37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರೀ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪೊಸಲಾಯಿ ಆಯ್ಕೆ

ಬೆಳ್ತಂಗಡಿ : ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ 2025 – 26 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಇತ್ತೀಚೆಗೆ ನಡೆದ ಮಹಾಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪೊಸಲಾಯಿ, ಉಪಾಧ್ಯಕ್ಷರುಗಳಾಗಿ ಆನಂದ ಹೆಗ್ಡೆ ಹಾಗೂ ಸುರೇಶ್ ಆಚಾರ್, ಕಾರ್ಯದರ್ಶಿಯಾಗಿ ಗಣೇಶ್ ಮೆಸ್ಕಾಂ, ಜೊತೆ ಕಾರ್ಯದರ್ಶಿಯಾಗಿ ಆನಂದ ದೇವಾಡಿಗ, ಕೋಶಾಧಿಕಾರಿಯಾಗಿ ಎಂ. ಡಿ ಸಂಜೀವ ಇವರುಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಕೃಷ್ಣಕುಮಾರ್ ಐತಾಳ್ , ಜಗನ್ನಾಥ, ಹರಿದಾಸ್ ಕೆ, ಸದಾಶಿವ ಶೆಟ್ಟಿ,ಯೋಗೀಶ, ವೆಂಕಟರಮಣ ಆಚಾರ್, ಸಲಹೆಗಾರರುಗಳಾಗಿ ವಿಜಯಕುಮಾರ್, ಪದ್ಮ ಕುಮಾರ್ ಎಚ್ , ಕೃಷ್ಣ ಕೆ, ರವಿಚಂದ್ರ ಭಟ್, ರವೀಂದ್ರ ಗೌಡ ಇವರುಗಳನ್ನು ಆಯ್ಕೆ ಮಾಡಲಾಯಿತು.

ಸಮಿತಿಯ ಪ್ರಧಾನ ಸಂಚಾಲಕರಾಗಿ ಡಾ| ಕೆ. ಜಿ. ಪಣಿಕ್ಕರ್ ಸಂಚಾಲಕರುಗಳಾಗಿ ಆನಂದ ಶೆಟ್ಟಿ ಕೆ.ಎನ್ , ಗಣೇಶ್ ಐತಾಳ್ , ಅನಂತಕೃಷ್ಣ , ಸುರೇಶ್ ಶೆಟ್ಟಿ ಲಾಯಿಲ, ಉದಯಕುಮಾರ್ ಲಾಯಿಲ ಇವರುಗಳನ್ನು ಮುಂದುವರಿಸಲಾಯಿತು.
ವಿಜಯ್ ಕುಮಾರ್ ಸ್ವಾಗತಿಸಿದರು. ಅನಂತ ಕೃಷ್ಣರವರು ಕಳೆದ ಸಾಲಿನ ಲೆಕ್ಕಪತ್ರ ಮಂಡಿಸಿ, ಧನ್ಯವಾದ ಸಮರ್ಪಿಸಿದರು.

Related posts

ಶಿಶಿಲ ಗ್ರಾ.ಪಂ. ಅಧ್ಯಕ್ಷರಾಗಿ ಸುಧೀನ್, ಉಪಾಧ್ಯಕ್ಷರಾಗಿ ಯತೀಶ್ ಆಯ್ಕೆ

Suddi Udaya

ಕರು ಕೊಂದ ಚಿರತೆಯ ಸೆರೆ ಕಾರ್ಯ ಆರಂಭಿಸಿದ ಅರಣ್ಯ ಇಲಾಖೆ

Suddi Udaya

ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯಿಂದ ಆತ್ಮ ಯೋಜನೆಯಡಿ ರೈತರ ಅಧ್ಯಯನ ಪ್ರವಾಸ

Suddi Udaya

ಅ.15 : ಚರ್ಚ್ ರೋಡ್ ಬಳಿ ನೂತನ ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ರಸ್ತೆ ಬದಿಯಲ್ಲಿರುವ ರಾಶಿ ಗಟ್ಟಲೆ ಗುಜರಿ‌ ಸಾಮಾಗ್ರಿಯಲ್ಲಿ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ತಾಣವಾಗಿದೆ: ಡೆಂಗ್ಯೂ ಮಲೇರಿಯಾ ಇನ್ನಿತರ ರೋಗಗಳು ಹರಡುವ ಮುನ್ನ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ: ಸ್ಥಳ ಮಹಜರು ನಡೆಸಿ ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ ತಂಡ

Suddi Udaya
error: Content is protected !!