25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಗೇರುಕಟ್ಟೆ ಪತಂಜಲಿ ಯೋಗಶಾಖೆಯಲ್ಲಿ ತುಳಸಿ ಪೂಜೆ

ಗೇರುಕಟ್ಟೆ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಕ್ಷೀರ ಸಂಗಮ ಸಬಾಭವನ ಕಳಿಯ ಗೇರುಕಟ್ಟೆ ಯೋಗ ಶಾಖೆಯಲ್ಲಿ ತುಳಸಿ ಪೂಜೆಯನ್ನು ನೆರವೇರಿಸಲಾಯಿತು.

ಕೇಂದ್ರದ ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್, ಸಹ ಶಿಕ್ಷಕ ಸುಕೇಶ್ ನೇತೃತ್ವದಲ್ಲಿ ನಡೆಯುತ್ತಿರುವ ನಿತ್ಯ ಯೋಗ ತರಗತಿಯನ್ನು ಸತೀಶ್ ನಾಳ ನಿರ್ವಹಿಸಿದರು. ಯೋಗ ಬಂಧು ದಿವಾಕರ ಆಚಾರ್ಯ ಗೇರುಕಟ್ಟೆ ತುಳಸಿ ವಿವಾಹ, ತುಳಸಿ ಪೂಜೆಯ ಮಹತ್ವ,ಲೌಕಿಕ ಮತ್ತು ಆಧ್ಯಾತ್ಮಿಕ, ಧಾರ್ಮಿಕ ವಿಧಿ ವಿಧಾನಗಳಲ್ಲಿ ತುಳಸಿಯ ಮಹತ್ವ ಮತ್ತು ತುಳಸಿಯಿಂದ ಸಿಗುವ ಪ್ರಯೋಜನಗಳ ಬಗ್ಗೆ ಭೌದ್ಧಿಕ ನೀಡಿದರು.

ಶಾಖೆಯ ಸಹಶಿಕ್ಷಕ ಸುಕೇಶ್, ವರದಿ ಪ್ರಮುಖ ಕೇಶವ, ಶಾಖೆಯ ಸಂಚಾಲಕ ವಿಜಯಣ್ಣ,ಸತೀಶ್, ಅಶೋಕ, ವಸಂತ ಉಪಸ್ಥಿತರಿದ್ದರು.
ಭಾರತಿ, ಪದ್ಮಲತಾ, ಅರುಣಕ್ಕ ತುಳಸಿ ಪೂಜೆಯನ್ನು ನೆರವೇರಿಸಿ ಪೂಜಾ ಪ್ರಸಾದ ವಿತರಿಸಲಾಯಿತು. ಶಾಖೆಯ ಯೋಗ ಬಂಧುಗಳ ಸಹಕಾರದಿಂದ ಅಮೃತ ಫಲಾಹಾರವನ್ನು ಜೋಡಿಸಲಾಗಿತ್ತು.

Related posts

ಬೆಳ್ತಂಗಡಿ ತ್ರಿ ಸ್ಟಾರ್ ವೈನ್ಸ್ ಶಾಪ್ ಮತ್ತು ಉಜಿರೆಯ ಮೊಬೈಲ್ ಶಾಪ್ ಕಳ್ಳತನ ಪ್ರಕರಣ: ಅಪ್ರಾಪ್ತ ಬಾಲಕ ಸೇರಿ ಇಬ್ಬರು ಕುಂದಾಪುರದಲ್ಲಿ ವಶಕ್ಕೆ

Suddi Udaya

ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ

Suddi Udaya

ಇಂದಬೆಟ್ಟು : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೊಲೆರೋ

Suddi Udaya

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.13 ಡಿವಿಡೆಂಡ್

Suddi Udaya

ಮದುವೆ ಜೌತಣ ಕೂಟ: ಊಟ ಮಾಡಿದ ಹಲವು ಮಂದಿ ಅಸ್ವಸ್ಥ ಪ್ರಕರಣ : ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ತಂಡ ಭೇಟಿ

Suddi Udaya

ನಾಲ್ಕೂರು:ಪಿಯುಸಿಯಲ್ಲಿ ಉನ್ನತ ಶ್ರೇಣಿಯೊಂದಿಗೆ ಉತ್ತೀರ್ಣರಾದ ಪ್ರಾಣೇಶ್ ಶೆಟ್ಟಿಯವರಿಗೆ ಸನ್ಮಾನ

Suddi Udaya
error: Content is protected !!