25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನ 27: ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಅಕ್ಷರೋತ್ಸವ-ರಾಷ್ಟ್ರ ಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ

ಗುರುವಾಯನಕೆರೆ: ಎಕ್ಸೆಲ್ ಸಮೂಹ ವಿದ್ಯಾ ಸಂಸ್ಥೆಗಳ ವತಿಯಿಂದ ಪ್ರತಿ ವರ್ಷ ಹಮ್ಮಿಕೊಳ್ಳುವ ಪ್ರತಿಷ್ಠಿತ ಎಕ್ಸೆಲ್ ಅಕ್ಷರೋತ್ಸವ ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ ಹಾಗೂ ಆಮಂತ್ರಣ ಸಾಂಸ್ಕೃತಿಕ – ಸಾಹಿತ್ಯ ವೇದಿಕೆಯ ದಶಮಾನೋತ್ಸವ ಜೊತೆಯಾಗಿ ಈ ಬಾರಿ ನ.27ರಂದು ಗುರುವಾಯನಕೆರೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆವರಣದಲ್ಲಿ ಸಂಪನ್ನಗೊಳ್ಳಲಿದೆ.

ಈ ಸಂದರ್ಭದಲ್ಲಿ ರಾಷ್ಟ್ರ ಮಟ್ಟದ ಕನ್ನಡ ಕವಿಗೋಷ್ಠಿ ನಡೆಯಲಿದೆ.ಆಯ್ದ ಕವಿಗಳ ಕವಿತೆಗಳಿಗೆ ರಾಗ ಸಂಯೋಜನೆ ಮಾಡಿ, ಕವನ ವಾಚನ – ಗಾಯನ – ನೃತ್ಯ – ಕುಂಚ ಪರಿಕಲ್ಪನೆಯಲ್ಲಿ ಗೋಷ್ಠಿ ನಡೆಯಲಿದೆ .
ಕವಿತೆಗಳು ಕನ್ನಡ ಭಾಷೆಯಲ್ಲಿ ಇರಬೇಕು. ಕವಿತೆಗೆ ವಸ್ತು ನಿರ್ಬಂಧವಿಲ್ಲ. ಕವಿಗೋಷ್ಠಿಗೆ ಆಯ್ಕೆಯಾದ ಕವಿಗಳಿಗೆ ಸ್ಮರಣಿಕೆ, ಪ್ರಮಾಣ ಪತ್ರ, ಗ್ರಂಥ ಗೌರವ ಹಾಗೂ ಊಟೋಪಚಾರ ಮತ್ತು ಬಸ್ಸಿನ ಪ್ರಯಾಣ ವೆಚ್ಚವನ್ನು ನೀಡಲಾಗುವುದು.

ಕವಿಗೋಷ್ಠಿಗೆ ಆಯ್ಕೆಯಾಗುವ ಮತ್ತು ಯೋಗ್ಯವೆನಿಸಿದ ಆಯ್ದ ಕವಿತೆಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಿ, ಸಮಾರಂಭದಲ್ಲಿ ಲೋಕಾರ್ಪಣೆ ಮಾಡಲಾಗುವುದು. ಆಸಕ್ತ ಕವಿಗಳು ತಮ್ಮ ಕವಿತೆಗಳನ್ನು ಪ್ರಾಂಶುಪಾಲರು ಎಕ್ಸೆಲ್ ಪದವಿ ಪೂರ್ವ ಕಾಲೇಜು,
ವಿದ್ಯಾ ಸಾಗರ ಕ್ಯಾಂಪಸ್,ಕುವೆಟ್ಟು ಗ್ರಾಮ, ಗುರುವಾಯನಕೆರೆ-574217 ಈ ವಿಳಾಸಕ್ಕೆ ಅಥವಾ ಮಿಂಚಂಚೆ [email protected] ಗೆ ಕಳುಹಿಸಿಕೊಡಬಹುದು.

ದೇಶದ ಯಾವುದೇ ಭಾಗದವರು ಕವಿಗೋಷ್ಠಿಯಲ್ಲಿ ಪಾಲ್ಗೊಳ್ಳಬಹುದು. ಲಕೋಟೆಯ ಮೇಲೆ ಎಕ್ಸೆಲ್ ಅಕ್ಷರೋತ್ಸವ – 2025 ಎಂದು ಸ್ಪಷ್ಟವಾಗಿ ನಮೂದಿಸಿರಬೇಕು.
ಆಯ್ಕೆಯಾದ ಕವಿಗಳಿಗೆ ಸಂಸ್ಥೆಯ ಕಡೆಯಿಂದ ಪ್ರತ್ಯೇಕ ಕರೆ ಬರುತ್ತದೆ. ಈ ಬಗ್ಗೆ ಯಾರನ್ನೂ ಸಂಪರ್ಕಿಸಬೇಕಾದ ಅವಶ್ಯಕತೆಯಿಲ್ಲ ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಶಿಶಿಲ: ನಾಗನಡ್ಕದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ: ಆಸ್ಪತ್ರೆಗೆ ದಾಖಲಿಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಕೆಸರು ಗದ್ದೆಯಾದ ನ್ಯಾಯತರ್ಪು ಹಾಕೋಟೆ ರಸ್ತೆ

Suddi Udaya

ಮೇಲಂತಬೆಟ್ಟು ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವದ ಪ್ರಯುಕ್ತ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅತ್ಯುತ್ತಮ ಸಾಧನೆ-ಪ್ರಸಕ್ತ ಸಾಲಿನಲ್ಲಿ ರೂ 326 ಕೋಟಿ ಠೇವಣಿ,ರೂ.269 ಕೋಟಿ ಸಾಲ,ರೂ.70 ಕೋಟಿ ಹೂಡಿಕೆ,ರೂ.5.85 ಕೋಟಿ ಲಾಭ

Suddi Udaya

ಎಸ್ ಪಿ ವೈ ಎಸ್ ಎಸ್ ನಿಂದ ಮಾತೃವಂದನ, ಮಾತೃಧ್ಯಾನ, ಮಾತೃ ಭೋಜನ ಕಾರ್ಯಕ್ರಮ

Suddi Udaya

ನಾವೂರು ಮೂಲ್ಯರ ಯಾನೆ ಕುಲಾಲರ ಸಂಘ ಮತ್ತು ಕುಲಾಲರ ಕ್ರೀಡಾ ಕೂಟ ಸಮಿತಿ ಆಶ್ರಯದಲ್ಲಿ ವಲಯ ಮಟ್ಟದ ಸ್ವಜಾತಿ ಬಾಂಧವರ ಕ್ರೀಡಾಕೂಟ

Suddi Udaya
error: Content is protected !!