23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗೇರುಕಟ್ಟೆ ಪತಂಜಲಿ ಯೋಗಶಾಖೆಯಲ್ಲಿ ತುಳಸಿ ಪೂಜೆ

ಗೇರುಕಟ್ಟೆ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಕ್ಷೀರ ಸಂಗಮ ಸಬಾಭವನ ಕಳಿಯ ಗೇರುಕಟ್ಟೆ ಯೋಗ ಶಾಖೆಯಲ್ಲಿ ತುಳಸಿ ಪೂಜೆಯನ್ನು ನೆರವೇರಿಸಲಾಯಿತು.

ಕೇಂದ್ರದ ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್, ಸಹ ಶಿಕ್ಷಕ ಸುಕೇಶ್ ನೇತೃತ್ವದಲ್ಲಿ ನಡೆಯುತ್ತಿರುವ ನಿತ್ಯ ಯೋಗ ತರಗತಿಯನ್ನು ಸತೀಶ್ ನಾಳ ನಿರ್ವಹಿಸಿದರು. ಯೋಗ ಬಂಧು ದಿವಾಕರ ಆಚಾರ್ಯ ಗೇರುಕಟ್ಟೆ ತುಳಸಿ ವಿವಾಹ, ತುಳಸಿ ಪೂಜೆಯ ಮಹತ್ವ,ಲೌಕಿಕ ಮತ್ತು ಆಧ್ಯಾತ್ಮಿಕ, ಧಾರ್ಮಿಕ ವಿಧಿ ವಿಧಾನಗಳಲ್ಲಿ ತುಳಸಿಯ ಮಹತ್ವ ಮತ್ತು ತುಳಸಿಯಿಂದ ಸಿಗುವ ಪ್ರಯೋಜನಗಳ ಬಗ್ಗೆ ಭೌದ್ಧಿಕ ನೀಡಿದರು.

ಶಾಖೆಯ ಸಹಶಿಕ್ಷಕ ಸುಕೇಶ್, ವರದಿ ಪ್ರಮುಖ ಕೇಶವ, ಶಾಖೆಯ ಸಂಚಾಲಕ ವಿಜಯಣ್ಣ,ಸತೀಶ್, ಅಶೋಕ, ವಸಂತ ಉಪಸ್ಥಿತರಿದ್ದರು.
ಭಾರತಿ, ಪದ್ಮಲತಾ, ಅರುಣಕ್ಕ ತುಳಸಿ ಪೂಜೆಯನ್ನು ನೆರವೇರಿಸಿ ಪೂಜಾ ಪ್ರಸಾದ ವಿತರಿಸಲಾಯಿತು. ಶಾಖೆಯ ಯೋಗ ಬಂಧುಗಳ ಸಹಕಾರದಿಂದ ಅಮೃತ ಫಲಾಹಾರವನ್ನು ಜೋಡಿಸಲಾಗಿತ್ತು.

Related posts

ಗೋಳಿಯಂಗಡಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಬೆಳ್ತಂಗಡಿ ಬೊಟ್ಟುಗುಡ್ಡೆ ನಿವಾಸಿ ಶ್ರೀಮತಿ ಕಮಲ ಸಫಲ್ಯ ನಿಧನ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಂದು ದಿನದ ಕರಡಿಪಾತ್ ಕಾರ್ಯಾಗಾರ

Suddi Udaya

ಜ್ಯೋತಿ ಆಸ್ಪತ್ರೆ ಆಶ್ರಯದಲ್ಲಿ ಜೀವ ರಕ್ಷಕದ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಜ.16-20: ಗೇರುಕಟ್ಟೆ ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಪರಪ್ಪು ಉರೂಸ್ ಕಾರ್ಯಕ್ರಮ

Suddi Udaya
error: Content is protected !!