22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ: ಕುದ್ರಡ್ಕದಲ್ಲಿ ಮೂವರು ಮಕ್ಕಳಿಗೆ ಹಾವು ಕಡಿತ

ಬೆಳ್ತಂಗಡಿ: ಒಂದೇ ಮನೆಯೊಳಗೆ ಮಲಗಿದ್ದ ಮೂವರು ಮಕ್ಕಳಿಗೆ ವಿಷಪೂರಿತ ಕನ್ನಡಿ ಹಾವೊಂದು ಕಡಿದ ಘಟನೆ ನ.2ರಂದು ತಾಲೂಕಿನ ತಣ್ಣೀರುಪಂತ ಸಮೀಪದ ಕುದ್ರಡ್ಕದಲ್ಲಿ ಸಂಭವಿಸಿದೆ. ಗ್ರಾಮೀಣ ಭಾಗವಾಗಿದ್ದು ತಡರಾತ್ರಿ ಆಸ್ಪತ್ರೆಗೆ ಕರೆದೊಯ್ಯಲು ಯಾವುದೇ ವಾಹನ ಸಿಗದಿದ್ದಾಗ ನಾಟಿವೈದ್ಯರೊಬ್ಬರ ಸಕಾಲಿಕ ನೆರವಿನಿಂದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕುದ್ರಡ್ಕ ನಿವಾಸಿ ವಿಜಯ ಮಡೆಕ್ಕಿಲ ಅವರ ಮಗ ದಕ್ಷಿತ್ ಮತ್ತು ಅಕ್ಕನ ಮಕ್ಕಳಾದ ವಿಶ್ಮಿತಾ ಹಾಗೂ ಅನ್ವಿತಾ ಒಂದೇ ಕೋಣೆಯಲ್ಲಿ ಮಲಗಿದ್ದು, ರಾತ್ರಿ 11.30ರ ಸುಮಾರಿಗೆ ಕೋಣೆಯೊಳಗೆ ಪ್ರವೇಶಿಸಿದ ವಿಷಪೂರಿತ ಕನ್ನಡಿ ಹಾವು ದಕ್ಷಿತ್ ನ ಎರಡೂ ಕೈಗಳಿಗೆ ಕಚ್ಚಿತು. ಬಳಿಕ ವಿಶ್ಮಿತಾ ಹಾಗೂ ಅನ್ವಿತಾ ಅವರ ಕೈಗೂ ಕಚ್ಚಿದ್ದು ಮಕ್ಕಳು ಭೀತಿಯಿಂದ ಕಂಗೆಟ್ಟಿದ್ದರು.

ಮಕ್ಕಳನ್ನು ತ್ವರಿತವಾಗಿ ಆಸ್ಪತ್ರೆಗೆ ಕರೆದೊಯ್ಯುವ ಅನಿವಾರ್ಯ ಇದ್ದರೂ ಉಪ್ಪಿನಂಗಡಿಯನ್ನು ಸಂಪರ್ಕಿಸುವ ಗುರುವಾಯನಕೆರೆ ಉಪ್ಪಿನಂಗಡಿ ರಸ್ತೆಯ ದುಃ ಸ್ಥಿತಿಯಿಂದಾಗಿ ಆಸ್ಪತ್ರೆ ತಲುಪುವುದು ವಿಳಂಬವಾಗಿ ಪ್ರಾಣಾಪಾಯವಾಗುವ ಸಾಧ್ಯತೆ ಇರುವುದರಿಂದ ಕಂಗೆಟ್ಟಮನೆಯವರು ತಣ್ಣೀರುಪಂತ ಗ್ರಾಮದಲ್ಲಿನ ನಾಟಿ ವೈದ್ಯ ಸೂರಪ್ಪ ಪೂಜಾರಿ ಅವರ ಮನೆ ಬಾಗಿಲು ತಟ್ಟಿದ್ದರು. ಮಧ್ಯರಾತ್ರಿ ಹಾವು ಕಡಿತಕ್ಕೊಳಗಾಗಿ ಮನೆಗೆ ಬಂದ ಮೂವರು ಮಕ್ಕಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ನಾಟಿವೈದ್ಯ ಸೂರಪ್ಪ ಪೂಜಾರಿ (77) ಅವರು ತಾವು ಪರಂಪರಾಗತವಾಗಿ ಅರಿತುಕೊಂಡಿರುವ ಔಷಧವನ್ನು ಮಕ್ಕಳಿಗೆ ನೀಡಿ ಅಪಾಯದಿಂದ ಪಾರು ಮಾಡಿದ್ದಾರೆ.

Related posts

ಕುತ್ಲೂರು: ದರ್ಖಾಸು ಮನೆಯ ಶ್ರೀಮತಿ ಅಪ್ಪಿ ನಿಧನ

Suddi Udaya

ಬೆಳ್ತಂಗಡಿ ಜೆಪಿ ಅಟ್ಟಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಮರೋಡಿ: ಜ.27 ರಂದು ಅಂಬ್ಯುಲೆನ್ಸ್ ಲೋಕಾರ್ಪಣೆ

Suddi Udaya

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರವರಿಗೆ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಶ್ರದ್ಧಾಂಜಲಿ ಅರ್ಪಣೆ

Suddi Udaya

ಪೊಸಂದೋಡಿ ಹರಿಕೃಪಾ ಪಿ. ದುಗ್ಗಪ್ಪ ಗೌಡ ಮತ್ತು ಶ್ರೀಮತಿ ಜಾಜೀವಿಯವರ ವೈವಾಹಿಕ ಜೀವನದ ‘ ಸುವರ್ಣ ಸಂಭ್ರಮ’: ಆದಿಚುಂಚನಗಿರಿ ಶಾಖಾ ಮಠಾ ಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಂದ ಆಶೀರ್ವಚನ

Suddi Udaya
error: Content is protected !!