಿಗದಿಪಡಿಸಿದ ಅವಧಿಯ ಒಳಗೆ ಕನಿಷ್ಠ ಸೌಲಭ್ಯಗಳನ್ನು ಒಳಗೊಂಡ ಸುಂದರ ಮನೆಯನ್ನು ನಿರ್ಮಿಸಿ ಕೊಡುವ ರೀತಿ ವ್ಯವಸ್ಥೆ ಕಲ್ಪಿಸಿಬೇಕಾಗುತ್ತದೆ. ವಲಯ ಸಮಿತಿಯ ಪದಾಧಿಕಾರಿಗಳು ಈ ವಿಚಾರವನ್ನು ಆದ್ಯತೆಯಲ್ಲಿ ಪರಿಗಣಿಸಿ ತಮ್ಮ ವಲಯದಿಂದ ಸಹಾಯ ಯೋಗ್ಯ ಕುಟುಂಬವನ್ನು ಗುರುತಿಸಿ, ಬಂಟರ ಸಂಘಕ್ಕೆ ಶಿಫಾರಸು ಮಾಡಬೇಕು ಹಾಗೂ ಬಡ ಬಂಟ ಕುಟುಂಬಗಳಿಗೆ ನೆರವು ನೀಡಲು ಒದಗಿ ಬಂದ ಈ ಅಪೂರ್ವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಬೆಳ್ತಂಗಡಿ ಬಂಟರ ಸಂಘ ವಿನಂತಿಸಿಕೊಂಡಿದೆ.

Related posts

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಅಳದಂಗಡಿ ಸಹಕಾರಿ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭ ಹಾಗೂ ಆಟಿದ ಕೂಟ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಸಹಾಯಕ ಕಾನೂನು ಅಭಿರಕ್ಷಕರಾಗಿ ನ್ಯಾಯವಾದಿ ಕುಮಾರಿ ಸ್ವಾತಿ ಕುಲಾಲ್ ನೇಮಕ

Suddi Udaya
error: Content is protected !!