24 C
ಪುತ್ತೂರು, ಬೆಳ್ತಂಗಡಿ
June 8, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ: ಕುದ್ರಡ್ಕದಲ್ಲಿ ಮೂವರು ಮಕ್ಕಳಿಗೆ ಹಾವು ಕಡಿತ

ಬೆಳ್ತಂಗಡಿ: ಒಂದೇ ಮನೆಯೊಳಗೆ ಮಲಗಿದ್ದ ಮೂವರು ಮಕ್ಕಳಿಗೆ ವಿಷಪೂರಿತ ಕನ್ನಡಿ ಹಾವೊಂದು ಕಡಿದ ಘಟನೆ ನ.2ರಂದು ತಾಲೂಕಿನ ತಣ್ಣೀರುಪಂತ ಸಮೀಪದ ಕುದ್ರಡ್ಕದಲ್ಲಿ ಸಂಭವಿಸಿದೆ. ಗ್ರಾಮೀಣ ಭಾಗವಾಗಿದ್ದು ತಡರಾತ್ರಿ ಆಸ್ಪತ್ರೆಗೆ ಕರೆದೊಯ್ಯಲು ಯಾವುದೇ ವಾಹನ ಸಿಗದಿದ್ದಾಗ ನಾಟಿವೈದ್ಯರೊಬ್ಬರ ಸಕಾಲಿಕ ನೆರವಿನಿಂದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕುದ್ರಡ್ಕ ನಿವಾಸಿ ವಿಜಯ ಮಡೆಕ್ಕಿಲ ಅವರ ಮಗ ದಕ್ಷಿತ್ ಮತ್ತು ಅಕ್ಕನ ಮಕ್ಕಳಾದ ವಿಶ್ಮಿತಾ ಹಾಗೂ ಅನ್ವಿತಾ ಒಂದೇ ಕೋಣೆಯಲ್ಲಿ ಮಲಗಿದ್ದು, ರಾತ್ರಿ 11.30ರ ಸುಮಾರಿಗೆ ಕೋಣೆಯೊಳಗೆ ಪ್ರವೇಶಿಸಿದ ವಿಷಪೂರಿತ ಕನ್ನಡಿ ಹಾವು ದಕ್ಷಿತ್ ನ ಎರಡೂ ಕೈಗಳಿಗೆ ಕಚ್ಚಿತು. ಬಳಿಕ ವಿಶ್ಮಿತಾ ಹಾಗೂ ಅನ್ವಿತಾ ಅವರ ಕೈಗೂ ಕಚ್ಚಿದ್ದು ಮಕ್ಕಳು ಭೀತಿಯಿಂದ ಕಂಗೆಟ್ಟಿದ್ದರು.

ಮಕ್ಕಳನ್ನು ತ್ವರಿತವಾಗಿ ಆಸ್ಪತ್ರೆಗೆ ಕರೆದೊಯ್ಯುವ ಅನಿವಾರ್ಯ ಇದ್ದರೂ ಉಪ್ಪಿನಂಗಡಿಯನ್ನು ಸಂಪರ್ಕಿಸುವ ಗುರುವಾಯನಕೆರೆ ಉಪ್ಪಿನಂಗಡಿ ರಸ್ತೆಯ ದುಃ ಸ್ಥಿತಿಯಿಂದಾಗಿ ಆಸ್ಪತ್ರೆ ತಲುಪುವುದು ವಿಳಂಬವಾಗಿ ಪ್ರಾಣಾಪಾಯವಾಗುವ ಸಾಧ್ಯತೆ ಇರುವುದರಿಂದ ಕಂಗೆಟ್ಟಮನೆಯವರು ತಣ್ಣೀರುಪಂತ ಗ್ರಾಮದಲ್ಲಿನ ನಾಟಿ ವೈದ್ಯ ಸೂರಪ್ಪ ಪೂಜಾರಿ ಅವರ ಮನೆ ಬಾಗಿಲು ತಟ್ಟಿದ್ದರು. ಮಧ್ಯರಾತ್ರಿ ಹಾವು ಕಡಿತಕ್ಕೊಳಗಾಗಿ ಮನೆಗೆ ಬಂದ ಮೂವರು ಮಕ್ಕಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ನಾಟಿವೈದ್ಯ ಸೂರಪ್ಪ ಪೂಜಾರಿ (77) ಅವರು ತಾವು ಪರಂಪರಾಗತವಾಗಿ ಅರಿತುಕೊಂಡಿರುವ ಔಷಧವನ್ನು ಮಕ್ಕಳಿಗೆ ನೀಡಿ ಅಪಾಯದಿಂದ ಪಾರು ಮಾಡಿದ್ದಾರೆ.

Related posts

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ ಬೆಳ್ಳಿಹಬ್ಬದ ಆಚರಣೆಯ ಸಮಾಲೋಚನ ಸಭೆ

Suddi Udaya

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಒತ್ತಾಯ: ಸೆ.3: ಬೆಳ್ತಂಗಡಿಯಲ್ಲಿ ಪ್ರಜಾಪ್ರಭುತ್ವ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಮಾಳಿಗೆ ಪ್ರದೇಶಕ್ಕೆ ವಿದ್ಯುತ್ ಸಂಪರ್ಕ ಶಾಸಕರಿಂದ ಆಗಿದೆಯೇ; ಅಳದಂಗಡಿ ಜನಸ್ಪಂದನ ಸಭೆಯಲ್ಲಿ ಶಾಸಕರಿಗೆ ಗ್ರಾಮಸ್ಥರ ಪ್ರಶ್ನೆ

Suddi Udaya

ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ, ಮತ್ತು ಎಸ್.ಡಿ.ಎಂ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಜಂಟಿ ಆಶ್ರಯ:ಬೆಳ್ತಂಗಡಿ ಸಂತಕಟ್ಟೆ ಮತ್ತು ಬಸ್ ನಿಲ್ದಾಣದ ಬಳಿ ಮತದಾನ ಜಾಗೃತಿ ಬೀದಿ ನಾಟಕ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್‌ ಅಕೌಂಟಿಂಗ್‌ ತರಬೇತಿಯ ಸಮಾರೋಪ ಸಮಾರಂಭ

Suddi Udaya

ರೈತರ ಕೃಷಿ ಪಂಪು ಸೆಟ್ ಸ್ಥಾವರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya
error: Content is protected !!