September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಮಾದಕ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಸ್ವೀಕಾರ

ಬೆಳ್ತಂಗಡಿ: ಎಸ್ ಕೆ ಎಸ್ ಎಸ್ ಎಫ್ ಕಕ್ಕಿಂಜೆ ಶಾಖೆಯ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮತ್ತು
ಮಾದಕ ವ್ಯಸನ ಮುಕ್ತ ಭಾರತದ ನಿರ್ಮಾಣಕ್ಕಾಗಿ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ನ.1 ರಂದು ನಡೆಸಲಾಯಿತು.
ರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣವನ್ನು ಕಕ್ಕಿಂಜೆ ಮಸ್ಜಿದ್ ಉಪಾಧ್ಯಕ್ಷ ಇಲ್ಯಾಸ್ ಕಕ್ಕಿಂಜೆ ನೆರವೇರಿಸಿದರು.

ಉಸ್ತಾದ್ ರಫೀಕ್ ಅಝ್ಹರಿ ದುವಾ ಹಾಗೂ ಸಂದೇಶ ಭಾಷಣಗೈದರು.
ಈ ಸಂದಭದಲ್ಲಿ ಮಸ್ಜಿದ್ ಆಡಳಿತ ಸಮಿತಿ ಜೊತೆ ಕಾರ್ಯದರ್ಶಿ ನಾಸಿರ್ ಕೆ.ಹೆಚ್, ಎಸ್ ಕೆ ಎಸ್ ಎಸ್ ಎಫ್ ಜಿಲ್ಲಾ ಉಪಾಧ್ಯಕ್ಷ ಸ್ವದಕತುಲ್ಲ ದಾರಿಮಿ, ಜಿಲ್ಲಾ ವರ್ಕಿಂಗ್ ಕಾರ್ಯದರ್ಶಿ ಯಾಸಿರ್ ಚಿಬಿದ್ರೆ, ಕಕ್ಕಿಂಜೆ ಶಾಖೆ ಉಪಾಧ್ಯಕ್ಷ ಹಂಝ ಡಿ ಮಜಲ್, ಬೆಳ್ತಂಗಡಿ ತಾಲೂಕು ಅರೋಗ್ಯ ಸಮೀತಿ ಸದಸ್ಯ ರಶೀದ್ ಯು.ಕೆ, ಅದೇ ರೀತಿ ಮಸ್ಜಿದ್ ಸಮಿತಿ ಸದಸ್ಯರು, ಎಸ್ಕೆಎಸ್ಸೆಸ್ಸೆಫ್ ಕಕ್ಕಿಂಜೆ ಶಾಖೆಯ ಸದಸ್ಯರು, ನೂರುಲ್ ಇಸ್ಲಾಮ್ ಮದರಸ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು, ಜಲಾಲಿಯ ದರ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಎಸ್ಕೆಎಸ್ಸೆಸ್ಸೆಫ್ ಪ್ರಧಾನ ಕಾರ್ಯದರ್ಶಿ ನಾಸಿರ್ ಕಲ್ಲಗುಡ್ಡೆ ಸ್ವಾಗತಿಸಿದರು.

Related posts

ಎಸ್‌ಡಿಎಂ ತಾಂತ್ರಿಕ ವಿದ್ಯಾಸಂಸ್ಥೆ ಗ್ರಂಥಪಾಲಕರಿಗಾಗಿ ವೃತ್ತಿಪರ ಶಿಕ್ಷಣ ಕಾರ್ಯಾಗಾರ : ಪುಸ್ತಕ ಪ್ರದರ್ಶನ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಮೂಡುಕೋಡಿ: ನಡ್ತಿಕಲ್ಲು ಶ್ರೀ ರಾಮ ಭಜನಾ ಮಂಡಳಿಯಿಂದ ಕುಣಿತ ಭಜನೆ ತರಬೇತುದಾರ ದಯಾನಂದ ದೇವಾಡಿಗರವರಿಗೆ ಗುರುವಂದನಾ ಕಾರ್ಯಕ್ರಮ

Suddi Udaya

ಮುಂಡಾಜೆ ಮಂಜುಶ್ರೀ ಭಜನಾ ಮಂದಿರದ ವತಿಯಿಂದ ಭಜನಾ ಮಂಡಳಿಯ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಉಚಿತ ಯೋಗ ಶಿಬಿರಕ್ಕೆ ಚಾಲನೆ

Suddi Udaya

ರೋಟರಿ ಸಮುದಾಯ ದಳ ಕಲ್ಮಂಜ ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ಪತ್ರಕರ್ತ, ಭುವನೇಶ್ ಗೇರುಕಟ್ಟೆ ರವರಿಗೆ ಮಾತೃವಿಯೋಗ

Suddi Udaya
error: Content is protected !!