25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ: ಕುದ್ರಡ್ಕದಲ್ಲಿ ಮೂವರು ಮಕ್ಕಳಿಗೆ ಹಾವು ಕಡಿತ

ಬೆಳ್ತಂಗಡಿ: ಒಂದೇ ಮನೆಯೊಳಗೆ ಮಲಗಿದ್ದ ಮೂವರು ಮಕ್ಕಳಿಗೆ ವಿಷಪೂರಿತ ಕನ್ನಡಿ ಹಾವೊಂದು ಕಡಿದ ಘಟನೆ ನ.2ರಂದು ತಾಲೂಕಿನ ತಣ್ಣೀರುಪಂತ ಸಮೀಪದ ಕುದ್ರಡ್ಕದಲ್ಲಿ ಸಂಭವಿಸಿದೆ. ಗ್ರಾಮೀಣ ಭಾಗವಾಗಿದ್ದು ತಡರಾತ್ರಿ ಆಸ್ಪತ್ರೆಗೆ ಕರೆದೊಯ್ಯಲು ಯಾವುದೇ ವಾಹನ ಸಿಗದಿದ್ದಾಗ ನಾಟಿವೈದ್ಯರೊಬ್ಬರ ಸಕಾಲಿಕ ನೆರವಿನಿಂದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕುದ್ರಡ್ಕ ನಿವಾಸಿ ವಿಜಯ ಮಡೆಕ್ಕಿಲ ಅವರ ಮಗ ದಕ್ಷಿತ್ ಮತ್ತು ಅಕ್ಕನ ಮಕ್ಕಳಾದ ವಿಶ್ಮಿತಾ ಹಾಗೂ ಅನ್ವಿತಾ ಒಂದೇ ಕೋಣೆಯಲ್ಲಿ ಮಲಗಿದ್ದು, ರಾತ್ರಿ 11.30ರ ಸುಮಾರಿಗೆ ಕೋಣೆಯೊಳಗೆ ಪ್ರವೇಶಿಸಿದ ವಿಷಪೂರಿತ ಕನ್ನಡಿ ಹಾವು ದಕ್ಷಿತ್ ನ ಎರಡೂ ಕೈಗಳಿಗೆ ಕಚ್ಚಿತು. ಬಳಿಕ ವಿಶ್ಮಿತಾ ಹಾಗೂ ಅನ್ವಿತಾ ಅವರ ಕೈಗೂ ಕಚ್ಚಿದ್ದು ಮಕ್ಕಳು ಭೀತಿಯಿಂದ ಕಂಗೆಟ್ಟಿದ್ದರು.

ಮಕ್ಕಳನ್ನು ತ್ವರಿತವಾಗಿ ಆಸ್ಪತ್ರೆಗೆ ಕರೆದೊಯ್ಯುವ ಅನಿವಾರ್ಯ ಇದ್ದರೂ ಉಪ್ಪಿನಂಗಡಿಯನ್ನು ಸಂಪರ್ಕಿಸುವ ಗುರುವಾಯನಕೆರೆ ಉಪ್ಪಿನಂಗಡಿ ರಸ್ತೆಯ ದುಃ ಸ್ಥಿತಿಯಿಂದಾಗಿ ಆಸ್ಪತ್ರೆ ತಲುಪುವುದು ವಿಳಂಬವಾಗಿ ಪ್ರಾಣಾಪಾಯವಾಗುವ ಸಾಧ್ಯತೆ ಇರುವುದರಿಂದ ಕಂಗೆಟ್ಟಮನೆಯವರು ತಣ್ಣೀರುಪಂತ ಗ್ರಾಮದಲ್ಲಿನ ನಾಟಿ ವೈದ್ಯ ಸೂರಪ್ಪ ಪೂಜಾರಿ ಅವರ ಮನೆ ಬಾಗಿಲು ತಟ್ಟಿದ್ದರು. ಮಧ್ಯರಾತ್ರಿ ಹಾವು ಕಡಿತಕ್ಕೊಳಗಾಗಿ ಮನೆಗೆ ಬಂದ ಮೂವರು ಮಕ್ಕಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ನಾಟಿವೈದ್ಯ ಸೂರಪ್ಪ ಪೂಜಾರಿ (77) ಅವರು ತಾವು ಪರಂಪರಾಗತವಾಗಿ ಅರಿತುಕೊಂಡಿರುವ ಔಷಧವನ್ನು ಮಕ್ಕಳಿಗೆ ನೀಡಿ ಅಪಾಯದಿಂದ ಪಾರು ಮಾಡಿದ್ದಾರೆ.

Related posts

ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆ ಮತ್ತು ಸೇವಾಭಾರತಿಯಿಂದ 2025 ರ “ಸೇವಾ ಶ್ರೇಷ್ಠ” ಪುರಸ್ಕಾರ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಂ ಭೇಟಿ

Suddi Udaya

ಬೆಳ್ತಂಗಡಿ: ಮಾತೃ ವೃಂದ ಶಿಶುಪಾಲನ ಕೇಂದ್ರ ಉದ್ಘಾಟನೆ

Suddi Udaya

ಕೇಳ ಪಂಚಲಿಂಗೇಶ್ವರ ದೇವಸ್ಥಾನ ಶಿಲಾನ್ಯಾಸ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪುದುವೆಟ್ಟು ಶಾಂತ್ಯಾಯ ಶ್ರೀ ಮಹಾಗಣಪತಿ ಭಜನಾಮಂದಿರದ ಅನ್ನಛತ್ರ ಕಟ್ಟಡದ ಕಾಮಗಾರಿಗೆ ರೂ. 1ಲಕ್ಷ ಮಂಜೂರು

Suddi Udaya
error: Content is protected !!