22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ -2 ಸ.ಉ. ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಧರ್ಮಸ್ಥಳ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ -2. 70ನೇಯ ವರ್ಷದ ಕನ್ನಡ ರಾಜ್ಯೋತ್ಸವವನ್ನು ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಕೆ. ನಂದ ರವರ ಅಧ್ಯಕ್ಷತೆಯಲ್ಲಿ ನೆರವೇರಿತು. ಮಕ್ಕಳು ಕನ್ನಡ ನಾಡು ನುಡಿಗೆ ಸಂಬಂಧಿಸಿದ ಹಾಡನ್ನು ಹಾಡುವುದರ ಮೂಲಕ ಕನ್ನಡಾಂಬೆಗೆ ನಮನವನ್ನು ಸಲ್ಲಿಸಿದರು. ಕನ್ನಡ ಕನ್ನಡ ನಾಡು ನುಡಿಯ ಇತಿಹಾಸ, ಹಿರಿಮೆ- ಗರಿಮೆಯನ್ನು ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್ ಮಕ್ಕಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ವೃಂದ, ಬಿ ಎಡ್ ಮತ್ತು ಡಿಎಡ್ ಕಾಲೇಜಿನ ಪ್ರಶಿಕ್ಷಣಾರ್ಥಿಗಳು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್. ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಶಿರ್ಲಾಲು: ಕೈತ್ಯರಡ್ಡ ನಿವಾಸಿ ಲೀಲಾ ನಿಧನ

Suddi Udaya

ಧರ್ಮಸ್ಥಳ ಪ್ರಾ. ಆ. ಕೇಂದ್ರದ ಹಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿ ವಿಜಯಲಕ್ಷ್ಮಿ ಕೆ. ಎಸ್. ಸೇವಾ ನಿವೃತ್ತಿ.

Suddi Udaya

ಬೆಳ್ತಂಗಡಿ: ದೀಪಾವಳಿ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಮಂಗಳೂರಿನ ಅರ್ಕುಳ ಬಳಿ ರಸ್ತೆ ಅಪಘಾತ: ಮುಂಡೂರಿನ ಯುವಕ ಸ್ಥಳದಲ್ಲೇ ಮೃತ್ಯು

Suddi Udaya

ಎಸ್‌ಡಿಎಂ ಬಿವೋಕ್‌ ವಿಭಾಗದಲ್ಲಿ ಸಿನಿಮಾ ಹಾಗೂ ಬ್ರ್ಯಾಂಡಿಂಗ್‌ ಕುರಿತು ವಿಶೇಷ ಸಂವಾದ ಕಾರ್ಯಕ್ರಮ

Suddi Udaya

ಗುಂಡು ಎಸೆತ ಸ್ಪರ್ಧೆ : ಲಾಯಿಲ ದೀಪಾಲ್ ಕೆ.ಆರ್., ಪ್ರಥಮ ಸ್ಥಾನ

Suddi Udaya
error: Content is protected !!