37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಾರಿನಲ್ಲಿ ಅಕ್ರಮ ದನ ಸಾಗಾಟ : ಧರ್ಮಸ್ಥಳ ಪೊಲೀಸರಿಂದ ಆರೋಪಿಗಳ ಬಂಧನ

ಬೆಳ್ತಂಗಡಿ : ಪಟ್ರಮೆ ಗ್ರಾಮದ ಪಟ್ಟೂರಿನಲ್ಲಿ ಅಕ್ರಮವಾಗಿ ಕಾರಿನಲ್ಲಿ ಮೂರು ದನಗಳನ್ನು ಸಾಗಾಟ ಮಾಡುತ್ತಿದ್ದನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದು ಆರೋಪಿಗಳನ್ನು ಬಂಧಿಸಿದ ಘಟನೆ ನ.2 ರಂದು ನಡೆದಿದೆ.

ಪಟ್ರಮೆ ಗ್ರಾಮದ ಪಟ್ಟೂರು ಎಂಬಲ್ಲಿ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್ ಗಾಣಿಗೇರ ನೇತೃತ್ವದಲ್ಲಿ ಖಚಿತ ಮಾಹಿತಿ ಮೇರೆಗೆ KA-19-MC-5862 ಸ್ವೀಪ್ಟ್ ಕಾರಿನಲ್ಲಿ ನ.2 ರಂದು 7:30 ಕ್ಕೆ ತಡೆದು ನಿಲ್ಲಿಸಿ ಪರಿಶೀಲನೆ ಮಾಡಿದಾಗ ಅಕ್ರಮವಾಗಿ ಮೂರು ದನಗಳನ್ನು ಸಾಗಾಟ ಮಾಡುತ್ತಿದ್ದನ್ನು ಪತ್ತೆ ಹಚ್ಚಿದ್ದಾರೆ.

ಸ್ವೀಪ್ಟ್ ಕಾರಿನಲ್ಲಿದ್ದ ಉಳ್ಳಾಲ ತಾಲೂಕಿನ ಸಜಿಪ ಪಡು ಗ್ರಾಮದ ಕೋಟೆಕನಿ ನಿವಾಸಿ ಹಮೋದ್ ಕೆ ಮಗ ಮಹಮ್ಮದ್ ಸಿನಾನ್ (25) ಮತ್ತು ಉಳ್ಳಾಲ ತಾಲೂಕಿನ ಸಜಿಪನಾಡು ಗ್ರಾಮದ ತಂಚಿಬೆಟ್ಟು ನಿವಾಸಿ ಮಹಮ್ಮದ್ ಮಗ ಇಬ್ರಾಹಿಂ ಖಲೀಲ್ @ ತೌಸೀಫ್(38) ಬಂಧಿಸಿದ್ದಾರೆ.

ಆರೋಪಿಗಳಿಬ್ಬರು ಮೂರು ದನಗಳನ್ನು ಜೋಹಾರ ಪಟ್ಟೂರು ಗ್ರಾಮದಿಂದ ಖರೀದಿಸಿ ಮಾಂಸ ಮಾಡಲು ತೆಗೆದುಕೊಂಡು ಹೋಗುತ್ತಿರುವುದಾಗಿ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾರೆ. ಮೂರು ಜಾನುವಾರುಗಳ ಮೌಲ್ಯ 20 ಸಾವಿರ ಮತ್ತು ಕಾರಿನ ಮೌಲ್ಯ 2 ಲಕ್ಷ ರೂಪಾಯಿಯಾಗಿದೆ. ಕಾರು ಮತ್ತು ಜಾನುವಾರುಗಳನ್ನು ವಶಪಡಿಸಿಕೊಂಡಿದ್ದು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಲಂ 5,12 ಕರ್ನಾಟಕ ಗೋ ಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ -2020 ಮತ್ತು ಕಲಂ 11(1) (D) ಪ್ರಾಣಿ ಹಿಂಸೆ ತಡೆ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಯಿಸಲಾಗಿದೆ.

Related posts

ಕುಕ್ಕೇಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ಕಕ್ಕಿಂಜೆ ಕತ್ತರಿಗುಡ್ಡ ನಿವಾಸಿ ತೇಜಸ್ವಿ ನಿಧನ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 6 ನೇ ಸ್ಥಳದಲ್ಲಿ ಅವಶೇಷಗಳು ಪತ್ತೆ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಹಾಗೂ ಕ್ರೀಡಾ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ

Suddi Udaya
error: Content is protected !!